Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿ ಸಮಾಧಿ ಪಕ್ಕದಲ್ಲೇ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಪತ್ನಿ ಸಮಾಧಿ ಪಕ್ಕದಲ್ಲೇ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ

Davanagere

ಪತ್ನಿ ಸಮಾಧಿ ಪಕ್ಕದಲ್ಲೇ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ

Public TV
Last updated: December 15, 2025 6:13 pm
Public TV
Share
3 Min Read
Shamanur Shivashankarappa 01 2
SHARE

– ಪಂಚಪೀಠಗಳ ಸ್ವಾಮೀಜಿಗಳಿಂದ ಅಂತಿಮ ವಿಧಿವಿಧಾನ

ದಾವಣಗೆರೆ: ರಾಜಕೀಯ ಮುತ್ಸದ್ದಿ, ದಾವಣಗೆರೆ ಧಣಿ, ಜನರಿಗಾಗಿಯೇ ಜೀವನ ಮುಡಿಪಿಟ್ಟ ಹಿರಿಯ ಜೀವ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ಇಹ ಲೋಕ ತ್ಯಜಿಸಿದ್ದು, ಇಂದು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.

Shamanur Shivashankarappa 03 1

ದಾವಣೆಗೆರೆಯ ಕಲ್ಲೇಶ್ವರ ರೈಸ್ ಮಿಲ್‌ನಲ್ಲಿ ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಅಂತಿಮ ಸಂಸ್ಕಾರದ ವಿಧಿವಿಧಾನ ನೆರವೇರಿಸಿದರು. ಶಾಮನೂರು ಪುತ್ರ ಎಸ್‌.ಎಸ್‌ ಮಲ್ಲಿಕಾರ್ಜುನ ಅವರೂ ಇದರಲ್ಲಿ ಪಾಲ್ಗೊಂಡರು.

ಅಂತ್ಯಕ್ರಿಯೆಯ ವೇಳೆ ಶಾಮನೂರರ ಪಾರ್ಥಿವ ಶರೀರಕ್ಕೆ ಪೊಲೀಸರು ತ್ರಿವರ್ಣ ಧ್ವಜ ಹೊದಿಸಿ ಗೌರವ ಸೂಚಿಸಿದರು, ಇದಾದಮೇಲೆ ಶಾಮನೂರು ಪುತ್ರ ಧ್ಚಜ ಸ್ವೀಕರಿಸಿದರು. ನಂತರ ರಾಷ್ಟ್ರಗೀತೆಯೊಂದಿಗೆ ಮೂರು ಸುತ್ತು ಕುಶಾಲತೋಪು ಸಿಡಿಸುವ ಮೂಲಕ ವಿಶೇಷ ಗೌರವ ಸಲ್ಲಿಸಿದರು. ಬಳಿಕ ವಾದ್ಯವಂದನೆ ಅರ್ಪಿಸಿ, ಬಳಿಕ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.

Shamanur Shivashankarappa 01

ರಾಜಕೀಯ ಗಣ್ಯರಾದ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಸಚಿವರಾದ ಕೆಜೆ ಜಾರ್ಜ್, ಆರ್.ವಿ ದೇಶಪಾಂಡೆ, ಸತೀಶ್ ಜಾರಕಿಹೊಳಿ, ಜಮೀರ್ ಅಹಮ್ಮದ್, ಸುಧಾಕರ್, ಈಶ್ವರ್ ಖಂಡ್ರೆ, ಬಸವರಾಜ ರಾಯರಡ್ಡಿ, ವಿಜಯಾನಂದ ಕಾಶಪ್ಪನವರ್, ವಿಪಕ್ಷ ನಾಯಕ ಆರ್‌. ಅಶೋಕ್‌, ಸಿ.ಟಿ ರವಿ, ಸಿರಿಗೆರೆ ಶ್ರೀಗಳು, ವಚನಾನಂದಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಹಾಗೂ ಚರ್ಚ್‌ ಪಾದ್ರಿಗಳು ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದರು. ಸ್ಥಳೀಯ ಪೊಲೀಸ್ ಇಲಾಖೆಯಿಂದ ವಿಐಪಿಗಳಿಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗಿತ್ತು.

Shamanur Shivashankarappa 05

ಅಂತಿಮ ಸಿದ್ಧತೆ ಹೇಗಿತ್ತು?
ಮಾವನ ಅಂತ್ಯಸಂಸ್ಕಾರಕ್ಕೆ ಸೊಸೆ ಪ್ರಭಾ ಮಲ್ಲಿಕಾರ್ಜುನ್ ಅವರು ನಂದಾದೀಪ ಹಿಡಿದು ತಂದರು. ಕುಟುಂಬಸ್ಥರು ಬಿಲ್ವಪತ್ರೆ, ಬಾಳೆ ಎಲೆ, ವಿಭೂತಿಯ ಸಿದ್ಧತೆ ಮಾಡಿಕೊಂಡಿದ್ದರು. ಇದರೊಂದಿಗೆ ಸಿದ್ಧಗಂಗಾ ಮಠದಿಂದ 100 ವಿಭೂತಿಗಟ್ಟಿಗಳನ್ನೂ ಕಳಿಸಿಕೊಡಲಾಗಿತ್ತು. ಬಿದಿರು ಪಲ್ಲಕ್ಕಿಯಲ್ಲಿ ಪಾರ್ಥೀವ ಶರೀರ ಅಂತ್ಯಕ್ರಿಯೆಯ ಸ್ಥಳ ತಲುಪುತ್ತಿದ್ದಂತೆ ವೀರಶೈವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ಜರುಗಿದವು. ಇಹಲೋಕ ತ್ಯಜಿಸಿದವರಿಗೆ ಮೋಕ್ಷಸಿಗಲಿ ಎನ್ನುವ ನಿಟ್ಟಿನಲ್ಲಿ ಅರ್ಚಕರು ವಿಧಿವಿಧಾನ ನೆರವೇರಿಸಿದರು.

Shamanur Shivashankarappa 02

ಪಾರ್ಥೀವ ಶರೀರ ಮೆರವಣಿಗೆ
ಬೆಂಗಳೂರಿನ ಸದಾಶಿವನಗರದ ನಿವಾಸದಿಂದ ಮಧ್ಯರಾತ್ರಿ ಹೊರಟಿದ್ದ ಮೃತದೇಹ ಇಂದು ಬೆಳಗ್ಗೆ 4 ಗಂಟೆಯ ವೇಳೆಗೆ ದಾವಣಗೆರೆಗೆ ತಲುಪಿತು. ಮೊದಲು ಹಿರಿಯ ಮಗ ಎಸ್ಎಸ್ ಬಕ್ಕೇಶ್ ನಿವಾಸ ನಂತರ ಎಸ್.ಎಸ್ ಗಣೇಶ ಮನೆ, ಕೊನೆಗೆ 3ನೇ ಮಗ ಸಚಿವ ಎ.ಎಸ್ ಮಲ್ಲಿಕಾರ್ಜುನ್ ಮನೆಯಲ್ಲಿ ಕಣ್ವೆಕುಪ್ಪೆ ಶ್ರೀಗಳ ಸಮ್ಮುಖದಲ್ಲಿ ವಿಧಿ ವಿಧಾನ ನಡೆಯಿತು. ಮೂರು ಮನೆಗಳಲ್ಲಿ ವಿಧಿ ವಿಧಾನ ಮುಕ್ತಾಯದ ನಂತರ ಶಾಮನೂರು ಶಿವಶಂಕರಪ್ಪ ನಿವಾಸದ ಮುಂಭಾಗ ಸಾರ್ವಜನಿಕ ದರ್ಶನಕ್ಕೆ ಪಾರ್ಥೀವ ಶರೀರ ಇಡಲಾಗಿತ್ತು. ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ಹೈಸ್ಕೂಲ್‌ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು.

Shamanur Shivashankarappa 06

ಸಾರ್ವಜನಿಕರ ದರ್ಶನ ಮುಕ್ತಾಯದ ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ‌ ಮೆರವಣಿಗೆ ಸಾಗಿ ಹೈಸ್ಕೂಲ್ ಮೈದಾನದಿಂದ ಕಲ್ಲೇಶ್ವರ ರೈಸ್ ಮಿಲ್‌ವರೆಗೆ ಅಂತಿಮ ಯಾತ್ರೆ ನಡೆಯಿತು. ಹಳೇ ಕೋರ್ಟ್‌ ಮೈದಾನ, ರೇಣುಕಾ ಮಂದಿರ ಸರ್ಕಲ್, ಅರುಣ ಸರ್ಕಲ್, ಹೊಂಡದ ಸರ್ಕಲ್, ದುರ್ಗಾಂಬಿಕ ದೇವಾಸ್ಥಾನ, ಹಗೆದಿಬ್ಬಸರ್ಕಲ್, ಕಾಳಿಕಾಂಬ ದೇವಸ್ಥಾನ ರಸ್ತೆ, ಗ್ಯಾಸ್ ಕಟ್ಟೆ ಸರ್ಕಲ್, ಬಕ್ಕೇಶ್ವರ ದೇವಸ್ಥಾನದ ಮುಂಭಾಗ, ಹಾಸಭಾವಿ ಸರ್ಕಲ್, ಗಣೇಶ ದೇವಸ್ಥಾನ, ಅರಳಿ ಮರ ಸರ್ಕಲ್, ವೆಂಕಟೇಶ್ವರ ಸರ್ಕಲ್ ಮೂಲಕ ಕಲ್ಲೇಶ್ವರ ರೈಸ್ ಮಿಲ್‌ಗೆ ತರಲಾಯಿತು.

Shamanur Shivashankarappa 03

ನೆಚ್ಚಿನ ಜನನಾಯಕನ್ನ ಕಳೆದುಕೊಂಡ ಜನರಲ್ಲಿ ಮೌನ
ಇನ್ನೂ ಪಾರ್ಥೀವ ಶರೀರ ಮೆರವಣಿಗೆ ಹಿನ್ನೆಲೆ ಮಾರ್ಗದುದ್ದಕ್ಕೂ ಶಾಮನೂರರ ಫ್ಲೆಕ್ಸ್‌ಗಳನ್ನ ಅಳವಡಿಸಲಾಗಿತ್ತು. ಕ್ಷೇತ್ರದ ನೆಚ್ಚಿನ ಜನನಾಯಕನನ್ನ ಕಳೆದುಕೊಂಡು ಜನ ಕಣ್ಣೀರು ಹಾಕಿದ್ರು. ಇನ್ನೂ ಕೆಲವರು ಪಾರ್ಥೀವ ಶರೀರವಿದ್ದ ವಾಹನಕ್ಕೆ ಪುಷ್ಪಾರ್ಚನೆ ಸಲ್ಲಿಸಿದ್ರು.

TAGGED:bengalurucongressdavanagereFuneralprivate hospitalShamanur Shivashankarappa Funeralಅಂತ್ಯಕ್ರಿಯೆಡಿಕೆ ಶಿವಕುಮಾರ್ದಾವಣಗೆರೆಮಲ್ಲಿಕಾರ್ಜುನ ಖರ್ಗೆಶಾಮನೂರು ಶಿವಶಂಕರಪ್ಪಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

DK Shivakumar 11
Districts

ಬಾಯಿ ಮುಚ್ಚಿಕೊಂಡಿದ್ರೆ ನನಗೂ ಒಳ್ಳೆದಾಗುತ್ತೆ – ಬೆಂಬಲಿಗರಿಗೆ ಡಿಕೆಶಿ ವಾರ್ನಿಂಗ್

Public TV
By Public TV
4 minutes ago
Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
47 minutes ago
Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
1 hour ago
HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
2 hours ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
2 hours ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?