ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ನ ಹಾಲಿ ಗವರ್ನರ್ ಆಗಿರುವ ಶಕ್ತಿಕಾಂತ ದಾಸ್ ಅವರನ್ನು ಮತ್ತೆ ಮುಂದಿನ ಮೂರು ವರ್ಷಗಳವರೆಗೆ ಅದೇ ಸ್ಥಾನಕ್ಕೆ ಕೇಂದ್ರ ಸರ್ಕಾರ ಮರು ನೇಮಕ ಮಾಡಿದೆ.
ಶಕ್ತಿಕಾಂತ ದಾಸ್ ಅವರು 2024ರ ಡಿಸೆಂಬರ್ವರೆಗೆ ಆರ್ಬಿಐ ಗವರ್ನರ್ ಆಗಿ ಮುಂದುವರಿಯಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನೊಳಗೊಂಡ ಸಂಪುಟ ನೇಮಕಾತಿಗಳ ಸಮಿತಿಯು ಈ ನಿರ್ಧಾರ ಕೈಗೊಂಡಿದೆ. ಮುಂದಿನ ಆದೇಶದವರೆಗೂ ಆರ್ಬಿಐ ಗವರ್ನರ್ ಆಗಿ ಶಕ್ತಕಾಂತ್ ದಾಸ್ ಮರು ನೇಮಕಕ್ಕೆ ಸಮಿತಿಯು ಗುರುವಾರ ತಡರಾತ್ರಿ ಅನುಮೋದನೆ ನೀಡಿದೆ. ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ಬಿರುಗಾಳಿ – 10 ಸಾವಿರ ಕೋಟಿ ರೂ. ಹಗರಣ!
ಶಕ್ತಿಕಾಂತ್ ದಾಸ್ ಅವರು 2018ರ ಡಿಸೆಂಬರ್ನಲ್ಲಿ ಮೂರು ವರ್ಷಗಳ ಅವಧಿಗೆ ಆರ್ಬಿಐ ಗವರ್ನರ್ ಆಗಿ ನೇಮಕಗೊಂಡಿದ್ದರು. ಇದಕ್ಕೂ ಮೊದಲು ಹಣಕಾಸು ಸಚಿವಾಲಯದಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಇದನ್ನೂ ಓದಿ: ದೆಹಲಿಯಲ್ಲಿ ಡೆಂಗ್ಯೂ ಉಲ್ಬಣ – ಆಸ್ಪತ್ರೆಗಳಲ್ಲಿ ಬೆಡ್ಗಳ ಕೊರತೆ