Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಶ್ಮೀರದ ಗಡಿಯಲ್ಲಿ ಪುನರ್ ನಿರ್ಮಾಣಗೊಂಡ ಶಾರದಾ ಮಂದಿರ ಅಮಿತ್ ಶಾರಿಂದ ಲೋಕಾರ್ಪಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಶ್ಮೀರದ ಗಡಿಯಲ್ಲಿ ಪುನರ್ ನಿರ್ಮಾಣಗೊಂಡ ಶಾರದಾ ಮಂದಿರ ಅಮಿತ್ ಶಾರಿಂದ ಲೋಕಾರ್ಪಣೆ

Latest

ಕಾಶ್ಮೀರದ ಗಡಿಯಲ್ಲಿ ಪುನರ್ ನಿರ್ಮಾಣಗೊಂಡ ಶಾರದಾ ಮಂದಿರ ಅಮಿತ್ ಶಾರಿಂದ ಲೋಕಾರ್ಪಣೆ

Public TV
Last updated: March 22, 2023 6:53 pm
Public TV
Share
2 Min Read
AMITSHAH
SHARE

ನವದೆಹಲಿ: ಜಮ್ಮು-ಕಾಶ್ಮೀರ (Jammu Kashmir) ದ ಕುಪ್ವಾರ ಜಿಲ್ಲೆಯಲ್ಲಿ ಪುನರ್ ನಿರ್ಮಾಣಗೊಂಡ ಶಾರದಾ ಮಂದಿರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (AmitShah) ಅವರು ವರ್ಚುವಲ್ ಕಾರ್ಯಕ್ರಮದ ಮೂಲಕ ಲೋಕಾರ್ಪಣೆಗೊಳಿಸಿದರು. 1948ರಲ್ಲಿ ಪಾಕಿಸ್ತಾನಿ ಮೂಲಭೂತವಾದಿಗಳ ಆಕ್ರಮಣದಿಂದ ಸಂಪೂರ್ಣ ಹಾನಿಗೊಳಗಾಗಿದ್ದ ಶಾರದಾ ಮಂದಿರವನ್ನು ಆರ್ಟಿಕಲ್ 370 ರದ್ದತಿ ನಂತರ ಪುನರ್ ನಿರ್ಮಾಣಗೊಳಿಸಿ ಯುಗಾದಿಯ ಶುಭ ದಿನದಂದು ಲೋಕಾರ್ಪಣೆಗೊಳಿಸಿದ್ದು, ಅತ್ಯಂತ ಮಹತ್ವ ಪಡೆದುಕೊಂಡಿದೆ. ಕರ್ನಾಟಕದ ಬಿಡದಿಯ ಗ್ರಾನೈಟ್ ಬಳಕೆಯಿಂದ ನಿರ್ಮಿತವಾಗಿರುವ ಮಂದಿರದಲ್ಲಿ, ಶೃಂಗೇರಿ ಶಾರದ ಮಠದಿಂದ (Sringeri Sharada Mutt) ಪಂಚಲೋಹದ ಶಾರದಾ ಮೂರ್ತಿ ಪ್ರತಿಷ್ಠಾಪನೆಗೊಂಡಿದ್ದು ಗಮನಾರ್ಹ. ಜನವರಿ 24 ರಿಂದ ದೇಶಾದ್ಯಂತ ಸಂಚರಿಸಿ ತೀತ್ವಾಲ್ ತಲುಪಿರುವ ಮೂರ್ತಿಯು ಇಂದು ಸ್ಥಾಪನೆಗೊಂಡಿದೆ.

AMITSHAH

ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ಇಂದು ಪುನರ್ನಿರ್ಮಾಣಗೊಂಡಿರುವ ಶಾರದಾ ಮಂದಿರದ ಲೋಕಾರ್ಪಣೆ ಕಾರ್ಯಕ್ರಮವು ಅತ್ಯಂತ ಮಹತ್ವದ್ದಾಗಿದೆ. ಒಂದು ಕಾಲದಲ್ಲಿ ಉತ್ಕೃಷ್ಟ ಜ್ಞಾನದ ಕೇಂದ್ರವೆಂದು ಪರಿಗಣಿಸಲಾಗುತ್ತಿದ್ದ ಶಾರದಾ ಪೀಠಕ್ಕೆ ಭರತ ಖಂಡದ ಸಮಸ್ತ ಭಾಗಗಳಿಂದ ಜ್ಞಾನಾರ್ಜನೆಗಾಗಿ ಪಂಡಿತರು ಆಗಮಿಸುತ್ತಿದ್ದುದರಿಂದ ಮಹಾಶಕ್ತಿ ಪೀಠವೆಂದು ಕೂಡ ಕರೆಯಲ್ಪಡುತ್ತದೆ. ಆದಿ ಶಂಕರರು ಇಲ್ಲಿ ತಾಯಿ ಶಾರದೆ ಕುರಿತಾಗಿ ಅನೇಕ ಸ್ತುತಿಗಳನ್ನು ರಚಿಸಿದ್ದು ಕೂಡ ಉಲ್ಲೇಖನೀಯ. ಆರ್ಟಿಕಲ್ 370 ರದ್ದತಿ ನಂತರ ಇಡೀ ಕಾಶ್ಮೀರ ಪ್ರಗತಿ ಪಥದಲ್ಲಿ ಸಾಗುತ್ತಿದ್ದು, ಸನಾತನ, ಸಾಂಸ್ಕೃತಿಕ ಪುನರುತ್ಥಾನ ಕೂಡ ಇಲ್ಲಿ ನಡೆಯುತ್ತಿರುವುದು ಹೊಸ ಅಧ್ಯಾಯವೊಂದಕ್ಕೆ ಸಾಕ್ಷಿಯಾಗುತ್ತಿರುವುದು ಗಮನಾರ್ಹ. ಶಾರದಾ ಮಂದಿರಕ್ಕೆ ಆದಿ ಶಂಕರರ ಕಾಲದಲ್ಲಿದ್ದ ಭವ್ಯತೆಯನ್ನು ಮತ್ತೊಮ್ಮೆ ಪುನರ್ ಸ್ಥಾಪಿಸುವ ಕಾರ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಖರ್ಗೆ ತವರು ಜಿಲ್ಲೆಯಲ್ಲಿ ಆಪರೇಷನ್ ಹಸ್ತ- ಹಾಲಿ ಬಿಜೆಪಿ ಶಾಸಕರಿಗೆ ಗಾಳ

tejaswi surya 1

ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ (Tejaswi Surya), ಜಮ್ಮು-ಕಾಶ್ಮೀರದ ಕಿಶನ್ ಗಂಗಾ ನದಿಯ ದಡದಲ್ಲಿ ಇಂದು ಶಾರದಾ ಮಂದಿರವು ಲೋಕಾರ್ಪಣೆಗೊಂಡಿದ್ದು, ದಕ್ಷಿಣ ಭಾರತದ ನಮ್ಮ ಶೃಂಗೇರಿ ಶಂಕರಾಚಾರ್ಯರ ಆಶೀರ್ವಾದವಿದೆ. 1 ಸಾವಿರ ವರ್ಷದ ಹಿಂದೆ ಸನಾತನ ಪರಂಪರೆಯ ಪುನರುತ್ಥಾನದ ಉದ್ದೇಶದಿಂದ ದೇಶದ ನಾಲ್ಕೂ ಭಾಗಗಳಲ್ಲಿ ಶಾರದಾ ಪೀಠ ಸ್ಥಾಪನೆ ಮಾಡಿ ಏಕ್ ಭಾರತ್, ಶ್ರೇಷ್ಠ ಭಾರತ್ ಪರಿಕಲ್ಪನೆಗೆ ಬುನಾದಿ ಹಾಕಿದ್ದು, ಇಂದು ಕರ್ನಾಟಕದ ತುಂಗಾ ತೀರದಿಂದ ಕಾಶ್ಮೀರದ ಕಿಶನ್ ಗಂಗಾ ನದಿ ದಡದ ವರೆಗೆ ಮತ್ತೊಮ್ಮೆ ತಾಯಿ ಶಾರದಾಂಬೆಯ ಪುನರುಜ್ಜೀವನ, ಪುನರುತ್ಥಾನ ಕಾರ್ಯ ಶ್ಲಾಘನೀಯ. ಪ್ರಧಾನಿ ನರೇಂದ್ರ ಮೋದಿ (Narendra Modi) & ಗೃಹ ಸಚಿವ ಅಮಿತ್ ಶಾ ರವರ ದಿಟ್ಟ ನಿರ್ಧಾರದಿಂದ ಕಾಶ್ಮೀರದಲ್ಲಿ ವಿಧಿ 370 ರದ್ದುಗೊಂಡ ನಂತರ ಅಲ್ಲಿ ಶಾಂತಿ ಸ್ಥಾಪನೆಯಾಗಿದ್ದು, ದೇಶವಾಸಿಗಳಲ್ಲಿ ಸಂಪೂರ್ಣ ಸುರಕ್ಷತೆಯ ಭಾವ ಮೂಡಿದೆ. ಇಂತಹ ಶ್ಲಾಘನೀಯ, ಪುನರುತ್ಥಾನ ಕಾರ್ಯಗಳಿಗೆ ಇಂದು ಮತ್ತೆ ಬಲ ಬಂದಿದ್ದು, ಇದರಿಂದ ಪ್ರವಾಸೋದ್ಯಮ, ತೀರ್ಥಯಾತ್ರೆಯ ಕಾರಣಗಳಿಗಾಗಿ ಹೆಚ್ಚಿನ ಪ್ರವಾಸಿಗರು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವುದು ಗಮನಾರ್ಹ. ಈ ಅಭಿನಂದನಾರ್ಹ ಕಾರ್ಯಕ್ಕೆ ನಾನು ಸಮಸ್ತ ಕನ್ನಡಿಗರ ಪರವಾಗಿ ನರೇಂದ್ರ ಮೋದಿ, ಅಮಿತ್ ಶಾಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದರು.

AMITSHAH 1

ಈ ವೇಳೆ ನಾನ್ ಕನಾ ಸಾಹಿಬ್ ಭೇಟಿಗೆ ಕರ್ತಾರ್ಪುರ ಕಾರಿಡಾರ್ ಆರಂಭಿಸಿದಂತೆ, ಗಡಿಯಾಚೆಗಿನ ಶಾರದಾ ಪೀಠಕ್ಕೆ ಕೂಡ ವಾರ್ಷಿಕ ತೀರ್ಥಯಾತ್ರೆ ಆಯೋಜನೆ ಕುರಿತು ಪರಿಶೀಲನೆ ನಡೆಸುವುದಾಗಿ ಸಚಿವ ಅಮಿತ್ ಶಾ ತಿಳಿಸಿದ್ದು ಗಮನಾರ್ಹ. ಈ ಕಾರ್ಯಕ್ರಮದಲ್ಲಿ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ರವೀಂದ್ರ ರೈನಾ (ಅಧ್ಯಕ್ಷರು, ಜಮ್ಮು ಕಾಶ್ಮೀರ ಬಿಜೆಪಿ ಘಟಕ) ಮತ್ತು Sಚಿve Shಚಿಡಿಚಿಜಚಿ ಕಮಿಟಿ ಸದಸ್ಯರು ಭಾಗವಹಿಸಿದ್ದರು.

TAGGED:AmitShahnewdelhisringeri muttTejaswi Suryaಅಮಿತ್ ಶಾತೇಜಸ್ವಿ ಸೂರ್ಯನವದೆಹಲಿಶೃಂಗೇರಿ ಮಠ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
4 hours ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
5 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
5 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
5 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
6 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?