Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿ ಸಮಾಧಿ ಪಕ್ಕದಲ್ಲೇ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಪತ್ನಿ ಸಮಾಧಿ ಪಕ್ಕದಲ್ಲೇ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ

Davanagere

ಪತ್ನಿ ಸಮಾಧಿ ಪಕ್ಕದಲ್ಲೇ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ

Public TV
Last updated: December 15, 2025 6:13 pm
Public TV
Share
3 Min Read
Shamanur Shivashankarappa 01 2
SHARE

– ಪಂಚಪೀಠಗಳ ಸ್ವಾಮೀಜಿಗಳಿಂದ ಅಂತಿಮ ವಿಧಿವಿಧಾನ

ದಾವಣಗೆರೆ: ರಾಜಕೀಯ ಮುತ್ಸದ್ದಿ, ದಾವಣಗೆರೆ ಧಣಿ, ಜನರಿಗಾಗಿಯೇ ಜೀವನ ಮುಡಿಪಿಟ್ಟ ಹಿರಿಯ ಜೀವ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ಇಹ ಲೋಕ ತ್ಯಜಿಸಿದ್ದು, ಇಂದು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.

Shamanur Shivashankarappa 03 1

ದಾವಣೆಗೆರೆಯ ಕಲ್ಲೇಶ್ವರ ರೈಸ್ ಮಿಲ್‌ನಲ್ಲಿ ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಅಂತಿಮ ಸಂಸ್ಕಾರದ ವಿಧಿವಿಧಾನ ನೆರವೇರಿಸಿದರು. ಶಾಮನೂರು ಪುತ್ರ ಎಸ್‌.ಎಸ್‌ ಮಲ್ಲಿಕಾರ್ಜುನ ಅವರೂ ಇದರಲ್ಲಿ ಪಾಲ್ಗೊಂಡರು.

ಅಂತ್ಯಕ್ರಿಯೆಯ ವೇಳೆ ಶಾಮನೂರರ ಪಾರ್ಥಿವ ಶರೀರಕ್ಕೆ ಪೊಲೀಸರು ತ್ರಿವರ್ಣ ಧ್ವಜ ಹೊದಿಸಿ ಗೌರವ ಸೂಚಿಸಿದರು, ಇದಾದಮೇಲೆ ಶಾಮನೂರು ಪುತ್ರ ಧ್ಚಜ ಸ್ವೀಕರಿಸಿದರು. ನಂತರ ರಾಷ್ಟ್ರಗೀತೆಯೊಂದಿಗೆ ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ವಿಶೇಷ ಗೌರವ ಸಲ್ಲಿಸಿದರು. ಬಳಿಕ ವಾದ್ಯವಂದನೆ ಅರ್ಪಿಸಿ, ಬಳಿಕ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.

Shamanur Shivashankarappa 01

ರಾಜಕೀಯ ಗಣ್ಯರಾದ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಸಚಿವರಾದ ಕೆಜೆ ಜಾರ್ಜ್, ಆರ್.ವಿ ದೇಶಪಾಂಡೆ, ಸತೀಶ್ ಜಾರಕಿಹೊಳಿ, ಜಮೀರ್ ಅಹಮ್ಮದ್, ಸುಧಾಕರ್, ಈಶ್ವರ್ ಖಂಡ್ರೆ, ಬಸವರಾಜ ರಾಯರಡ್ಡಿ, ವಿಜಯಾನಂದ ಕಾಶಪ್ಪನವರ್, ವಿಪಕ್ಷ ನಾಯಕ ಆರ್‌. ಅಶೋಕ್‌, ಸಿ.ಟಿ ರವಿ, ಸಿರಿಗೆರೆ ಶ್ರೀಗಳು, ವಚನಾನಂದಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಹಾಗೂ ಚರ್ಚ್‌ ಪಾದ್ರಿಗಳು ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದರು. ಸ್ಥಳೀಯ ಪೊಲೀಸ್ ಇಲಾಖೆಯಿಂದ ವಿಐಪಿಗಳಿಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗಿತ್ತು.

Shamanur Shivashankarappa 05

ಅಂತಿಮ ಸಿದ್ಧತೆ ಹೇಗಿತ್ತು?
ಮಾವನ ಅಂತ್ಯಸಂಸ್ಕಾರಕ್ಕೆ ಸೊಸೆ ಪ್ರಭಾ ಮಲ್ಲಿಕಾರ್ಜುನ್ ಅವರು ನಂದಾದೀಪ ಹಿಡಿದು ತಂದರು. ಕುಟುಂಬಸ್ಥರು ಬಿಲ್ವಪತ್ರೆ, ಬಾಳೆ ಎಲೆ, ವಿಭೂತಿಯ ಸಿದ್ಧತೆ ಮಾಡಿಕೊಂಡಿದ್ದರು. ಇದರೊಂದಿಗೆ ಸಿದ್ಧಗಂಗಾ ಮಠದಿಂದ 100 ವಿಭೂತಿಗಟ್ಟಿಗಳನ್ನೂ ಕಳಿಸಿಕೊಡಲಾಗಿತ್ತು. ಬಿದಿರು ಪಲ್ಲಕ್ಕಿಯಲ್ಲಿ ಪಾರ್ಥೀವ ಶರೀರ ಅಂತ್ಯಕ್ರಿಯೆಯ ಸ್ಥಳ ತಲುಪುತ್ತಿದ್ದಂತೆ ವೀರಶೈವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ಜರುಗಿದವು. ಇಹಲೋಕ ತ್ಯಜಿಸಿದವರಿಗೆ ಮೋಕ್ಷಸಿಗಲಿ ಎನ್ನುವ ನಿಟ್ಟಿನಲ್ಲಿ ಅರ್ಚಕರು ವಿಧಿವಿಧಾನ ನೆರವೇರಿಸಿದರು.

Shamanur Shivashankarappa 02

ಪಾರ್ಥೀವ ಶರೀರ ಮೆರವಣಿಗೆ
ಬೆಂಗಳೂರಿನ ಸದಾಶಿವನಗರದ ನಿವಾಸದಿಂದ ಮಧ್ಯರಾತ್ರಿ ಹೊರಟಿದ್ದ ಮೃತದೇಹ ಇಂದು ಬೆಳಗ್ಗೆ 4 ಗಂಟೆಯ ವೇಳೆಗೆ ದಾವಣಗೆರೆಗೆ ತಲುಪಿತು. ಮೊದಲು ಹಿರಿಯ ಮಗ ಎಸ್ಎಸ್ ಬಕ್ಕೇಶ್ ನಿವಾಸ ನಂತರ ಎಸ್.ಎಸ್ ಗಣೇಶ ಮನೆ, ಕೊನೆಗೆ 3ನೇ ಮಗ ಸಚಿವ ಎ.ಎಸ್ ಮಲ್ಲಿಕಾರ್ಜುನ್ ಮನೆಯಲ್ಲಿ ಕಣ್ವೆಕುಪ್ಪೆ ಶ್ರೀಗಳ ಸಮ್ಮುಖದಲ್ಲಿ ವಿಧಿ ವಿಧಾನ ನಡೆಯಿತು. ಮೂರು ಮನೆಗಳಲ್ಲಿ ವಿಧಿ ವಿಧಾನ ಮುಕ್ತಾಯದ ನಂತರ ಶಾಮನೂರು ಶಿವಶಂಕರಪ್ಪ ನಿವಾಸದ ಮುಂಭಾಗ ಸಾರ್ವಜನಿಕ ದರ್ಶನಕ್ಕೆ ಪಾರ್ಥೀವ ಶರೀರ ಇಡಲಾಗಿತ್ತು. ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ಹೈಸ್ಕೂಲ್‌ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು.

Shamanur Shivashankarappa 06

ಸಾರ್ವಜನಿಕರ ದರ್ಶನ ಮುಕ್ತಾಯದ ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ‌ ಮೆರವಣಿಗೆ ಸಾಗಿ ಹೈಸ್ಕೂಲ್ ಮೈದಾನದಿಂದ ಕಲ್ಲೇಶ್ವರ ರೈಸ್ ಮಿಲ್‌ವರೆಗೆ ಅಂತಿಮ ಯಾತ್ರೆ ನಡೆಯಿತು. ಹಳೇ ಕೋರ್ಟ್‌ ಮೈದಾನ, ರೇಣುಕಾ ಮಂದಿರ ಸರ್ಕಲ್, ಅರುಣ ಸರ್ಕಲ್, ಹೊಂಡದ ಸರ್ಕಲ್, ದುರ್ಗಾಂಬಿಕ ದೇವಾಸ್ಥಾನ, ಹಗೆದಿಬ್ಬಸರ್ಕಲ್, ಕಾಳಿಕಾಂಬ ದೇವಸ್ಥಾನ ರಸ್ತೆ, ಗ್ಯಾಸ್ ಕಟ್ಟೆ ಸರ್ಕಲ್, ಬಕ್ಕೇಶ್ವರ ದೇವಸ್ಥಾನದ ಮುಂಭಾಗ, ಹಾಸಭಾವಿ ಸರ್ಕಲ್, ಗಣೇಶ ದೇವಸ್ಥಾನ, ಅರಳಿ ಮರ ಸರ್ಕಲ್, ವೆಂಕಟೇಶ್ವರ ಸರ್ಕಲ್ ಮೂಲಕ ಕಲ್ಲೇಶ್ವರ ರೈಸ್ ಮಿಲ್‌ಗೆ ತರಲಾಯಿತು.

Shamanur Shivashankarappa 03

ನೆಚ್ಚಿನ ಜನನಾಯಕನ್ನ ಕಳೆದುಕೊಂಡ ಜನರಲ್ಲಿ ಮೌನ
ಇನ್ನೂ ಪಾರ್ಥೀವ ಶರೀರ ಮೆರವಣಿಗೆ ಹಿನ್ನೆಲೆ ಮಾರ್ಗದುದ್ದಕ್ಕೂ ಶಾಮನೂರರ ಫ್ಲೆಕ್ಸ್‌ಗಳನ್ನ ಅಳವಡಿಸಲಾಗಿತ್ತು. ಕ್ಷೇತ್ರದ ನೆಚ್ಚಿನ ಜನನಾಯಕನನ್ನ ಕಳೆದುಕೊಂಡು ಜನ ಕಣ್ಣೀರು ಹಾಕಿದ್ರು. ಇನ್ನೂ ಕೆಲವರು ಪಾರ್ಥೀವ ಶರೀರವಿದ್ದ ವಾಹನಕ್ಕೆ ಪುಷ್ಪಾರ್ಚನೆ ಸಲ್ಲಿಸಿದ್ರು.

TAGGED:bengalurucongressdavanagereFuneralprivate hospitalShamanur Shivashankarappa Funeralಅಂತ್ಯಕ್ರಿಯೆಡಿಕೆ ಶಿವಕುಮಾರ್ದಾವಣಗೆರೆಮಲ್ಲಿಕಾರ್ಜುನ ಖರ್ಗೆಶಾಮನೂರು ಶಿವಶಂಕರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

asia cup team india pakistan suryaklumar yadav
Cricket

ಭಾರತ-ಪಾಕ್‌ ಪಂದ್ಯ ರದ್ದಾದ್ರೆ 2,200 ಕೋಟಿ ಲಾಸ್‌!

Public TV
By Public TV
13 minutes ago
Donald Trump Narendra Modi
Latest

ಚೀನಾ, ಪಾಕ್‌, ಬಾಂಗ್ಲಾಗೆ ಹೋಲಿಸಿದ್ರೆ ಭಾರತಕ್ಕೆ ಈಗ ಕಡಿಮೆ ಸುಂಕ

Public TV
By Public TV
27 minutes ago
Maharashtra Man Kills 6 Year Old Daughter To Contest Panchayat Elections
Crime

ಚುನಾವಣೆಗೆ ಸ್ಪರ್ಧಿಸಲು ಮಗಳನ್ನೇ ಕೊಂದ ಪಾಪಿ ತಂದೆ!

Public TV
By Public TV
49 minutes ago
GBA
Karnataka

7 ಸಾವಿರ ಆಸ್ತಿಗಳ ಹರಾಜಿಗೆ ಮುಂದಾದ ಜಿಬಿಎ

Public TV
By Public TV
1 hour ago
Charmadi Ghat Wildfire
Chikkamagaluru

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು – ಎಕರೆಗಟ್ಟಲೆ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ

Public TV
By Public TV
2 hours ago
daily horoscope dina bhavishya
Astrology

ದಿನ ಭವಿಷ್ಯ 03-02-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?