ಕಿಚ್ಚ ಸುದೀಪ್ (Sudeep) ಮತ್ತು ದರ್ಶನ್ (Darshan) ಸ್ನೇಹದ (Friendship) ವಿಚಾರವಾಗಿ ಹಲವು ವರ್ಷಗಳಿಂದ ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಇಬ್ಬರೂ ದೂರವಾಗಿರುವ ವಿಚಾರ ಗುಟ್ಟಿನದ್ದೇನಲ್ಲ. ಆದರೂ, ಇಬ್ಬರು ಮತ್ತೆ ಒಂದಾಗುತ್ತಾರೆ, ಮತ್ತೆ ಮೊದಲಿನಂತೆ ಸ್ನೇಹಿತರಾಗಿ ಅಭಿಮಾನಿಗಳಿಗೆ ಕಾಣಿಸಿಕೊಳ್ಳುತ್ತಾರೆ ಎನ್ನುವ ಕಾಯುವಿಕೆ ಇಬ್ಬರ ಅಭಿಮಾನಿಗಳಲ್ಲೂ ಇದೆ. ಮೊನ್ನೆ ಅಂಥದ್ದೊಂದು ಸನ್ನಿವೇಶ ಸೃಷ್ಟಿಯಾಗಿತ್ತು. ಆದರೂ, ಇಬ್ಬರೂ ಮಾತಾಡಲಿಲ್ಲ ಎನ್ನುವ ಬೇಸರ ಅಭಿಮಾನಿಗಳಲ್ಲಿ ಇತ್ತು.
ಈ ಕುರಿತು ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಕುರಿತಾಗಿ ಮಾತನಾಡಿದ ಕಿಚ್ಚ, ‘ನಾನು ಸುಮಲತಾ ಅವರ ಹುಟ್ಟು ಹಬ್ಬದ ಪಾರ್ಟಿಗೆ ಹೋಗಿದ್ದೆ. ಮುಂಚೆನೇ ದರ್ಶನ್ ಇರ್ತಾರೆ ಅಂತ ನಂಗೂ ಗೊತ್ತಿತ್ತು. ಕಿತ್ತಾಡಿಕೊಂಡ್ರು, ಜಗಳ ಮಾಡಿಕೊಂಡ್ರು ಅನ್ನೋದು ಕಲ್ಪನೆ. ಗೋಡೆ ಮುರಿಬೇಕು, ಆದರೆ ಕಲ್ಪನೆ ಇರಬಾರದು. ನನ್ ಕಣ್ಣಲ್ಲಿ ಕಣ್ಣಿಟ್ಟು ಹೇಳಿದ್ರೆ ಒಪ್ತೀನಿ. ಪ್ರಶ್ನೆಗಳು ಬರ್ತಾವೆ, ಒಳ್ಳೇದು, ಕೆಟ್ಟದು ಇರ್ತಾವೆ. ಶೇಕ್ ಹ್ಯಾಂಡ್ ಮಾಡೋದು ದೊಡ್ಡ ವಿಚಾರವಲ್ಲ. ಇಬ್ರು matured ಇದೀವಿ. ಎಲ್ಲವೂ ಸರಿ ಹೋಗ್ಬೇಕು, ಅಂದಾಗ ಸರಿ ಹೋಗುತ್ತೆ’ ಎಂದರು.
ಸುದೀಪ್ ಮತ್ತು ದರ್ಶನ್ ಯಾವ ಕಾರಣಕ್ಕೆ ದೂರವಾದರು ಎನ್ನುವುದು ಈಗಲೂ ಯಕ್ಷ ಪ್ರಶ್ನೆ. ಆದರೂ, ದರ್ಶನ್ ಬಗ್ಗೆ ಸುದೀಪ್ ಅವರಿಗೆ ಈಗಲೂ ಅದೇ ಸ್ನೇಹವಿದೆ. ಅದಕ್ಕೆ ಸಾಕ್ಷಿ ಎನ್ನುವಂತೆ ಸುದೀಪ್ ಮನೆಯಲ್ಲಿ ಈಗಲೂ ದರ್ಶನ್ ಫೋಟೋವಿದೆ. ಸುದೀಪ್ ಮತ್ತು ದರ್ಶನ್ ಆದಷ್ಟು ಬೇಗ ಒಂದಾಗಲಿ ಎನ್ನುವುದು ಅವರ ಅಭಿಮಾನಿಗಳ ಆಸೆ.
Web Stories