Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಕಾಶ್ಮೀರದ ಗಡಿಯಲ್ಲಿ ಪುನರ್ ನಿರ್ಮಾಣಗೊಂಡ ಶಾರದಾ ಮಂದಿರ ಅಮಿತ್ ಶಾರಿಂದ ಲೋಕಾರ್ಪಣೆ

Public TV
Last updated: March 22, 2023 6:53 pm
Public TV
Share
2 Min Read
AMITSHAH
SHARE

ನವದೆಹಲಿ: ಜಮ್ಮು-ಕಾಶ್ಮೀರ (Jammu Kashmir) ದ ಕುಪ್ವಾರ ಜಿಲ್ಲೆಯಲ್ಲಿ ಪುನರ್ ನಿರ್ಮಾಣಗೊಂಡ ಶಾರದಾ ಮಂದಿರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (AmitShah) ಅವರು ವರ್ಚುವಲ್ ಕಾರ್ಯಕ್ರಮದ ಮೂಲಕ ಲೋಕಾರ್ಪಣೆಗೊಳಿಸಿದರು. 1948ರಲ್ಲಿ ಪಾಕಿಸ್ತಾನಿ ಮೂಲಭೂತವಾದಿಗಳ ಆಕ್ರಮಣದಿಂದ ಸಂಪೂರ್ಣ ಹಾನಿಗೊಳಗಾಗಿದ್ದ ಶಾರದಾ ಮಂದಿರವನ್ನು ಆರ್ಟಿಕಲ್ 370 ರದ್ದತಿ ನಂತರ ಪುನರ್ ನಿರ್ಮಾಣಗೊಳಿಸಿ ಯುಗಾದಿಯ ಶುಭ ದಿನದಂದು ಲೋಕಾರ್ಪಣೆಗೊಳಿಸಿದ್ದು, ಅತ್ಯಂತ ಮಹತ್ವ ಪಡೆದುಕೊಂಡಿದೆ. ಕರ್ನಾಟಕದ ಬಿಡದಿಯ ಗ್ರಾನೈಟ್ ಬಳಕೆಯಿಂದ ನಿರ್ಮಿತವಾಗಿರುವ ಮಂದಿರದಲ್ಲಿ, ಶೃಂಗೇರಿ ಶಾರದ ಮಠದಿಂದ (Sringeri Sharada Mutt) ಪಂಚಲೋಹದ ಶಾರದಾ ಮೂರ್ತಿ ಪ್ರತಿಷ್ಠಾಪನೆಗೊಂಡಿದ್ದು ಗಮನಾರ್ಹ. ಜನವರಿ 24 ರಿಂದ ದೇಶಾದ್ಯಂತ ಸಂಚರಿಸಿ ತೀತ್ವಾಲ್ ತಲುಪಿರುವ ಮೂರ್ತಿಯು ಇಂದು ಸ್ಥಾಪನೆಗೊಂಡಿದೆ.

AMITSHAH

ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ಇಂದು ಪುನರ್ನಿರ್ಮಾಣಗೊಂಡಿರುವ ಶಾರದಾ ಮಂದಿರದ ಲೋಕಾರ್ಪಣೆ ಕಾರ್ಯಕ್ರಮವು ಅತ್ಯಂತ ಮಹತ್ವದ್ದಾಗಿದೆ. ಒಂದು ಕಾಲದಲ್ಲಿ ಉತ್ಕೃಷ್ಟ ಜ್ಞಾನದ ಕೇಂದ್ರವೆಂದು ಪರಿಗಣಿಸಲಾಗುತ್ತಿದ್ದ ಶಾರದಾ ಪೀಠಕ್ಕೆ ಭರತ ಖಂಡದ ಸಮಸ್ತ ಭಾಗಗಳಿಂದ ಜ್ಞಾನಾರ್ಜನೆಗಾಗಿ ಪಂಡಿತರು ಆಗಮಿಸುತ್ತಿದ್ದುದರಿಂದ ಮಹಾಶಕ್ತಿ ಪೀಠವೆಂದು ಕೂಡ ಕರೆಯಲ್ಪಡುತ್ತದೆ. ಆದಿ ಶಂಕರರು ಇಲ್ಲಿ ತಾಯಿ ಶಾರದೆ ಕುರಿತಾಗಿ ಅನೇಕ ಸ್ತುತಿಗಳನ್ನು ರಚಿಸಿದ್ದು ಕೂಡ ಉಲ್ಲೇಖನೀಯ. ಆರ್ಟಿಕಲ್ 370 ರದ್ದತಿ ನಂತರ ಇಡೀ ಕಾಶ್ಮೀರ ಪ್ರಗತಿ ಪಥದಲ್ಲಿ ಸಾಗುತ್ತಿದ್ದು, ಸನಾತನ, ಸಾಂಸ್ಕೃತಿಕ ಪುನರುತ್ಥಾನ ಕೂಡ ಇಲ್ಲಿ ನಡೆಯುತ್ತಿರುವುದು ಹೊಸ ಅಧ್ಯಾಯವೊಂದಕ್ಕೆ ಸಾಕ್ಷಿಯಾಗುತ್ತಿರುವುದು ಗಮನಾರ್ಹ. ಶಾರದಾ ಮಂದಿರಕ್ಕೆ ಆದಿ ಶಂಕರರ ಕಾಲದಲ್ಲಿದ್ದ ಭವ್ಯತೆಯನ್ನು ಮತ್ತೊಮ್ಮೆ ಪುನರ್ ಸ್ಥಾಪಿಸುವ ಕಾರ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಖರ್ಗೆ ತವರು ಜಿಲ್ಲೆಯಲ್ಲಿ ಆಪರೇಷನ್ ಹಸ್ತ- ಹಾಲಿ ಬಿಜೆಪಿ ಶಾಸಕರಿಗೆ ಗಾಳ

tejaswi surya 1

ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ (Tejaswi Surya), ಜಮ್ಮು-ಕಾಶ್ಮೀರದ ಕಿಶನ್ ಗಂಗಾ ನದಿಯ ದಡದಲ್ಲಿ ಇಂದು ಶಾರದಾ ಮಂದಿರವು ಲೋಕಾರ್ಪಣೆಗೊಂಡಿದ್ದು, ದಕ್ಷಿಣ ಭಾರತದ ನಮ್ಮ ಶೃಂಗೇರಿ ಶಂಕರಾಚಾರ್ಯರ ಆಶೀರ್ವಾದವಿದೆ. 1 ಸಾವಿರ ವರ್ಷದ ಹಿಂದೆ ಸನಾತನ ಪರಂಪರೆಯ ಪುನರುತ್ಥಾನದ ಉದ್ದೇಶದಿಂದ ದೇಶದ ನಾಲ್ಕೂ ಭಾಗಗಳಲ್ಲಿ ಶಾರದಾ ಪೀಠ ಸ್ಥಾಪನೆ ಮಾಡಿ ಏಕ್ ಭಾರತ್, ಶ್ರೇಷ್ಠ ಭಾರತ್ ಪರಿಕಲ್ಪನೆಗೆ ಬುನಾದಿ ಹಾಕಿದ್ದು, ಇಂದು ಕರ್ನಾಟಕದ ತುಂಗಾ ತೀರದಿಂದ ಕಾಶ್ಮೀರದ ಕಿಶನ್ ಗಂಗಾ ನದಿ ದಡದ ವರೆಗೆ ಮತ್ತೊಮ್ಮೆ ತಾಯಿ ಶಾರದಾಂಬೆಯ ಪುನರುಜ್ಜೀವನ, ಪುನರುತ್ಥಾನ ಕಾರ್ಯ ಶ್ಲಾಘನೀಯ. ಪ್ರಧಾನಿ ನರೇಂದ್ರ ಮೋದಿ (Narendra Modi) & ಗೃಹ ಸಚಿವ ಅಮಿತ್ ಶಾ ರವರ ದಿಟ್ಟ ನಿರ್ಧಾರದಿಂದ ಕಾಶ್ಮೀರದಲ್ಲಿ ವಿಧಿ 370 ರದ್ದುಗೊಂಡ ನಂತರ ಅಲ್ಲಿ ಶಾಂತಿ ಸ್ಥಾಪನೆಯಾಗಿದ್ದು, ದೇಶವಾಸಿಗಳಲ್ಲಿ ಸಂಪೂರ್ಣ ಸುರಕ್ಷತೆಯ ಭಾವ ಮೂಡಿದೆ. ಇಂತಹ ಶ್ಲಾಘನೀಯ, ಪುನರುತ್ಥಾನ ಕಾರ್ಯಗಳಿಗೆ ಇಂದು ಮತ್ತೆ ಬಲ ಬಂದಿದ್ದು, ಇದರಿಂದ ಪ್ರವಾಸೋದ್ಯಮ, ತೀರ್ಥಯಾತ್ರೆಯ ಕಾರಣಗಳಿಗಾಗಿ ಹೆಚ್ಚಿನ ಪ್ರವಾಸಿಗರು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವುದು ಗಮನಾರ್ಹ. ಈ ಅಭಿನಂದನಾರ್ಹ ಕಾರ್ಯಕ್ಕೆ ನಾನು ಸಮಸ್ತ ಕನ್ನಡಿಗರ ಪರವಾಗಿ ನರೇಂದ್ರ ಮೋದಿ, ಅಮಿತ್ ಶಾಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದರು.

AMITSHAH 1

ಈ ವೇಳೆ ನಾನ್ ಕನಾ ಸಾಹಿಬ್ ಭೇಟಿಗೆ ಕರ್ತಾರ್ಪುರ ಕಾರಿಡಾರ್ ಆರಂಭಿಸಿದಂತೆ, ಗಡಿಯಾಚೆಗಿನ ಶಾರದಾ ಪೀಠಕ್ಕೆ ಕೂಡ ವಾರ್ಷಿಕ ತೀರ್ಥಯಾತ್ರೆ ಆಯೋಜನೆ ಕುರಿತು ಪರಿಶೀಲನೆ ನಡೆಸುವುದಾಗಿ ಸಚಿವ ಅಮಿತ್ ಶಾ ತಿಳಿಸಿದ್ದು ಗಮನಾರ್ಹ. ಈ ಕಾರ್ಯಕ್ರಮದಲ್ಲಿ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ರವೀಂದ್ರ ರೈನಾ (ಅಧ್ಯಕ್ಷರು, ಜಮ್ಮು ಕಾಶ್ಮೀರ ಬಿಜೆಪಿ ಘಟಕ) ಮತ್ತು Sಚಿve Shಚಿಡಿಚಿಜಚಿ ಕಮಿಟಿ ಸದಸ್ಯರು ಭಾಗವಹಿಸಿದ್ದರು.

TAGGED:AmitShahnewdelhisringeri muttTejaswi Suryaಅಮಿತ್ ಶಾತೇಜಸ್ವಿ ಸೂರ್ಯನವದೆಹಲಿಶೃಂಗೇರಿ ಮಠ
Share This Article
Facebook Whatsapp Whatsapp Telegram

You Might Also Like

Karnatakas ‘free bus scheme CM Siddaramaiah symbolically distributed ticket to woman 2
Bengaluru City

ಶಕ್ತಿಗೆ ಇಂದು 500 ಕೋಟಿ ಟಿಕೆಟ್‌ ಸಂಭ್ರಮ- ಕಂಡಕ್ಟರ್‌ ಆಗಿ ಟಿಕೆಟ್‌ ಹಂಚಿದ ಸಿಎಂ

Public TV
By Public TV
13 minutes ago
Operation Kalanemi Fake Babas Arrest
Latest

ಉತ್ತರಾಖಂಡ ಸರ್ಕಾರದಿಂದ ‘ಆಪರೇಷನ್ ಕಾಲನೇಮಿ’ ಕಾರ್ಯಾಚರಣೆ – 82 ನಕಲಿ ಬಾಬಾಗಳ ಬಂಧನ

Public TV
By Public TV
15 minutes ago
Rajendra Singh Babu
Cinema

ಕೆಲಸಕ್ಕೆ ಬಾರದವರೆಲ್ಲ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ನಟಿಯೆಂದು ಹೇಳ್ಕೊತಾರೆ, ಇವ್ರು ಇದನ್ನೆಲ್ಲ ಮಾಡ್ಲೇ ಇಲ್ಲ – ರಾಜೇಂದ್ರ ಸಿಂಗ್ ಬಾಬು

Public TV
By Public TV
37 minutes ago
She performed puja and turned on the TV B Saroja Devis last moment
Latest

ಪೂಜೆ ಮಾಡಿ ಟಿವಿ ಆನ್‌ ಮಾಡಿದ್ದರು – ಸರೋಜಾದೇವಿಯವರ ಕೊನೆ ಕ್ಷಣ ಹೀಗಿತ್ತು

Public TV
By Public TV
39 minutes ago
Hassan Shiradi Ghat Car Falls
Districts

ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು

Public TV
By Public TV
1 hour ago
B Saroja Devi DK Shivakumar
Bengaluru City

ಹಿರಿಯ ನಟಿ ಬಿ. ಸರೋಜಾದೇವಿ ನಿಧನ – ಡಿಕೆಶಿ ಸಂತಾಪ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?