Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಕ್ಷಿಣದ ತಾರೆಯರನ್ನು ಹಾಡಿಹೊಗಳಿದ ಶಾರುಖ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ದಕ್ಷಿಣದ ತಾರೆಯರನ್ನು ಹಾಡಿಹೊಗಳಿದ ಶಾರುಖ್ ಖಾನ್

Bollywood

ದಕ್ಷಿಣದ ತಾರೆಯರನ್ನು ಹಾಡಿಹೊಗಳಿದ ಶಾರುಖ್ ಖಾನ್

Public TV
Last updated: May 9, 2023 9:05 am
Public TV
Share
2 Min Read
shahrukh khan 3
SHARE

ಪಠಾಣ್ ಚಿತ್ರದ ದೊಡ್ಡ ಯಶಸ್ಸಿನ ನಂತರ ಶಾರುಖ್ ಖಾನ್, ‘ಜವಾನ್’ (Jawaan) ಎಂಬ ಇನ್ನೊಂದು ಆಕ್ಷನ್ ಪ್ಯಾಕ್ಡ್ ಚಿತ್ರದ ಮೂಲಕ ವಾಪಸ್ಸಾಗುತ್ತಿದ್ದಾರೆ. ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲೊಂದಾದ ಜವಾನ್ ಚಿತ್ರವನ್ನು ತಮಿಳಿನಲ್ಲಿ ಮಾಸ್ ಚಿತ್ರಗಳಿಗೆ ಹೆಸರಾದ ಅಟ್ಲಿ ನಿರ್ದೇಶನ ಮಾಡಿದ್ದಾರೆ. ಜನ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟು, ಬಹಳ ಕುತೂಹಲದಿಂದ ಕಾಯುತ್ತಿರುವ ಈ ಚಿತ್ರವು ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ, ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯ ಪೋಸ್ಟರ್ ಬಿಡುಗಡೆಯಾಗಿದೆ.

shahrukh khan 1

ಜವಾನ್ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ, ಶಾರುಖ್ ಖಾನ್ (Shah Rukh Khan) ತಮ್ಮ ಅಭಿಮಾನಿಗಳೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಆಸ್ಕ್ ಎಸ್ಆರ್ಕೆ ಎಂಬ ಸಂವಾದ ನಡೆಸಿದ್ದಾರೆ. ಈ ಸಂವಾದದಲ್ಲಿ ಚಿತ್ರದ ಬಗ್ಗೆ ಹಲವು ವಿಷಯಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

Jawaan 2

ಜವಾನ್ ಚಿತ್ರದ ಬಿಡುಗಡೆ ತಡವಾಗಿದ್ದೇಕೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ‘ಒಂದೊಳ್ಳೆಯ ಚಿತ್ರ ಕೊಡುವುದಕ್ಕೆ ಸಮಯ ತೆಗೆದುಕೊಳ್ಳುತ್ತದೆ. ಪ್ರತಿಯೊಬ್ಬರೂ ಬ್ರೇಕ್ ತೆಗೆದುಕೊಳ್ಳದೆ ಕಷ್ಟಪಟ್ಟು ಮತ್ತು ತಮ್ಮ ಶಕ್ತಿಮೀರಿ ದುಡಿದಿದ್ದಾರೆ. ಅವರೆಲ್ಲರ ಪರಿಶ್ರಮದಿಂದ ಚಿತ್ರ ಬಹಳ ಚೆನ್ನಾಗಿ ಬಂದಿದೆ. ಚಿತ್ರ ಸ್ವಲ್ಪ ನಿಧಾನವಾದರೂ, ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ನಂಬಿಕೆ ನನಗಿದೆ’ ಎನ್ನುತ್ತಾರೆ ಶಾರುಖ್.

shahrukh khan 2

ತಮ್ಮ ಮಟ್ಟಿಗೆ ಇದೊಂದು ಹೊಸ ಜಾನರ್ ನ ಚಿತ್ರ ಎಂದಿರುವ ಶಾರುಖ್, ‘ಈ ಚಿತ್ರ ನಾನು ಒಪ್ಪಿಕೊಳ್ಳಲು ಕಾರಣವೇನು ಎಂದು ಬಹಳಷ್ಟು ಜನ ಕೇಳಿದ್ದಾರೆ. ಪ್ರಮುಖವಾಗಿ, ಈ ಮಾದರಿಯ ಚಿತ್ರ ನನಗೆ ಬಹಳ ಹೊಸದು. ಇನ್ನು, ಈ ಚಿತ್ರದಲ್ಲಿ ಅಭಿನಯಿಸುವುದಕ್ಕೆ ಅಟ್ಲಿ (Atlee) ಮತ್ತು ಅವರ ತಂಡ ಸಹ ಪ್ರಮುಖ ಕಾರಣ. ಕ್ಲಾಸ್ ಮತ್ತು ಮಾಸ್ ಅಂಶಗಳನ್ನು ಬೆರೆಸಿ ಕಥೆ ಹೇಳುವ ಅಟ್ಲಿ ಅವರ ಶೈಲಿ ನನಗೆ ಬಹಳ ಇಷ್ಟವಾಯ್ತು. ಈ ಎಲ್ಲ ಕಾರಣಗಳಿಂದ ಈ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡೆ ಎಂದು ಉತ್ತರಿಸಿದ್ದಾರೆ ಶಾರುಖ್.

Vijay Sethupathi Tollywood Nayanthara Samantha Ruth Prabhu

ಇತ್ತೀಚೆಗೆ ಬಿಡುಗಡೆಯಾದ ಹೊಸ ಪೋಸ್ಟರ್ನಲ್ಲಿ ಶಾರುಖ್ ಮುಖ ಕಾಣುವುದೇ ಇಲ್ಲ. ಪೋಸ್ಟರ್ ನಿಂದ ಶಾರುಖ್ ಅವರನ್ನು ಚಿತ್ರತಂಡ ದೂರ ಇಟ್ಟಿದ್ದೇಕೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ‘ಚಿತ್ರಮಂದಿರಕ್ಕೆ ಜನರನ್ನು ಸೆಳೆಯಲು ನನ್ನ ಮುಖಕ್ಕಿಂತ ಹೆಸರೇ ಸಾಕು ಎಂದು ನಿರ್ಮಾಪಕರಿಗೆ ಅನಿಸಿರಬಹುದು. ಹಾಗಾಗಿ, ಪೋಸ್ಟರ್ ನಲ್ಲಿ ನನ್ನ ಮುಖ ತೋರಿಸಿಲ್ಲ’ ಎಂದಿದ್ದಾರೆ. ಇದನ್ನೂ ಓದಿ: The Kerala Story ಬಂದ್ಮೇಲೆ ಇಸ್ಲಾಂಗೆ 32 ಸಾವಿರ ಮಹಿಳೆಯರ ಮತಾಂತರ – ಗಂಭೀರ ಆರೋಪ

Samantha Nayanthara Vijay Sethupathi

ತಮ್ಮ ಸಹನಟರಾದ ನಯನತಾರಾ ಮತ್ತು ವಿಜಯ್ ಸೇತುಪತಿ ಅವರನ್ನು ಹಾಡಿಹೊಗಳಿರುವ ಕಿಂಗ್ ಖಾನ್, ‘ನಯನತಾರಾ (Nayanthara) ಒಬ್ಬ ಅದ್ಭುತ ನಟಿ. ಅವರೊಂದಿಗೆ ಕೆಲಸ ಮಾಡಿದ್ದು ಬಹಳ ಖುಷಿ ನೀಡಿತು. ಇನ್ನು, ವಿಜಯ್ ಸೇತುಪತಿ (Vijay Sethupathi) ಬಹಳ ಒಳ್ಳೆಯ ಮನುಷ್ಯ. ಒಬ್ಬ ಪ್ರತಿಭಾವಂತ ನಟ. ಅವರಿಂದ ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ’ ಎಂದು ಹೇಳಿದ್ದಾರೆ.

shahrukh khan 5

ತಮಿಳು ನಿರ್ದೇಶಕರು ಮತ್ತು ತಮಿಳು ತಂತ್ರಜ್ಞರ ಜೊತೆಗೆ ಕೆಲಸ ಮಾಡಿದ್ದರಿಂದ ತಮಿಳು ಕಲಿಯುವ ಅವಕಾಶವೇನಾದರೂ ಸಿಕ್ಕಿತಾ ಎಂದರೆ, ‘ಅಟ್ಲಿ ಮತ್ತು ಸಂಗೀತ ನಿರ್ದೇಶಕ ಅನಿರುದ್ಧ್, ಹಾಡಿನ ಕೆಲವು ತಮಿಳು ಸಾಲುಗಳಿಗೆ ಲಿಪ್ ಸಿಂಕ್ ಮಾಡಿಸಿದರು. ಅದು ಸರಿಯಾಗಿ ಬಂದಿದೆ ಎಂದು ಭಾವಿಸುತ್ತೇನೆ’ ಎಂದಿದ್ದಾರೆ. ಜವಾನ್ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಶಾರುಖ್ ಪತ್ನಿ ಗೌರಿ ಖಾನ್ ನಿರ್ಮಿಸಿದ್ದಾರೆ.

TAGGED:atleeJawaanNayantharaShah Rukh KhanVijay Sethupathiಅಟ್ಲಿಜವಾನ್ನಯನತಾರಾವಿಜಯ್ ಸೇತುಪತಿಶಾರುಖ್ ಖಾನ್
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

DK Shivakumar and delegation
Bengaluru City

ಲೋಪದೋಷ ಸರಿಪಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಡಿಕೆಶಿ ನೇತೃತ್ವದ ನಿಯೋಗ ಮನವಿ

Public TV
By Public TV
11 minutes ago
Suryakumar Yadav
Cricket

ಭಾರತ – ಪಾಕಿಸ್ತಾನ ಮಧ್ಯೆ ಮತ್ತೆ ಅಮೆರಿಕ!

Public TV
By Public TV
31 minutes ago
PHAKEERA ARREST
Crime

ದಾವಣಗೆರೆ | 28 ವರ್ಷದ ಹಿಂದೆ ಟಿವಿ ಕದ್ದು ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌!

Public TV
By Public TV
35 minutes ago
Prahlad Joshi
Latest

ಭಾರತದಲ್ಲಿ ಹಸಿರು ಹೈಡ್ರೋಜನ್ ಬೆಲೆ ಐತಿಹಾಸಿಕ ಮಟ್ಟಕ್ಕೆ ಇಳಿಕೆ – ಪ್ರಹ್ಲಾದ್ ಜೋಶಿ

Public TV
By Public TV
1 hour ago
Catherine Vautrin
Bengaluru City

ಬೆಂಗಳೂರಿಗೆ ಆಗಮಿಸಿದ ಫ್ರಾನ್ಸ್‌ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್

Public TV
By Public TV
1 hour ago
h d thammaiah
Bengaluru City

ನಾನು ರೈತನ ಮಗ, ಕೃಷಿ ಅಧ್ಯಯನಕ್ಕೆ ವಿದೇಶ ಪ್ರವಾಸಕ್ಕೆ ಹೋಗ್ತಿದ್ದೇನೆ: ತಮ್ಮಯ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?