ರಾಯಚೂರು: ಕಲುಷಿತ ನೀರು (Contaminated Water) ಕುಡಿದು ಕಳೆದ ಒಂದು ವಾರದಿಂದ 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು (Lingasugur) ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ನಡೆದಿದೆ.
ಆಗಸ್ಟ್ 5ರಿಂದ ಗ್ರಾಮಸ್ಥರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ಕುಡಿಯುವ ನೀರಿನ ಪೈಪ್ಗೆ ಚರಂಡಿ ನೀರು (Sewage Water) ಸೇರಿದ ಪರಿಣಾಮ ಘಟನೆ ನಡೆದಿದೆ. ಫುಡ್ ಪಾಯಿಸನ್ (Food Poison) ಎಂದುಕೊಂಡು ಗ್ರಾಮದಲ್ಲೇ ಚಿಕಿತ್ಸೆ ಪಡೆದಿದ್ದ ಜನ ವಾಂತಿ, ಭೇದಿ, ಮೈಕೈ ನೋವಿನಿಂದ ಬಳಲುತ್ತಿದ್ದಾರೆ. ಲಿಂಗಸುಗೂರು ತಾಲೂಕಿನ ವಿವಿಧ ಆಸ್ಪತ್ರೆಗಳಿಗೆ 20 ಜನ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರ ಬಾಬು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇದನ್ನೂ ಓದಿ: ತಾನು ಸಾಕಿದ ಗುಂಡಾಗಳಿಂದ ನನ್ನ ಹತ್ಯೆಗೆ ಸಂಚು: ಭಗವಂತ ಖೂಬಾ ವಿರುದ್ಧ ಪ್ರಭು ಚವ್ಹಾಣ್ ಗಂಭೀರ ಆರೋಪ
ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲಿ ಬೀಡು ಬಿಟ್ಟಿದ್ದು, ಅಸ್ವಸ್ಥಗೊಂಡ ಗ್ರಾಮಸ್ಥರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಗ್ರಾಮಸ್ಥರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರ ಬಾಬು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಪತ್ತೆಯಾಗಿದ್ದು ಚಿರತೆಯಲ್ಲ, ಅದು ಕಿರುಬ ಬೆಕ್ಕು!
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]