ಹೊರಗೆ ಬರದಿದ್ರೆ ಕಾಲು ಮುರಿಯುತ್ತೇವೆ- SFI ಕಾರ್ಯಕರ್ತರಿಂದ ಪ್ರಾಂಶುಪಾಲರಿಗೆ ಧಮ್ಕಿ

Public TV
1 Min Read
SFI workers

ತಿರುವನಂತರಪುರಂ: ವಿದ್ಯಾರ್ಥಿಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇರೆಗೆ ತ್ರಿಶೂರ್ ಕಾಲೇಜಿನ (College) ಪ್ರಾಂಶುಪಾಲರಿಗೆ (Principal) ಸಿಪಿಐ(ಎಂ)ನ ವಿದ್ಯಾರ್ಥಿ ಘಟಕ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (SFI) ಕಾರ್ಯಕರ್ತರು ಬೆದರಿಕೆ ಹಾಕಿದ ಘಟನೆ ಕೇರಳದಲ್ಲಿ (Kerala) ನಡೆದಿದೆ.

ಕೇರಳದ ತ್ರಿಶೂರ್‌ನಲ್ಲಿರುವ ಮಹಾರಾಜಸ್ ಟೆಕ್ನಾಲಜಿಕಲ್ ಇನ್‍ಸ್ಟಿಟ್ಯೂಟ್‍ನಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಯೊಬ್ಬ (Student) ಮಿದುಳಿನ ಅನಾರೋಗ್ಯದಿಂದ ಬಳಲುತ್ತಿದ್ದ. ಈ ಹಿನ್ನೆಲೆಯಲ್ಲಿ ಧೂಳು ಹಾಗೂ ಸೂರ್ಯನ ಕಿರಣಗಳು ಬಿಳಬಾರದು ಎಂದು ವೈದ್ಯರು ಹೇಳಿದ್ದರು. ಇದರಿಂದಾಗಿ ಆ ವಿದ್ಯಾರ್ಥಿ ತಲೆಗೆ ಕ್ಯಾಪ್ ಧರಿಸಿದ್ದ. ಆದರೆ ಪ್ರಾಂಶುಪಾಲರು ಬಲವಂತವಾಗಿ ಕ್ಯಾಪ್‍ನ್ನು ತೆಗೆಸಿದ್ದಾರೆ.

ಇದರಿಂದ ಆಕ್ರೋಶಗೊಂಡ ಎಸ್‍ಎಫ್‍ಐ ಕಾರ್ಯಕರ್ತರು ಪ್ರಾಂಶುಪಾಲರ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಅಷ್ಟೇ ಅಲ್ಲದೇ ಜಿಲ್ಲಾ ಕಾರ್ಯದರ್ಶಿ ಹಸನ್ ಮುಬಾರಕ್ ಹಾಗೂ ಅಲ್ಲಿ ಇದ್ದ ಎಸ್‍ಎಫ್‍ಐ ಕಾರ್ಯಕರ್ತರು ಮಾತನಾಡಿ, ಪ್ರಾಶುಪಾಲರಿಗೆ ಹೊರಗೆ ಬರದಿದ್ದರೇ ಕಾಲು ಮುರಿಯುವುದಾಗಿ ಬೆದರಿಕೆ ಹಾಕಿದರು. ಇದನ್ನೂ ಓದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್‌ಗೆ ಇಡಿ ಸಂಕಷ್ಟ- ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

ಘಟನೆಗೆ ಸಂಬಂಧಿಸಿ ಪ್ರಾಂಶುಪಾಲ ಪಿ.ದಿಲೀಪ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆಯೆಲ್ಲವೂ ಸಿಸಿ ಕ್ಯಾಮರಾ ದೃಶ್ಯಾವಳಿಯಲ್ಲಿ ದಾಖಲಾಗಿದೆ. ಎಸ್‍ಎಫ್‍ಐನ ತ್ರಿಶೂರ್ ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿ ಎಸ್‍ಎಫ್‍ಐ ತ್ರಿಶೂರ್ ಜಿಲ್ಲಾ ಕಾರ್ಯದರ್ಶಿ ಫೇಸ್‍ಬುಕ್ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ʼನಮ್ಮ ಮೆಟ್ರೊʼದಿಂದ ಆನ್‌ಲೈನ್‌ ಟಿಕೆಟ್‌ ಲೋಕಾರ್ಪಣೆ – ಪ್ರಯಾಣಿಕರಿಂದ ಭರ್ಜರಿ ರೆಸ್ಪಾನ್ಸ್‌

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *