Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

1978ರ ಇತಿಹಾಸ ಮರುಕಳಿಸಿದ ಅಜಿತ್ ಪವಾರ್

Public TV
Last updated: November 23, 2019 8:30 pm
Public TV
Share
3 Min Read
Sharad Pawar Ajit Pawar
SHARE

-ಅಂದು ಸಿಎಂ ಸ್ಥಾನಕ್ಕಾಗಿ ಪಕ್ಷ ತೊರೆದಿದ್ದ ಶರದ್ ಪವಾರ್
-ಇಂದು ಅಣ್ಣನ ಮಗನಿಂದ ಹಿಸ್ಟರಿ ರಿಪೀಟ್

ಮುಂಬೈ: ಮಹಾರಾಷ್ಟ್ರದ ರಾಜಕಾರಣದಲ್ಲಿ 1978ರ ಇತಿಹಾಸ ಮರುಕಳಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಂದು ಅಧಿಕಾರಕ್ಕಾಗಿ ಪಕ್ಷ ತೊರೆದಿದ್ದ ಶರದ್ ಪವಾರ್ ಅವರ ನಡೆಯನ್ನ ಸೋದರನ ಮಗ ಅಜಿತ್ ಪವಾರ್ ಅನುಸರಿಸಿದ್ರಾ ಎಂಬ ಚರ್ಚೆಗಳು ಮಹಾ ಅಂಗಳದಲ್ಲಿ ಆರಂಭಗೊಂಡಿವೆ. ಅಜಿತ್ ಪವಾರ್ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡಿದ್ದು, ದೇವೇಂದ್ರ ಫಡ್ನವೀಸ್ ಎರಡನೇ ಬಾರಿ ಸಿಎಂ ಆಗಿದ್ದಾರೆ. ಇತ್ತ ಸುದ್ದಿಗೋಷ್ಠಿ ನಡೆಸಿದ ಅಜಿತ್ ಪವಾರ್ ನಿರ್ಧಾರಕ್ಕೂ ಎನ್‍ಸಿಪಿಗೂ ಯಾವುದೇ ಸಂಬಂಧವಿಲ್ಲ. ಅದು ಹೇಗೆ ಬಹುಮತ ಸಾಬೀತು ಮಾಡ್ತಾರೆ ಎಂದು ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಸವಾಲ್ ಹಾಕಿದ್ದಾರೆ.

Ajit Pawar 1

1977ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರು ಸೇರಿದಂತೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸಹ ಸೋತ ಪರಿಣಾಮ ಜನತಾ ಪಾರ್ಟಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಮಹಾರಾಷ್ಟ್ರದಲ್ಲಿ ಸಹ ಕಾಂಗ್ರೆಸ್ ಹಿರಿಯ ನಾಯಕರು ಸೋಲು ಕಂಡಿದ್ದರು. ಸೋಲಿನ ನೈತಿಕ ಹೊಣೆ ಹೊತ್ತು ಅಂದಿನ ಮಹಾರಾಷ್ಟ್ರ ಸಿಎಂ ಶಂಕರ್ ರಾವ್ ಚವಾಣ್ ತಮ್ಮ ಪದವಿಗೆ ರಾಜೀನಾಮೆ ನೀಡಿದ್ದರು. ವಸಂತ್ ದಾದಾ ಪಾಟೀಲ್ ಸಿಎಂ ಆಗಿ ಆಯ್ಕೆಯಾದರು. ನಂತರದ ಬೆಳವಣಿಗೆಯಲ್ಲಿ ಕೈ ಪಕ್ಷ ಇಬ್ಭಾಗವಾಯ್ತು. ಕಾಂಗ್ರೆಸ್ (ಯು) ಮತ್ತು ಕಾಂಗ್ರೆಸ್ (ಐ) ಎಂದು ವಿಗಂಡನೆ ಆಯ್ತು. ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ

ಕಾಂಗ್ರೆಸ್(ಯು)ಗೆ ಶರದ್ ಪವಾರ್ ಸೇರ್ಪಡೆ:
ಗುರು ಯಶವಂತ್ ರಾವ್ ಪಾಟೀಲ್ ಜೊತೆಯಲ್ಲಿ ಶರದ್ ಪವಾರ್ ಕಾಂಗ್ರೆಸ್ (ಯು) ಸೇರಿದರು. 1978ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್(ಯು) ಮತ್ತು ಕಾಂಗ್ರೆಸ್(ಐ) ಪ್ರತ್ಯೇಕವಾಗಿ ಚುನಾವಣೆಗೆ ಸ್ಪರ್ಧೆ ಮಾಡಿದವು. ಫಲಿತಾಂಶದ ಬಳಿಕ ಜನತಾ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಎರಡು ಪಾರ್ಟಿಗಳು ಮೈತ್ರಿ ರಚಿಸಿಕೊಂಡು ಸರ್ಕಾರ ರಚಿಸಿದ್ದರಿಂದ ವಸಂತ್ ದಾದಾ ಪಾಟೀಲ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೈತ್ರಿ ಸರ್ಕಾರದಲ್ಲಿ ಶರದ್ ಪವಾದ್ ಉದ್ಯೋಗ ಮತ್ತು ಕಾರ್ಮಿಕ ಸಚಿವರಾಗಿದ್ದರು. ಇದನ್ನೂ ಓದಿ: ಅಜಿತ್ ಪವಾರ್ ನಿರ್ಧಾರದೊಂದಿಗೆ ಎನ್‍ಸಿಪಿ ಇಲ್ಲ: ಶರದ್ ಪವಾರ್

Fadnvis Ajit Pawar

ಜುಲೈ 1978ರಲ್ಲಿ ಶರದ್ ಪವಾರ್ ತಮ್ಮ ಗುರು ಯಶವಂತ್ ರಾವ್ ಪಾಟೀಲ್ ಸಲಹೆ ಮೇರೆಗೆ ಬೆಂಬಲಿಗರೊಂದಿಗೆ ಕಾಂಗ್ರೆಸ್(ಯು)ನಿಂದ ಹೊರಬಂದು ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡರು. ಮೈತ್ರಿ ಬಳಿಕ ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ಮಾಡಿ 38ನೇ ವಯಸ್ಸಿನಲ್ಲಿಯೇ ಶರದ್ ಪವಾರ್ ಸಿಎಂ ಆದರು. ನಂತರ ಯಶವಂತ್ ಪಾಟೀಲ್ ಸಹ ಶರದ್ ಪವಾರ್ ಪಕ್ಷ ಸೇರ್ಪಡೆಗೊಂಡರು. 1980ರಲ್ಲಿ ಇಂದಿರಾ ಗಾಂಧಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಶರದ್ ಪವಾರ್ ನೇತೃತ್ವದ ಪ್ರೊಗ್ರೆಸಿವ್ ಫ್ರಂಟ್ ಸರ್ಕಾರ ಬಿತ್ತು. ಇದನ್ನೂ ಓದಿ: ಬಿಜೆಪಿಗೆ ಅಧಿಕಾರದ ಕುರ್ಚಿ ನೀಡಿದ ಅಜಿತ್ ಪವಾರ್ ಯಾರು? ಇಲ್ಲಿದೆ ಮಾಹಿತಿ

1987ರಲ್ಲಿ ಕಾಂಗ್ರೆಸ್(ಯು) ಕಾಂಗ್ರೆಸ್ ನಲ್ಲಿ ವಿಲೀನವಾಯ್ತು. 1988, 1990ರಲ್ಲಿ ಮತ್ತೆ ಶರದ್ ಪವಾರ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾದರು. 1999ರಲ್ಲಿ ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದನ್ನು ಪ್ರಶ್ನಿಸಿ ಶರದ್ ಪವಾರ್ ಪಕ್ಷದಿಂದ ಹೊರ ಬಂದಿದ್ದರು. ಪಿಎ ಸಂಗ್ಮಾ, ತರೀಖ್ ಅನ್ವರ್ ಸೇರಿ ಎನ್‍ಸಿಪಿ ರಚನೆ ಮಾಡಿ, ಪಕ್ಷದ ಅಧ್ಯಕ್ಷರಾದರು. ಇದನ್ನೂ ಓದಿ: ಕದ್ದುಮುಚ್ಚಿ ಮಾಡೋದು ನಮಗೆ ಗೊತ್ತಿಲ್ಲ: ಬಿಜೆಪಿ ವಿರುದ್ಧ ಠಾಕ್ರೆ ಕೆಂಡ

Devendra Fadnvis Ajit Pawar

ಹಿಸ್ಟರಿ ರಿಪೀಟ್: ಚಿಕ್ಕಪ್ಪನ ಪಕ್ಷದಿಂದ ಹೊರಬಂದಿರುವ ಅಜಿತ್ ಪವಾರ್ ಬಿಜೆಪಿಗೆ ಬೆಂಬಲ ಸೂಚಿಸಿ ಡಿಸಿಎಂ ಆಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಜನರು ನಿದ್ದೆಗಣ್ಣಿನಲ್ಲಿರುವಾಗಲೇ ಮಹಾರಾಷ್ಟ್ರದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ ಮರುಕ್ಷಣದಲ್ಲಿಯೇ ಪ್ರಧಾನಿ ಮೋದಿ ಟ್ವಿಟ್ಟರ್ ಮೂಲಕ ಶುಭಾಶಯ ತಿಳಿಸಿದ್ದರು.

TAGGED:Ajit PawarbjpcongressMaharashtra PoliticsNCPPublic TVsharad pawarshiv senaಅಜಿತ್ ಪವಾರ್ಎನ್‍ಸಿಪಿಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಮಹಾರಾಷ್ಟ್ರ ರಾಜಕಾರಣಶರದ್ ಪವಾರ್ಶಿವಸೇನೆ
Share This Article
Facebook Whatsapp Whatsapp Telegram

Cinema Updates

Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood
Olle Hugda Pratham ramya
`I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್
Cinema Latest Sandalwood Top Stories
Ramya 4
ʻಡಿʼ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌ – ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಪರಮೇಶ್ವರ್‌
Bengaluru City Cinema Districts Karnataka Latest Sandalwood
Actress Rakshith Prem and Ramya
`ದಯೆಯಿಂದಿರಿ’ ಡಿ-ಬಾಸ್ ಫ್ಯಾನ್ಸ್‌ಗೆ ರಕ್ಷಿತಾ ಕಿವಿಮಾತು – ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ರಾ ಕ್ರೇಜಿ ಕ್ವೀನ್?
Cinema Latest Sandalwood Top Stories

You Might Also Like

NS BOSERAJU
Bengaluru City

ರಾಜ್ಯದಲ್ಲಿ ಸಿಎಂ ಬದಲಾವಣೆ ಅನ್ನೋದು ಬಿಜೆಪಿ ಸೃಷ್ಟಿ: ಬೋಸರಾಜು

Public TV
By Public TV
6 minutes ago
H C Mahadevappa
Bengaluru City

ಮಲ್ಲಿಕಾರ್ಜುನ ಖರ್ಗೆಯವರಿಗೆ ಎಲ್ಲಾ ಹುದ್ದೆ ಅನುಭವಿಸುವ ಅರ್ಹತೆ ಇದೆ: ಮಹದೇವಪ್ಪ

Public TV
By Public TV
20 minutes ago
Indian Army
Latest

Operation MAHADEV | ಪಹಲ್ಗಾಮ್‌ ದಾಳಿಯ ಮೂವರು ಶಂಕಿತ ಉಗ್ರರನ್ನು ಹತ್ಯೆಗೈದ ಸೇನೆ

Public TV
By Public TV
24 minutes ago
Pahalgam Terrorists
Latest

Operation Mahadev | ಪಹಲ್ಗಾಮ್‌ ನರಮೇಧಕ್ಕೆ ಕಾರಣವಾಗಿದ್ದ ಪ್ರಮುಖ ಉಗ್ರ ಯೋಧರ ಗುಂಡಿಗೆ ಬಲಿ

Public TV
By Public TV
25 minutes ago
BBMP
Districts

ನವೆಂಬರ್-ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ಅನುಮಾನ?

Public TV
By Public TV
37 minutes ago
mahadevappa
Bengaluru City

ಕಾನೂನು, ಕಾಯ್ದೆ ಪ್ರಕಾರವೇ ಗ್ಯಾರಂಟಿಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣ ಬಳಕೆ: ಮಹದೇವಪ್ಪ

Public TV
By Public TV
38 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?