ಮುಂಬೈ: ಶಾಹಿದ್ ಕಪೂರ್ ನಟನೆಯ ಈ ವರ್ಷದ ಬಹು ನಿರೀಕ್ಷಿತ ಚಿತ್ರ ‘ಪದ್ಮಾವತಿ’ ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ. ಆದರೆ ಶಾಹಿದ್ ನಟನೆಯ ಮುಂದಿನ ಚಿತ್ರದ ಟೈಟಲ್ ಇಂದು ಘೋಷಣೆಯಾಗಿದ್ದು, ಭಾರೀ ನಿರೀಕ್ಷೆ ಹುಟ್ಟಿಸಿದೆ.
ಟಾಯ್ಲೆಟ್- ಏಕ್ ಪ್ರೇಮ್ ಕಥಾ ಚಿತ್ರದ ನಿರ್ದೇಶಕ ಶ್ರೀ ನಾರಾಯಣ್ ಸಿಂಗ್ ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರಕ್ಕೆ ‘ಬತ್ತಿ ಗುಲ್ ಮೀಟರ್ ಚಾಲೂ’ ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ಶಾಹಿದ್ ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಜನಸಾಮಾನ್ಯರು ಹೆಚ್ಚು ಬಿಲ್ ಕಟ್ಟುವಂತೆ ಮಾಡುವ ವಿದ್ಯುತ್ ಸರಬರಾಜು ಕಂಪೆನಿಗಳ ವಿರುದ್ಧ ಹೋರಾಡುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಈ ವಿಚಾರದ ಬಗ್ಗೆ ಬೆಳಕು ಚೆಲ್ಲುಲು ದೀಪಾವಳಿಯ ಸಂದರ್ಭ ಸೂಕ್ತವಾಗಿದೆ ಎಂದು ನಿರ್ದೇಶಕರು ಹೇಳಿದ್ದಾರೆ.
ಬೆಳಕಿನ ಹಬ್ಬ ದೀಪಾವಳಿ ದಿನದಂದು ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲು ಒಳ್ಳೆಯ ಸಂದರ್ಭ. ಮನರಂಜನೆಯ ಜೊತೆಗೆ ಒಳ್ಳೆಯ ಸಂದೇಶ ಕೊಡುವಂತೆ ಚಿತ್ರವನ್ನ ತಯಾರಿಸಬೇಕೆಂದಿದ್ದೇವೆ ಅಂತ ಚಿತ್ರದ ನಿರ್ದೇಶಕ ಹೇಳಿದ್ದಾರೆ.
ಶಾಹಿದ್ ತನ್ನ ಇತ್ತೀಚಿನ ಸಿನಿಮಾಗಳಲ್ಲಿ ಬೇರೆ ಬೇರೆ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಹೈದರ್ ಹಾಗೂ ಉಡ್ತಾ ಪಂಜಾಬ್ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸಿದ್ದರು. ಈಗ ಪದ್ಮಾವತಿ ಸಿನಿಮಾದಲ್ಲೂ ರಜಪೂತ ರಾಜಾ ಮಹಾರಾವಲ್ ರತನ್ ಸಿಂಗ್ ಪಾತ್ರದಲ್ಲಿ ನಟಿಸಿದ್ದಾರೆ. ಪದ್ಮಾವತಿ ಚಿತ್ರದ ಬಿಡುಗಡೆಗೆ ಡಿಸೆಂಬರ್ 1ರಂದು ದಿನಾಂಕ ನಿಗದಿಯಾಗಿದೆ.
Let’s celebrate the festival of light with the hope that soon electricity will be a right and not a privilege for all. #BattiGulMeterChalu #ShreeNarayanSingh @kriarj @TSeries https://t.co/Kdrm9AXRkr
— Shahid Kapoor (@shahidkapoor) October 19, 2017