Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 1978ರ ಇತಿಹಾಸ ಮರುಕಳಿಸಿದ ಅಜಿತ್ ಪವಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 1978ರ ಇತಿಹಾಸ ಮರುಕಳಿಸಿದ ಅಜಿತ್ ಪವಾರ್

Latest

1978ರ ಇತಿಹಾಸ ಮರುಕಳಿಸಿದ ಅಜಿತ್ ಪವಾರ್

Public TV
Last updated: November 23, 2019 8:30 pm
Public TV
Share
3 Min Read
Sharad Pawar Ajit Pawar
SHARE

-ಅಂದು ಸಿಎಂ ಸ್ಥಾನಕ್ಕಾಗಿ ಪಕ್ಷ ತೊರೆದಿದ್ದ ಶರದ್ ಪವಾರ್
-ಇಂದು ಅಣ್ಣನ ಮಗನಿಂದ ಹಿಸ್ಟರಿ ರಿಪೀಟ್

ಮುಂಬೈ: ಮಹಾರಾಷ್ಟ್ರದ ರಾಜಕಾರಣದಲ್ಲಿ 1978ರ ಇತಿಹಾಸ ಮರುಕಳಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಂದು ಅಧಿಕಾರಕ್ಕಾಗಿ ಪಕ್ಷ ತೊರೆದಿದ್ದ ಶರದ್ ಪವಾರ್ ಅವರ ನಡೆಯನ್ನ ಸೋದರನ ಮಗ ಅಜಿತ್ ಪವಾರ್ ಅನುಸರಿಸಿದ್ರಾ ಎಂಬ ಚರ್ಚೆಗಳು ಮಹಾ ಅಂಗಳದಲ್ಲಿ ಆರಂಭಗೊಂಡಿವೆ. ಅಜಿತ್ ಪವಾರ್ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡಿದ್ದು, ದೇವೇಂದ್ರ ಫಡ್ನವೀಸ್ ಎರಡನೇ ಬಾರಿ ಸಿಎಂ ಆಗಿದ್ದಾರೆ. ಇತ್ತ ಸುದ್ದಿಗೋಷ್ಠಿ ನಡೆಸಿದ ಅಜಿತ್ ಪವಾರ್ ನಿರ್ಧಾರಕ್ಕೂ ಎನ್‍ಸಿಪಿಗೂ ಯಾವುದೇ ಸಂಬಂಧವಿಲ್ಲ. ಅದು ಹೇಗೆ ಬಹುಮತ ಸಾಬೀತು ಮಾಡ್ತಾರೆ ಎಂದು ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಸವಾಲ್ ಹಾಕಿದ್ದಾರೆ.

Ajit Pawar 1

1977ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರು ಸೇರಿದಂತೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸಹ ಸೋತ ಪರಿಣಾಮ ಜನತಾ ಪಾರ್ಟಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಮಹಾರಾಷ್ಟ್ರದಲ್ಲಿ ಸಹ ಕಾಂಗ್ರೆಸ್ ಹಿರಿಯ ನಾಯಕರು ಸೋಲು ಕಂಡಿದ್ದರು. ಸೋಲಿನ ನೈತಿಕ ಹೊಣೆ ಹೊತ್ತು ಅಂದಿನ ಮಹಾರಾಷ್ಟ್ರ ಸಿಎಂ ಶಂಕರ್ ರಾವ್ ಚವಾಣ್ ತಮ್ಮ ಪದವಿಗೆ ರಾಜೀನಾಮೆ ನೀಡಿದ್ದರು. ವಸಂತ್ ದಾದಾ ಪಾಟೀಲ್ ಸಿಎಂ ಆಗಿ ಆಯ್ಕೆಯಾದರು. ನಂತರದ ಬೆಳವಣಿಗೆಯಲ್ಲಿ ಕೈ ಪಕ್ಷ ಇಬ್ಭಾಗವಾಯ್ತು. ಕಾಂಗ್ರೆಸ್ (ಯು) ಮತ್ತು ಕಾಂಗ್ರೆಸ್ (ಐ) ಎಂದು ವಿಗಂಡನೆ ಆಯ್ತು. ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ

ಕಾಂಗ್ರೆಸ್(ಯು)ಗೆ ಶರದ್ ಪವಾರ್ ಸೇರ್ಪಡೆ:
ಗುರು ಯಶವಂತ್ ರಾವ್ ಪಾಟೀಲ್ ಜೊತೆಯಲ್ಲಿ ಶರದ್ ಪವಾರ್ ಕಾಂಗ್ರೆಸ್ (ಯು) ಸೇರಿದರು. 1978ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್(ಯು) ಮತ್ತು ಕಾಂಗ್ರೆಸ್(ಐ) ಪ್ರತ್ಯೇಕವಾಗಿ ಚುನಾವಣೆಗೆ ಸ್ಪರ್ಧೆ ಮಾಡಿದವು. ಫಲಿತಾಂಶದ ಬಳಿಕ ಜನತಾ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಎರಡು ಪಾರ್ಟಿಗಳು ಮೈತ್ರಿ ರಚಿಸಿಕೊಂಡು ಸರ್ಕಾರ ರಚಿಸಿದ್ದರಿಂದ ವಸಂತ್ ದಾದಾ ಪಾಟೀಲ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೈತ್ರಿ ಸರ್ಕಾರದಲ್ಲಿ ಶರದ್ ಪವಾದ್ ಉದ್ಯೋಗ ಮತ್ತು ಕಾರ್ಮಿಕ ಸಚಿವರಾಗಿದ್ದರು. ಇದನ್ನೂ ಓದಿ: ಅಜಿತ್ ಪವಾರ್ ನಿರ್ಧಾರದೊಂದಿಗೆ ಎನ್‍ಸಿಪಿ ಇಲ್ಲ: ಶರದ್ ಪವಾರ್

Fadnvis Ajit Pawar

ಜುಲೈ 1978ರಲ್ಲಿ ಶರದ್ ಪವಾರ್ ತಮ್ಮ ಗುರು ಯಶವಂತ್ ರಾವ್ ಪಾಟೀಲ್ ಸಲಹೆ ಮೇರೆಗೆ ಬೆಂಬಲಿಗರೊಂದಿಗೆ ಕಾಂಗ್ರೆಸ್(ಯು)ನಿಂದ ಹೊರಬಂದು ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡರು. ಮೈತ್ರಿ ಬಳಿಕ ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ಮಾಡಿ 38ನೇ ವಯಸ್ಸಿನಲ್ಲಿಯೇ ಶರದ್ ಪವಾರ್ ಸಿಎಂ ಆದರು. ನಂತರ ಯಶವಂತ್ ಪಾಟೀಲ್ ಸಹ ಶರದ್ ಪವಾರ್ ಪಕ್ಷ ಸೇರ್ಪಡೆಗೊಂಡರು. 1980ರಲ್ಲಿ ಇಂದಿರಾ ಗಾಂಧಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಶರದ್ ಪವಾರ್ ನೇತೃತ್ವದ ಪ್ರೊಗ್ರೆಸಿವ್ ಫ್ರಂಟ್ ಸರ್ಕಾರ ಬಿತ್ತು. ಇದನ್ನೂ ಓದಿ: ಬಿಜೆಪಿಗೆ ಅಧಿಕಾರದ ಕುರ್ಚಿ ನೀಡಿದ ಅಜಿತ್ ಪವಾರ್ ಯಾರು? ಇಲ್ಲಿದೆ ಮಾಹಿತಿ

1987ರಲ್ಲಿ ಕಾಂಗ್ರೆಸ್(ಯು) ಕಾಂಗ್ರೆಸ್ ನಲ್ಲಿ ವಿಲೀನವಾಯ್ತು. 1988, 1990ರಲ್ಲಿ ಮತ್ತೆ ಶರದ್ ಪವಾರ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾದರು. 1999ರಲ್ಲಿ ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದನ್ನು ಪ್ರಶ್ನಿಸಿ ಶರದ್ ಪವಾರ್ ಪಕ್ಷದಿಂದ ಹೊರ ಬಂದಿದ್ದರು. ಪಿಎ ಸಂಗ್ಮಾ, ತರೀಖ್ ಅನ್ವರ್ ಸೇರಿ ಎನ್‍ಸಿಪಿ ರಚನೆ ಮಾಡಿ, ಪಕ್ಷದ ಅಧ್ಯಕ್ಷರಾದರು. ಇದನ್ನೂ ಓದಿ: ಕದ್ದುಮುಚ್ಚಿ ಮಾಡೋದು ನಮಗೆ ಗೊತ್ತಿಲ್ಲ: ಬಿಜೆಪಿ ವಿರುದ್ಧ ಠಾಕ್ರೆ ಕೆಂಡ

Devendra Fadnvis Ajit Pawar

ಹಿಸ್ಟರಿ ರಿಪೀಟ್: ಚಿಕ್ಕಪ್ಪನ ಪಕ್ಷದಿಂದ ಹೊರಬಂದಿರುವ ಅಜಿತ್ ಪವಾರ್ ಬಿಜೆಪಿಗೆ ಬೆಂಬಲ ಸೂಚಿಸಿ ಡಿಸಿಎಂ ಆಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಜನರು ನಿದ್ದೆಗಣ್ಣಿನಲ್ಲಿರುವಾಗಲೇ ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ ಮರುಕ್ಷಣದಲ್ಲಿಯೇ ಪ್ರಧಾನಿ ಮೋದಿ ಟ್ವಿಟ್ಟರ್ ಮೂಲಕ ಶುಭಾಶಯ ತಿಳಿಸಿದ್ದರು.

TAGGED:Ajit PawarbjpcongressMaharashtra PoliticsNCPPublic TVsharad pawarshiv senaಅಜಿತ್ ಪವಾರ್ಎನ್‍ಸಿಪಿಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಮಹಾರಾಷ್ಟ್ರ ರಾಜಕಾರಣಶರದ್ ಪವಾರ್ಶಿವಸೇನೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
8 minutes ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
29 minutes ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
31 minutes ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
1 hour ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
2 hours ago
Sadiq Pailwan 1
Bengaluru City

ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?