ಬೀದರ್: ಜಿಲ್ಲೆಯ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ (Shailendra Beldale) ಅವರು ಆತ್ಮಹತ್ಯೆ ಮಾಡಿಕೊಂಡ 6 ರೈತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದರು.
ತಮ್ಮ ಕಚೇರಿಯಲ್ಲಿ ಪರಿಹಾರ ಧನ ವಿತರಿಸಿ ಮಾತನಾಡಿದ ಅವರು, ರೈತರ ಸಮಸ್ಯೆಗಳಿಗೆ ಆತ್ಮಹತ್ಯೆ ಒಂದೇ ಪರಿಹಾರ ಅಲ್ಲ, ಸಮಸ್ಯೆಗಳನ್ನು ಎದುರಿಸಿ ಬದುಕುವ ಶಕ್ತಿ ಹೊಂದಬೇಕು ಎನ್ನುವುದು ನನ್ನ ಕಳಕಳಿ. ನನ್ನ ಕ್ಷೇತ್ರದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಬಹಳ ದುಃಖಕರ ಸಂಗತಿ ಎಂದರು.ಇದನ್ನೂ ಓದಿ: ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್ – ಮೋಹನ್ಲಾಲ್ ಫ್ಯಾನ್ಸ್ಗೆ ಗುಡ್ನ್ಯೂಸ್
ಬೀದರ್ ದಕ್ಷಿಣ ಕ್ಷೇತ್ರದ ಕಪಲಾಪುರ, ಹೊನ್ನಡ್ಡಿ, ಅಷ್ಟೂರ, ಮರ್ಜಾಪುರ, ಜಮಿಸ್ತಾಪುರ, ಘೋಡಂಪಳ್ಳಿ, ಸಂಗೋಳಗಿ ತಾಂಡಾ ಗ್ರಾಮ ಸೇರಿ ಒಟ್ಟು ಆರು ಜನ ರೈತರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು ಹಾಗೂ ಓರ್ವ ರೈತ ಹಾವು ಕಚ್ಚಿ ಮೃತಪಟ್ಟಿದ್ದರು.
ಆಗ ಕುಟುಂಬಸ್ಥರಿಗೆ ಸಹಾಯಧನ ನೀಡುವುದಾಗಿ ಭರವಸೆ ನೀಡಿದ್ದೆ. ಭರವಸೆಯಂತೆ ಇದೀಗ ರೈತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಹಾಗೂ ಹಾವು ಕಡಿತದಿಂದ ಮೃತಪಟ್ಟ ರೈತರ ಕುಟುಂಬಕ್ಕೆ ಎರಡು ಲಕ್ಷ ರೂ. ನೀಡಿದ್ದೇವೆ ಎಂದರು.ಇದನ್ನೂ ಓದಿ: ತಾಂತ್ರಿಕ ದೋಷ – ಜಮ್ಮುವಿಗೆ ಹೊರಟಿದ್ದ ಏರ್ಇಂಡಿಯಾ ವಿಮಾನ ದೆಹಲಿಗೆ ವಾಪಸ್