Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಾಯಣ, ಮಹಾಭಾರತದ ನಂತರ ಮತ್ತೆ ಎಂಟ್ರಿ ಕೊಡ್ತಿದ್ದಾನೆ ಶಕ್ತಿಮಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಮಾಯಣ, ಮಹಾಭಾರತದ ನಂತರ ಮತ್ತೆ ಎಂಟ್ರಿ ಕೊಡ್ತಿದ್ದಾನೆ ಶಕ್ತಿಮಾನ್

Cinema

ರಾಮಾಯಣ, ಮಹಾಭಾರತದ ನಂತರ ಮತ್ತೆ ಎಂಟ್ರಿ ಕೊಡ್ತಿದ್ದಾನೆ ಶಕ್ತಿಮಾನ್

Public TV
Last updated: March 31, 2020 11:23 am
Public TV
Share
2 Min Read
shaktimaan
SHARE

ನವದೆಹಲಿ: ಭಾರತದ ಪ್ರಪ್ರಥಮ ಸೂಪರ್ ಹೀರೋ ಧಾರಾವಾಹಿ, 90ರ ದಶಕದ ಮಕ್ಕಳ ಅಚ್ಚುಮೆಚ್ಚಿನ ಶಕ್ತಿಮಾನ್ ಶೋ ಮತ್ತೆ ಪ್ರಸಾರ ಮಾಡಲು ದೂರದರ್ಶನ ಸಕಲ ಸಿದ್ಧತೆ ಮಾಡಿಕೊಂಡಿದೆ.

ಮುಖೇಶ್ ಖನ್ನಾ ನಟನೆಯ ಈ ಧಾರಾವಾಹಿಯನ್ನು ಡಿಡಿ ನ್ಯಾಷನಲ್ ವಾಹಿನಿಯಲ್ಲಿ ಪ್ರತಿ ದಿನ ಒಂದು ತಾಸು ಪ್ರಸಾರ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್‍ನಿಂದ ಮಧ್ಯಾಹ್ನ 1ಗಂಟೆಗೆ ಈ ಶೋ ಪ್ರಸಾರವಾಗಲಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಮೂಲಕ ಶಕ್ತಿಮಾನ್‍ನ ಸಾಹಸಗಳನ್ನು ಮಕ್ಕಳೊಂದಿಗೆ ಮತ್ತೆ ಎಂಜಾಯ್ ಮಾಡಬಹುದಾಗಿದೆ.

Doordarshan is all set to telecast Shaktimaan, the famous serial featuring Mukesh Khanna, for 1-hour daily on DD National network from April 2020 at 1 PM: Government of India

— ANI (@ANI) March 30, 2020

ಮುಖೇಶ್ ಖನ್ನಾ ಅವರು ಈ ಧಾರಾವಾಹಿಯಲ್ಲಿ ಶಕ್ತಿಮಾನ್ ಪಾತ್ರ ನಿರ್ವಹಿಸಿದ್ದರು. ಕೇವಲ ಮನರಂಜನೆ ಮಾತ್ರವಲ್ಲದೆ ತಮ್ಮ ಅದ್ಭುತ ಶಕ್ತಿ ಮೂಲಕ ಶಕ್ತಿಮಾನ್ ಜೀವನದ ಪಾಠಗಳನ್ನು ಕಲಿಸುತ್ತಿದ್ದ. ಹೀಗಾಗಿ ಪ್ರತಿ ಭಾನುವಾರ ಒಂದು ಗಂಟೆ ಕಾಲ ಪ್ರಸಾರವಾಗುತ್ತಿದ್ದ ಶಕ್ತಿಮಾನ್ ಧಾರವಾಹಿಯನ್ನು ಕುಟುಂಬ ಸಮೇತರಾಗಿ ನೋಡುತ್ತಿದ್ದರು. ಇದೀಗ ಮತ್ತೆ ಪ್ರಸಾರ ಮಾಡಲು ನಿರ್ಧರಿಸಲಾಗಿದೆ.

ರಾಮಾಯಣ, ಮಹಾಭಾರತವನ್ನು ಮರು ಪ್ರಸಾರ ಮಾಡಲು ತೀರ್ಮಾನ ಕೈಗೊಂಡ ನಂತರ ಶಕ್ತಿಮಾನ್ ಧಾರವಾಹಿಯನ್ನೂ ಮರು ಪ್ರಸಾರ ಮಾಡುವಂತೆ ಒತ್ತಡ ಕೇಳಿ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

shaktimaan 2

ಮಾತ್ರವಲ್ಲದೆ ಈ ಹಿಂದೆ ಶಕ್ತಿಮಾನ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಇದರ ಮುಂದುವರಿದ ಭಾಗವನ್ನು ರಚಿಸಲು ಮುಖೇಶ್ ಖನ್ನಾ ಚಿಂತನೆ ನಡೆಸಿದ್ದಾರಂತೆ. ಇದರಲ್ಲಿ ಮುಖೇಶ್ ಶಕ್ತಿಮಾನ್ ಪಾತ್ರ ನಿರ್ವಹಿಸುವುದು ಮಾತ್ರವಲ್ಲದೆ, ಕಥೆ ರಚಿಸುವ ಪ್ರಯತ್ನದಲ್ಲಿಯೂ ತೊಡಗಿದ್ದಾರಂತೆ.

ಈ ಕುರಿತು ಇಂಗ್ಲಿಷ್ ಪತ್ರಿಕೆಯೊಂದರ ಸಂದರ್ಶನದಲ್ಲಿ ಮುಖೇಶ್ ಖನ್ನಾ ಮಾಹಿತಿ ನೀಡಿದ್ದು, ಶಕ್ತಿಮಾನ್ ಮುಂದುವರಿದ ಭಾಗದ ಕುರಿತು ಕೆಲಸ ಮಾಡುತ್ತಿದ್ದೇವೆ. ಶಕ್ತಿಮಾನ್‍ನ ಎರಡನೇ ಭಾಗವನ್ನು ತೆರೆ ಮೇಲೆ ತರಲು ಕಳೆದ ಮೂರು ವರ್ಷಗಳಿಂದ ಸಿದ್ಧತೆ ನಡೆಸಿದ್ದೇವೆ. ಇದು ಸಮಕಾಲೀನವಾಗಿದ್ದು, ಮೌಲ್ಯಗಳನ್ನು ಎತ್ತಿ ಹಿಡಿಯಲಿದೆ. ಹೀಗಾಗಿ ಅದರ ಎರಡನೇ ಭಾಗದ ತಯಾರಿಯಲ್ಲಿ ತೊಡಗಿದ್ದೇವೆ. ಅಲ್ಲದೆ ಜನ ಸಹ ಮುಂದೇನಾಗುತ್ತದೆ ಎಂಬುದನ್ನು ತಿಳಿಯಲು ಕುತೂಹಲದಿಂದ ಕಾಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Mukesh khanna

ಕೊರೊನಾ ಭೀತಿ ಎಲ್ಲ ತಿಳಿಯಾದ ನಂತರ ಕೆಲಸ ಚುರುಕಾಗಲಿದೆ. ಆದರೆ ಯಾವಾಗಿಂದ ಮತ್ತೆ ಕೆಲಸ ಮಾಡುತ್ತೇವೆ ಎಂಬ ನಿರ್ದಿಷ್ಟ ಸಮಯವನ್ನು ಹೇಳಲು ಸಾಧ್ಯವಿಲ್ಲ. ಹಿಂದೆಂದಿಗಿಂತಲೂ ಇದೀಗ ತುಂಬಾ ಬೇಡಿಕೆ ಬರುತ್ತಿದೆ. ಹೀಗಾಗಿ ಎರಡನೇ ಭಾಗವನ್ನು ತೆರೆ ಮೇಲೆ ತರಲು ಇದು ಸೂಕ್ತ ಸಮಯ ಎಂದು ನಾನು ಭಾವಿಸಿದ್ದೇನೆ. ಇದಕ್ಕೂ ಮುನ್ನ ಮುಖೇಶ್ ಅವರು ಸೂಪರ್ ಹೀರೋ ಕುರಿತು ಚಿತ್ರ ಮಾಡುವ ಇಂಗಿತವನ್ನು ಹೊರ ಹಾಕಿದ್ದರು. ನಾನು ಶಕ್ತಿಮಾನ್ ನನ್ನು ಪೂರ್ಣ ಪ್ರಮಾಣದ ಚಲನಚಿತ್ರವನ್ನಾಗಿಸಲು ಬಯಸಿದ್ದೆ. ಆದರೆ ಟೆಲಿಫಿಲಂನೊಂದಿಗೆ ಹಣಕಾಸು ಹೊಂದಾಣಿಕೆ ಏರ್ಪಡಲಿಲ್ಲ. ಹೀಗಾಗಿ ಈ ಯೋಜನೆ ಈಡೇರಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಅಲ್ಲದೆ ಶಕ್ತಿಮಾನ್ 3ಡಿ ಆ್ಯನಿಮೇಟೆಡ್ ಸಿರೀಸ್ ಕೂಡ ಘೋಷಣೆಯಾಗಿದ್ದು, ಇದರ ಟ್ರೈಲರ್ ನ್ನು ಕಳೆದ ವರ್ಷ ಕಾಮಿಕ್-ಕಾನ್ ಇಂಡಿಯಾದಲ್ಲಿ ಬಿಡುಗಡೆ ಮಾಡಲಾಗಿದೆ.

Shaktimaan DD National 1200

ಕೊರೊನಾ ವೈರಸ್ ಲಾಕ್‍ಡೌನ್ ಸಂದರ್ಭದಲ್ಲಿ ಕಾಲ ಕಳೆಯಲು ಅನುಕೂಲವಾಗುವಂತೆ ಇತ್ತೀಚೆಗಷ್ಟೇ ಹಳೆಯ ರಾಮಾಯಣ, ಮಹಾಭಾರತ ಧಾರಾವಾಹಿಗಳನ್ನು ಪ್ರಸಾರ ಮಾಡಲು ಸರ್ಕಾರ ಮುಂದಾಗಿದೆ. ಇವೆರಡೂ ಧಾರವಾಹಿ ಸಹ ಒಂದಾನೊಂದು ಕಾಲದಲ್ಲಿ ದೇಶದ ಜನತೆಯ ಪ್ರೈಮ್ ಟೈಮ್ ಫೇವರಿಟ್ ಶೋಗಳಾಗಿದ್ದವು. ಹೀಗಾಗಿ ಸಾರ್ವಜನಿಕರಲ್ಲಿ ಸಾಮರಸ್ಯ ಕಾಪಾಡಲು ಈ ಧಾರವಾಹಿಗಳನ್ನು ಸರ್ಕಾರ ಮರು ಪ್ರಸಾರ ಮಾಡುವ ನಿರ್ಧಾರ ಕೈಗೊಂಡಿದೆ.

TAGGED:Corona VirusLockdownMukesh KhannaPublic TVserialShaktimaanTV Showಕೊರೊನಾ ವೈರಸ್ಟಿವಿ ಶೋಧಾರಾವಾಹಿಪಬ್ಲಿಕ್ ಟಿವಿಮುಖೇಶ್ ಖನ್ನಾಲಾಕ್‍ಡೌನ್ಶಕ್ತಿಮಾನ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
8 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
30 minutes ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
37 minutes ago
Yogesh Gowda Murder Case Truth will always prevail Vinay Kulkarni
Bengaluru City

ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ: ವಿನಯ್‌ ಕುಲಕರ್ಣಿ

Public TV
By Public TV
46 minutes ago
jd vance 1
Latest

ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Public TV
By Public TV
1 hour ago
Jio Mart Nelamangala Fire Accident
Bengaluru Rural

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?