Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕೀಯ ಮುತ್ಸದ್ಧಿ ಶಾಮನೂರು ಶಿವಶಂಕರಪ್ಪ ವಿಧಿವಶ – ಕಂಬನಿ ಮಿಡಿದ ಗಣ್ಯರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಕೀಯ ಮುತ್ಸದ್ಧಿ ಶಾಮನೂರು ಶಿವಶಂಕರಪ್ಪ ವಿಧಿವಶ – ಕಂಬನಿ ಮಿಡಿದ ಗಣ್ಯರು

Bengaluru City

ರಾಜಕೀಯ ಮುತ್ಸದ್ಧಿ ಶಾಮನೂರು ಶಿವಶಂಕರಪ್ಪ ವಿಧಿವಶ – ಕಂಬನಿ ಮಿಡಿದ ಗಣ್ಯರು

Public TV
Last updated: December 14, 2025 8:10 pm
Public TV
Share
6 Min Read
Shamanur Shivashankarappa 2 1
SHARE

ದಾವಣಗೆರೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (94) (Shamanur Shivashankarappa) ಅವರಿಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಗಣ್ಯರು ಕಂಬನಿ ಮಿಡಿದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar), ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಅವರ ಹಾದಿಯಾಗಿ ಹಿರಿಯ ರಾಜಕೀಯ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ… pic.twitter.com/mjvsqqYkln

— DK Shivakumar (@DKShivakumar) December 14, 2025

ಸಮಾಜ ಸೇವೆಗಾಗಿ ಜೀವನ ಮುಡಿಪಾಗಿಟ್ಟವರು: ಡಿಕೆಶಿ
ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ ಅಗಲಿಕೆಯು ನಾಡಿಗೆ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಅಂತ ತಿಳಿಸಿದ್ದಾರೆ.

ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ರೀ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ… pic.twitter.com/E51CLDf2AR

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 14, 2025

ಮಾದರಿ ವ್ಯಕ್ತಿತ್ವದ ಸಾಧಕರು: ಹೆಚ್‌ಡಿಕೆ
ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ. ʻನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ರೀ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ನೇರ ನಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕೆ ಮೀಸಲಿಟ್ಟು ದುಡಿದರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವಾಗಿದೆ. ಶ್ರೀಯುತರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಪರಮ ಶಿವನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು‌ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಹಿರಿಯ ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರ ಶಿವಶಂಕರಪ್ಪ ರವರು ನಿಧನರಾದ ವಿಷಯ ತಿಳಿದು ನನಗೆ ಅತ್ಯಂತ ದುಃಖವಾಯಿತು.

ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಔದ್ಯೋಗಿಕ ಕ್ಷೇತ್ರಗಳಲ್ಲಿ ಹಾಗೂ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುವುದರ ಜೊತೆಗೆ ರಾಜ್ಯದ ಶಾಸಕರಾಗಿ ಹಾಗೂ ಸಚಿವರಾಗಿ ದಕ್ಷ ಹಾಗೂ ಪ್ರಾಮಣಿಕತೆಯಿಂದ… pic.twitter.com/EccI0vLPZl

— Basavaraj S Bommai (@BSBommai) December 14, 2025

ಕೊಡುಗೈ ದಾನಿಯಾಗಿ ಶಾಮನೂರು – ಈಶ್ವರ್‌ ಖಂಡ್ರೆ
ವೀರಶೈವ ಲಿಂಗಾಯತ ಸಮಾಜದ ಗಣ್ಯರಾಗಿ, ನಾಯಕರಾಗಿ ನಮಗೆಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದ ನೇರ ನುಡಿಯ ವ್ಯಕ್ತಿ ಶಾಮನೂರು ಶಿವಶಂಕರಪ್ಪ. ಈ ಹಿಂದೆ ಅವರು ವಸತಿ ಸಚಿವರಾಗಿ ಮತ್ತು ಕೊಡುಗೈ ದಾನಿಯಾಗಿ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ. ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾದ ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ಸಾವಿರಾರು ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗಿದ್ದ ಶಾಮನೂರು ಅವರು ವೀರಶೈವ ಲಿಂಗಾಯತ ಸಮಾಜದ ಏಳಿಗೆಗಾಗಿ ಮತ್ತು ಸಂಘಟನೆ ಬಲಪಡಿಸಲು ಶ್ರಮಿಸಿದ್ದರು. ಅವರ ನಿಧನದಿಂದ ಒಬ್ಬ ಶ್ರೇಷ್ಠ ಮುತ್ಸದ್ದಿಯನ್ನ ಹಾಗೂ ಮಾರ್ಗದರ್ಶಕರನ್ನು ನಾವು ಕಳೆದುಕೊಂಡಿದ್ದೇವೆ. ವಿಧಾನಸಭೆಯಲ್ಲಿ ಅತ್ಯಂತ ಹಿರಿಯ ಸದಸ್ಯರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಈ ನೋವಿನ ಸಂದರ್ಭದಲ್ಲಿ ಸಚಿವ ಸಂಪುಟದ ಸಹೋದ್ಯೋಗಿಯಾದ ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ಅವರ ಕುಟುಂಬದ ಎಲ್ಲರಿಗೂ ಶಾಮನೂರ್ ಅಣ್ಣನವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಕಂಬನಿ ಮಿಡಿದಿದ್ದಾರೆ.

ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ಶಿವಾನಂದ ಪಾಟೀಲ
ಶಾಮನೂರು ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಖಜಾಂಚಿಯಾಗಿ ಸುದೀರ್ಘ ಅವಧಿಗೆ ಕೆಲಸ ಮಾಡಿರುವ ಅವರು, ಪಕ್ಷ ಸಂಘಟನೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಬಾಪೂಜಿ ಶಿಕ್ಷಣ ಸಂಸ್ಥೆ ಮೂಲಕ ದಾವಣಗೆರೆ ಜಿಲ್ಲೆ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಳಲು ಕಾರಣರಾಗಿದ್ದಾರೆ. ಅವರ ಅಗಲಿಕೆಯಿಂದ ಸಾರ್ವಜನಿಕ ಕ್ಷೇತ್ರಕ್ಕೆ ಅಷ್ಟೇ ಅಲ್ಲ, ಶಿಕ್ಷಣ ಕ್ಷೇತ್ರಕ್ಕೂ ತುಂಬಲಾರದ ನಷ್ಟವ ಉಂಟಾಗಿದೆ. ದಾವಣಗೆರೆ ಜಿಲ್ಲೆಯ ಪ್ರಗತಿ ಅವರ ದೂರದೃಷ್ಟಿಗೆ ಸಾಕ್ಷಿಯಾಗಿದೆ. ಸಚಿವರಾಗಿ, ಲೋಕಸಭಾ ಸದಸ್ಯರಾಗಿ ಅವರ ಕೊಡುಗೆ ಅನನ್ಯ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲು ಪ್ರಧಾರ್ಥಿಸುತ್ತೇನೆ ಎಂದು ಮರುಕ ವ್ಯಕ್ತಪಡಿಸಿದ್ದಾರೆ.

ಸಮಾಜಕ್ಕೆ ತುಂಬಲಾರದ ನಷ್ಟ: ಬೊಮ್ಮಾಯಿ
ಹಿರಿಯ ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರ ಶಿವಶಂಕರಪ್ಪ ರವರು ನಿಧನರಾದ ವಿಷಯ ತಿಳಿದು ನನಗೆ ಅತ್ಯಂತ ದುಃಖವಾಯಿತು. ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಔದ್ಯೋಗಿಕ ಕ್ಷೇತ್ರಗಳಲ್ಲಿ ಹಾಗೂ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುವುದರ ಜೊತೆಗೆ ರಾಜ್ಯದ ಶಾಸಕರಾಗಿ ಹಾಗೂ ಸಚಿವರಾಗಿ ದಕ್ಷ ಹಾಗೂ ಪ್ರಾಮಣಿಕತೆಯಿಂದ ಕಾರ್ಯನಿರ್ವಹಿಸಿದ್ದರು. ವಿಶೇಷವಾಗಿ ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಮಾಜವನ್ನು ಮುನ್ನಡೆಸಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಮತ್ತು ವಿಶೇಷವಾಗಿ ದಾವಣಗೆರೆ ಜಿಲ್ಲೆಗೆ, ವೀರಶೈವ ಸಮಾಜಕ್ಕೆ ಮತ್ತು ನನಗೆ ವಯಕ್ತಿಕವಾಗಿ ತುಂಬಲಾರದ ಹಾನಿಯಾಗಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನೀಡಲಿ ಹಾಗೂ ಮೃತರ ಆತ್ಮಕ್ಕೆ ಚಿರ ಶಾಂತಿ ದೊರೆಯಲೆಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಶಾಸಕರು, ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಶಾಮನೂರು ಶಿವಶಂಕಪ್ಪನವರು ವಿಧಿವಶರಾದ ಸುದ್ದಿ ಅತೀವ ಆಘಾತವನ್ನು ಉಂಟುಮಾಡಿದೆ. ಉದ್ಯಮಿಯಾಗಿ, ಶಾಸಕರಾಗಿ, ಸಚಿವರಾಗಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದ ಪ್ರಮುಖರಾಗಿ ಸಮಸ್ತ ಸಮಾಜದ ಏಕತೆ ಮತ್ತು… pic.twitter.com/wNhwFSCFE9

— Vijayendra Yediyurappa (@BYVijayendra) December 14, 2025

ವಿಜಯೇಂದ್ರ ಸಂತಾಪ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಶಾಸಕರು, ಮಾಜಿ ಸಚಿವರಾದ ಶಾಮನೂರು ಶಿವಶಂಕಪ್ಪನವರು ವಿಧಿವಶರಾದ ಸುದ್ದಿ ಅತೀವ ಆಘಾತವನ್ನು ಉಂಟುಮಾಡಿದೆ. ಉದ್ಯಮಿಯಾಗಿ, ಶಾಸಕರಾಗಿ, ಸಚಿವರಾಗಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದ ಪ್ರಮುಖರಾಗಿ ಸಮಸ್ತ ಸಮಾಜದ ಏಕತೆ ಮತ್ತು ಏಳಿಗೆಗಾಗಿ ನಿರಂತರ ಶ್ರಮಿಸಿದ್ದ ಇವರ ಅಗಲಿಕೆಯಿಂದ ನಾಡು ಒಬ್ಬ ಹಿರಿಯ ಸಾಧಕ ರಾಜಕಾರಣಿಯನ್ನು, ಸಮುದಾಯ ತನ್ನ ಹಿರಿಯ ಮಾಗದರ್ಶಕರನ್ನು ಕಳೆದುಕೊಂಡಿದೆ. ಶ್ರೀಯುತರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತಾ ಅವರಿಗೆ ನನ್ನ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ. ಅವರ ಕುಟುಂಬದವರಿಗೆ, ಅವರ ಅಪಾರ ಅಭಿಮಾನಿಗಳಿಗೆ ಹಿರಿಯರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ ಎಂದು ಕೋರುತ್ತಾ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪೋಸ್ಟ್‌ ಹಂಚಿಕೊಂಡಿದ್ದಾರೆ.

TAGGED:bengalurucongressdavanagereDK Shivakumarhd kumaraswamyprivate hospitalshamanur shivashankarappa
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
5 minutes ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
26 minutes ago
Kunigal MLA Ranganath
Bengaluru City

ಬರ್ತ್‌ಡೇ ಬಾಯ್ ಡಿಕೆಶಿಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’! – ಮೇ 15ರೊಳಗೆ ಸಿಗಲಿದೆ ಸಿಹಿ ಸುದ್ದಿ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
27 minutes ago
mother and daughter die after falling into agricultural pond in anekal
Bengaluru Rural

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗಳು ಸಾವು – ಪತಿ ವಿರುದ್ಧ ದೂರು

Public TV
By Public TV
29 minutes ago
ಸಾಂದರ್ಭಿಕ ಚಿತ್ರ
Bengaluru City

PGCET ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಣೆ – ಕೆಇಎ

Public TV
By Public TV
1 hour ago
Justice Swarana Kanta Sharma Arvind Kejriwal
Court

ಇದು ನನ್ನ ಸತ್ಯಾಗ್ರಹ – ಹಿಂದೆ ಸರಿಯಲ್ಲ ಎಂದು ಜಡ್ಜ್‌ ಹೇಳಿದ ಬೆನ್ನಲ್ಲೇ ವಿಚಾರಣೆಗೆ ಬರಲ್ಲ ಎಂದ ಕೇಜ್ರಿವಾಲ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?