ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ (Arunachal Pradesh) ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಅಸ್ಸಾಂನ (Assam) ಆರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಪರಿಣಾಮ 22,000ಕ್ಕೂ ಅಧಿಕ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೊಂದೆಡೆ ರೈಲು ಸಂಚಾರಕ್ಕೂ ತೊಂದೆರೆಯುಂಟಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವರದಿಯ (Assam State Disaster Management Authority) ಪ್ರಕಾರ, ಧೇಮಾಜಿ, ನಲ್ಬಾರಿ, ದಿಬ್ರುಗಢ್, ಚಿರಂಗ್, ಲಖಿಂಪುರ್ ಮತ್ತು ಕೊಕ್ರಾಜಾರ್ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿ ಹೋಗಿದ್ದು, ಸುಮಾರು 22,124 ಜನರು ಪರದಾಡುವಂತಾಗಿದೆ. ಇದರಲ್ಲಿ ಧೇಮಾಜಿ ಜಿಲ್ಲೆ ಹೆಚ್ಚು ಹಾನಿಗೊಳಗಾಗಿದ್ದು, ಸುಮಾರು 15,483 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಇದನ್ನೂ ಓದಿ:ನ ಮ್ಮ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಉತ್ತರ ಕೊಟ್ಟು ಎಸ್ಐಆರ್ ಮಾಡಲಿ: ಪ್ರಿಯಾಂಕ್ ಖರ್ಗೆ ಆಗ್ರಹ
ರೈಲು ಸಂಚಾರ ರದ್ದು:
ಪ್ರವಾಹದ ನೀರು ಹಳ್ಳಿಗಳು ಮತ್ತು ಕೃಷಿ ಭೂಮಿಯನ್ನು ಜಲಾವೃತಗೊಳಿಸಿದೆ. ಅಷ್ಟೇ ಅಲ್ಲದೇ ಪ್ರಮುಖ ರೈಲ್ವೆ ಸೇತುವೆಯೊಂದರ ಪಿಲ್ಲರ್ಗೆ ಹಾನಿಯಾಗಿದ್ದು, ಮುಂದಿನ ಸೂಚನೆವರೆಗೂ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಭೀಕರ ಪ್ರವಾಹ ಮತ್ತು ನದಿ ದಂಡೆಯ ಸವೆತದಿಂದಾಗಿ ಅರ್ಚಿಪಥರ್ ಮತ್ತು ಸಿಮೆನ್ ಚಾಪರಿ ನಿಲ್ದಾಣಗಳ ನಡುವಿನ ರೈಲ್ವೆ ಸೇತುವೆಯ ಪಿಲ್ಲರ್ವೊಂದು ದುರ್ಬಲಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಈಶಾನ್ಯ ಗಡಿ ರೈಲ್ವೆ (Northeast Frontier Railway) ವಕ್ತಾರರು ತಿಳಿಸಿದ್ದಾರೆ.ಇದನ್ನೂ ಓದಿ: ರಾಮ ಮಂದಿರ ದೇಣಿಗೆ ವಿವಾದ | ಏನ್ ಅಂಥಾ ಅರ್ಜೆಂಟು? – ತುರ್ತು ವಿಚಾರಣೆಗೆ ಸುಪ್ರೀಂ ನಕಾರ
ಈ ರೈಲ್ವೆ ಸೇತುವೆಯನ್ನು 1965ರಲ್ಲಿ ಕಟ್ಟಲಾಗಿತ್ತು. ಆನಂತರ ಇದನ್ನು ಬ್ರಾಡ್ ಗೇಜ್ ಆಗಿ ಬದಲಾಯಿಸಲಾಗಿತ್ತು. ಆ ತನಕ ಸೇತುವೆ ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಇದೀಗ ಭಾರಿ ಮಳೆಯಿಂದಾಗಿ ನದಿಯ ದಂಡೆ ಕೊಚ್ಚಿ ಹೋಗಿರುವುದರಿಂದ ಸೇತುವೆಯ ಒಂದು ಪಿಲ್ಲರ್ ದುರ್ಬಲಗೊಂಡು ಅಲುಗಾಡುವಂತಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
#WATCH | Assam: Due to torrential rains in Arunachal Pradesh, the swollen rivers are causing severe devastation in the Assam-Arunachal border areas of Jonai, Assam.
More than 100 villages have been submerged due to the flood. Farms, houses, roads and other properties have been… pic.twitter.com/OoTx4AQmgh
— ANI (@ANI) June 29, 2026
ಅದೃಷ್ಟವಶಾತ್ ಯಾವುದೇ ರೈಲಿಗೆ ಹಾನಿಯಾಗಿಲ್ಲ ಮತ್ತು ಯಾರಿಗೂ ಗಾಯಗಳಾಗಿಲ್ಲ. ಸದ್ಯಕ್ಕೆ ಮುರ್ಕೋಂಗ್ಸೆಲೆಕ್ ಮತ್ತು ಸಿಲಾಪಥರ್ ನಡುವಿನ ರೈಲು ಸಂಚಾರ ಸ್ಥಗಿತಗೊಳಿಸಿದ್ದು, ರೈಲುಗಳು ಸಿಲಾಪಥರ್ ನಿಲ್ದಾಣದವರೆಗಷ್ಟೇ ಸಂಚರಿಸಲಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬಸ್ಸುಗಳ ವ್ಯವಸ್ಥೆ ಮಾಡಿದ್ದು, ಧೇಮಾಜಿ, ಸಿಲಾಪಥರ್ ಮತ್ತು ಮುರ್ಕೋಂಗ್ಸೆಲೆಕ್ ನಿಲ್ದಾಣಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆದಿದೆ.ಇದನ್ನೂ ಓದಿ: ಪದೇ ಪದೇ ಬಾಂಬ್ ಬೆದರಿಕೆ – ಧಾರವಾಡ ಹೈಕೋರ್ಟ್ ಪೀಠಕ್ಕೆ ಭಾರೀ ಭದ್ರತೆ
ಹಳ್ಳಿಗಳು, ಬೆಳೆ ಮತ್ತು ಜಾನುವಾರುಗಳಿಗೆ ತೀವ್ರ ಹಾನಿ:
ಪ್ರವಾಹದ ಅಬ್ಬರಕ್ಕೆ ಒಟ್ಟು 96 ಹಳ್ಳಿಗಳು ಮುಳುಗಡೆಯಾಗಿದ್ದು, ಸುಮಾರು 1,690 ಹೆಕ್ಟೇರ್ ಕೃಷಿ ಭೂಮಿ ನಾಶವಾಗಿದೆ. ರೈತರ ಜೀವನಾಧಾರವಾಗಿದ್ದ 48,199 ಜಾನುವಾರುಗಳು ಕೂಡ ಪ್ರವಾಹದಿಂದ ಸಂಕಷ್ಟಕ್ಕೆ ಈಡಾಗಿವೆ. ಬ್ರಹ್ಮಪುತ್ರ ಮತ್ತು ಅದರ ಉಪನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಶಿವಸಾಗರ್ ಜಿಲ್ಲೆಯ ನಾಂಗ್ಲಾಮುರಘಾಟ್ನಲ್ಲಿ ಡಿಸಾಂಗ್ ನದಿಯ ಅಬ್ಬರ ಜೋರಾಗಿದೆ. ಮಳೆ ಹೀಗೆಯೇ ಮುಂದುವರಿದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಆತಂಕ ಎದುರಾಗಿದೆ.
Since the flood situation has unfolded in Dhemaji, I’ve been closely monitoring the situation.
We are deeply saddened by the impact it has had on the lives of our people and in this difficult time, we firmly stand with them.
We are deploying a whole of government approach and… pic.twitter.com/4XJGzy0PFI
— Himanta Biswa Sarma (@himantabiswa) June 28, 2026
ನೆರವು ಮತ್ತು ಪುನರ್ವಸತಿಗೆ ಸಿಎಂ ಭರವಸೆ:
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಪ್ರವಾಹ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ತೊಂದರೆಗೊಳಗಾದ ಕುಟುಂಬಗಳಿಗೆ ತಕ್ಷಣದ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಧೇಮಾಜಿ ಸೇರಿದಂತೆ ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ನಾನು ಖುದ್ದಾಗಿ ನಿಗಾವಹಿಸುತ್ತಿದ್ದೇನೆ. ಸಂತ್ರಸ್ತರ ಸುರಕ್ಷತೆ ಮತ್ತು ದೀರ್ಘಕಾಲೀನ ಪುನರ್ವಸತಿಗಾಗಿ ಸರ್ಕಾರ ತನ್ನೆಲ್ಲಾ ಸಾಮರ್ಥ್ಯವನ್ನು ಬಳಸಿಕೊಳ್ಳುತ್ತಿದೆ ಎಂದು ಭರವಸೆ ನೀಡಿದ್ದಾರೆ.ಇದನ್ನೂ ಓದಿ: ಜಪ್ತಿ ಮಾಡಿದ್ದ ಮದ್ಯದ ಲೆಕ್ಕದಲ್ಲಿ ಭಾರೀ ವ್ಯತ್ಯಾಸ – ಅಬಕಾರಿ ಅಧಿಕಾರಿಗಳ ಮೇಲೆ ʻಲೋಕಾʼ ದಾಳಿ
