Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಜೈಲೇ ಗತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಜೈಲೇ ಗತಿ

Latest

ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್‍ಗೆ ಜೈಲೇ ಗತಿ

Public TV
Last updated: October 20, 2021 3:06 pm
Public TV
Share
3 Min Read
ARYAN KHAN 1
SHARE

ಮುಂಬೈ: ಶಾರೂಕ್ ಖಾನ್ ಪುತ್ರ ಆರ್ಯನ್ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.

ARYANKHAN 1

ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಎನ್‍ಸಿಬಿ ಬಲೆಗೆ ಬಿದ್ದಿದ್ದ ಬಾಲಿವುಡ್ ನಟ ಶಾರೂಕ್ ಖಾನ್ ಮತ್ತಷ್ಟು ದಿನ ಜೈಲಿನಲ್ಲೇ ಕಳೆಯಬೇಕಿದೆ. ಮುಂಬೈನ ಸೆಷನ್ಸ್ ಕೋರ್ಟ್ ಆರ್ಯನ್ ಖಾನ್‍ಗೆ ಜಾಮೀನು ನೀಡಲು ನಿರಾಕರಿಸಿದೆ. ಇದನ್ನೂ ಓದಿ: ಇಂದು ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಭವಿಷ್ಯ ನಿರ್ಧಾರ

Drugs on cruise ship case | Mumbai’s Special NDPS Court rejects bail applications of Aryan Khan, Arbaaz Merchant and Munmun Dhamecha pic.twitter.com/Zww2mANkUB

— ANI (@ANI) October 20, 2021

ಅಕ್ಟೋಬರ್ 13 ಮತ್ತು 14 ರಂದು ಎರಡು ದಿನ ಆರ್ಯನ್ ಖಾನ್ ಸೇರಿದಂತೆ ಇತರೆ ಆರೋಪಿಗಳ ಜಾಮೀನು ಅರ್ಜಿಗಳ ವಾದ ಆಲಿಸಿದ್ದ ಮುಂಬೈನ ಸೆಷನ್ಸ್ ಕೋರ್ಟ್‍ನ ನ್ಯಾ.ವಿ.ವಿ ಪಾಟೀಲ್‍ರವರ ಪೀಠ ಬಳಿಕ ಇಂದು ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಕೋರ್ಟ್ ಬೇಲ್ ನೀಡಲು ತಿರಸ್ಕರಿಸಿದೆ. ಈ ಮೂಲಕ ಆರ್ಯನ್ ಖಾನ್‍ಗೆ ಮತ್ತೆ ಜೈಲು ವಾಸ ಗತಿ ಎಂಬಂತಾಗಿದೆ. ಇದನ್ನೂ ಓದಿ: ಆರ್ಯನ್‍ಗೆ ಜಾಮೀನು ಸಿಗುವವರೆಗೂ ಸಿಹಿ ಅಡುಗೆ ಮಾಡ್ಬೇಡಿ – ಸಿಬ್ಬಂದಿಗೆ ಗೌರಿ ಸೂಚನೆ

ವಿಚಾರಣೆಯ ವೇಳೆ ಆರ್ಯನ್ ಖಾನ್ ಪರ ವಾದ ಏನಿತ್ತು?
ಎನ್‍ಸಿಬಿ ದಾಳಿ ವೇಳೆ ಆರ್ಯನ್ ಖಾನ್ ಬಳಿ ಮಾದಕ ವಸ್ತುಗಳು ಪತ್ತೆಯಾಗಿಲ್ಲ. ದಾಳಿ ವೇಳೆ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡಿರಲಿಲ್ಲ ಮತ್ತು ಅವರ ಬಳಿಕ ಹಣವೂ ಇರಲಿಲ್ಲ, ಹೀಗಾಗಿ ಡ್ರಗ್ ಸೇವನೆ, ಮಾರಾಟ, ಖರೀದಿ ಆರೋಪಗಳೇಲ್ಲ ಸುಳ್ಳು. ಆರ್ಯನ್ ಖಾನ್ ಅತಿಥಿಯಾಗಿ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಹಿಂದೆ ಮ್ಯಾಜಿಸ್ಟ್ರೇಟ್ ಕೋರ್ಟ್ ಹೆಚ್ಚಿನ ವಿಚಾರಣೆ ಅವಶ್ಯಕತೆ ಇಲ್ಲ ಎಂದು ಹೇಳಿದೆ. ತನ್ನ ವ್ಯಾಪ್ತಿಯಲ್ಲಿ ಪ್ರಕರಣ ಇಲ್ಲದ ಕಾರಣ ಜಾಮೀನು ನೀಡಲು ನಿರಾಕರಿಸಿದೆ. ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಜೊತೆಗೆ ನಂಟು ಆರೋಪಿಸಿದರು ಅದನ್ನು ಪ್ರಕರಣದಲ್ಲಿ ಉಲ್ಲೇಖಿಸಿಲ್ಲ. ಆರ್ಯನ್ ಖಾನ್ ನಿಂದ ಯಾವುದೇ ಸಾಕ್ಷ್ಯ ಸಿಗದ ಹಿನ್ನಲೆ ಇಡೀ ತನಿಖೆ ವಾಟ್ಸಪ್ ಮೇಲೆ ಅವಲಂಬಿಸಿದೆ. ಜಾಮೀನು ತನಿಖೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ವಾದ ಮಂಡಿಸಬಹುದು.

shah rukha khan aryan 3

ಎನ್‍ಸಿಬಿ ಪರ ವಕೀಲರ ವಾದ ಏನಿತ್ತು?
ಅನೀಲ್ ಸಿಂಗ್, ಆರ್ಯನ್ ಖಾನ್ ನಿಯಮಿತವಾಗಿ ಡ್ರಗ್ ಸೇವನೆ ಮಾಡುತ್ತಿದ್ದಾರೆ. ಮಾಹಿತಿಗಳ ಪ್ರಕರಣ ಮೂರು ವರ್ಷದಿಂದ ಮಾದಕ ವಸ್ತುಗಳ ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಪೂರಕ ಎನ್ನುವಂತೆ ಸ್ನೇಹಿತ ಅರ್ಬಾಜ್ ಮಚೆರ್ಂಟ್ ಬಳಿಕ ಮಾದಕ ವಸ್ತು ಪತ್ತೆಯಾಗಿದ್ದು, ಆರ್ಯನ್ ಖಾನ್ ಕೂಡಾ ಮಾದಕ ವ್ಯಸನಿ ಎನ್ನುವುದು ಸೂಚಿಸುತ್ತಿದೆ ಆರ್ಯನ್ ಖಾನ್ ತಮ್ಮ ಬಳಿ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ವಾದಿಸಬಹುದು, ಆದರೆ ಆತನ ಸ್ನೇಹಿತ ತನ್ನ ಬಳಿ ಡ್ರಗ್ ಇರುವುದು ಒಪ್ಪಿಕೊಂಡಿದ್ದಾನೆ. ಪಂಚೆನಾಮೆಗೂ ಆರೋಪಿಗಳು ಸಹಿ ಮಾಡಿದ್ದಾರೆ. ಎನ್‍ಡಿಪಿಎಸ್ ಕಾಯ್ದೆಯಡಿ ಆರೋಪಿಗಳಿಂದ ಎಷ್ಟು ಪ್ರಮಾಣದ ಮಾದಕ ವಸ್ತುವನ್ನು ವಶಕ್ಕೆ ಪಡೆದೆವು ಎನ್ನುವುದು ಮುಖ್ಯವಲ್ಲ. ಆರೋಪಿಗೆ ಪ್ರಕರಣಕ್ಕಿರುವ ನಂಟನ್ನು ಭೇದಿಸಬೇಕಿದೆ. ಹೀಗಾಗಿ ಇದು ಒಂದು ವರ್ಷದ ಶಿಕ್ಷೆಯ ಪ್ರಕರಣವೂ ಎನ್ನುವಂತಿಲ್ಲ. ಪ್ರಕರಣವನ್ನು ಹೇಗೆ ತನಿಖೆ ಮಾಡಬೇಕು, ಯಾರನ್ನು ತನಿಖೆ ಒಳಪಡಿಸಬೇಕು ಅದು ತನಿಖಾಧಿಕಾರಿಯ ಹಕ್ಕು. ಈ ಹಂತದಲ್ಲಿ ಜಾಮೀನು ನೀಡಬಾರದು ಎಂದು ಅನಿಲ್ ಸಿಂಗ್ ಕೋರ್ಟ್ ಗೆ ಮನವಿ ಮಾಡಿದ್ದರು. ಇದನ್ನೂ ಓದಿ: ಇನ್ಮುಂದೆ ತಪ್ಪು ಮಾಡಲ್ಲ, ಬಡವರಿಗೆ ನೆರವಾಗುತ್ತೇನೆ: ಆರ್ಯನ್ ಖಾನ್

ಮಾದಕ ವಸ್ತುಗಳು ಪತ್ತೆಯಾಗಿಲ್ಲ ಎಂದ ಮಾತ್ರಕ್ಕೆ ಪ್ರಕರಣಕ್ಕೂ ಆರೋಪಿಗೂ ಸಂಬಂಧವೇ ಇಲ್ಲ ಎನ್ನುವಂತಿಲ್ಲ. ವಾಟ್ಸಪ್ ಚಾಟ್ ಗಳಲ್ಲಿ ವಾಣಿಜ್ಯ ಉದ್ದೇಶಕ್ಕೆ ಖರೀದಿಸುವ ಬಗ್ಗೆ ಚರ್ಚೆ ನಡೆದಿದೆ. ಇದು ಅಂತರಾಷ್ಟ್ರೀಯ ನಂಟು ಹೊಂದಿರುವ ಸಾಧ್ಯತೆ ಇದೆ. ಅಂತರಾಷ್ಟ್ರೀಯ ಪೆಡ್ಲರ್ ಪತ್ತೆ ಹಚ್ಚಬೇಕು ಅದಕ್ಕೆ ಆರ್ಯನ್ ಖಾನ್ ಅವಶ್ಯಕತೆ ಇದೆ. ಆರ್ಯನ್ ಖಾನ್ ಮೂರು ವರ್ಷಗಳಿಂದ ಡ್ರಗ್ ಬಳಕೆ ಮಾಡುತ್ತಿರುವುದಕ್ಕೆ ಸಾಕ್ಷ್ಯಗಳಿದೆ. ದಾಳಿ ವೇಳೆ ಅವರು ಡ್ರಗ್ ಸೇವನೆಗೆ ಪ್ಲ್ಯಾನ್ ಮಾಡಿದ್ದರು ಎಂದು ಪಂಚೆನಾಮೆಯಿಂದ ತಿಳಿದು ಬಂದಿದೆ. ಸ್ನೇಹಿತರ ಬಳಿ ಮಾದಕ ವಸ್ತುಗಳು ಪತ್ತೆಯಾಗಿದ್ದು ಆರ್ಯನ್ ಇದರ ಭಾಗವಾಗಿದ್ದಾರೆ. ತನಿಖೆಯ ಹಂತದಲ್ಲಿ ಜಾಮೀನು ನೀಡಬಾರದು ಎಂದು ವಾದಿಸಬಹುದು.

TAGGED:Aryan KhanbailbollywoodmumbaiPublic TVsandalwoodSharukhanಆರ್ಯನ್ ಖಾನ್ಪಬ್ಲಿಕ್ ಟಿವಿಬಾಲಿವುಡ್ಶಾರೂಕ್ ಖಾನ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

Anegondi Bridge collapse
Court

ಆನೆಗೊಂದಿ ಸೇತುವೆ ಕುಸಿತ ಕೇಸ್ – ಬಡ್ಡಿ ಸಹಿತ 5.63 ಕೋಟಿ ಪರಿಹಾರ ನೀಡಬೇಕಿದ್ದ ಆದೇಶ ರದ್ದು: ಹೈಕೋರ್ಟ್‌

Public TV
By Public TV
2 minutes ago
CET Exam
Bengaluru City

ಸಿಸಿಟಿವಿ ಕಣ್ಗಾವಲಿನಲ್ಲಿ ನೇಮಕಾತಿ ಪರೀಕ್ಷೆ: ಕೆಇಎ

Public TV
By Public TV
35 minutes ago
SUPREME COURT
Court

ಕೇಂದ್ರದ ಪೂರ್ವಾನುಮತಿ ಇಲ್ಲದೆ ಅರಣ್ಯಭೂಮಿ ಗುತ್ತಿಗೆ ನೀಡಲು ಸಾಧ್ಯವಿಲ್ಲ: ಸುಪ್ರೀಂ

Public TV
By Public TV
48 minutes ago
GBA
Bengaluru City

ಜಿಬಿಎ 5 ಪಾಲಿಕೆ ಚುನಾವಣೆ – ಸರ್ಕಾರದಿಂದ ಮೀಸಲಾತಿ ಮಾರ್ಗಸೂಚಿ ಪ್ರಕಟ

Public TV
By Public TV
51 minutes ago
kea
Bengaluru City

ಪಿಜಿ/ಯುಜಿ ಆಯುಷ್ ಫಲಿತಾಂಶ ಪ್ರಕಟ: ಕೆಇಎ

Public TV
By Public TV
52 minutes ago
Raichuru Fire Accident
Districts

ಬಣವೆಗೆ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂ. ಮೌಲ್ಯದ ಹತ್ತಿ ಬೆಳೆ, ಮೇವು ಭಸ್ಮ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?