ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಒತ್ತಡ ಹೇರಲ್ಲ: ಶರತ್ ಬಚ್ಚೇಗೌಡ

Public TV
1 Min Read
sharat bachegowda

– ಅಧಿಕಾರಿಗಳು ಪಕ್ಷಪಾತ ತೋರದೆ ಕೆಲಸ ನಿರ್ವಹಿಸಿ

ಬೆಂಗಳೂರು: ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಯಾವುದೇ ಅಧಿಕಾರಿಯ ಮೇಲೆ ಒತ್ತಡ ತರುವುದಿಲ್ಲ. ಅಧಿಕಾರಿಗಳು ಸಹ ಪಕ್ಷಪಾತ ಮಾಡದೆ ಕೆಲಸ ಮಾಡಿ ತಾಲೂಕನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಹಕರಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಮನವಿ ಮಾಡಿಕೊಂಡಿದ್ದಾರೆ.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳು ಸಂಬಂಧಪಟ್ಟ ಪಲಾನುಭವಿಗೆ ತಲುಪಬೇಕು. ಇದರಲ್ಲಿ ಯಾರದೋ ಕೈವಾಡವಾಗಲಿ ರಾಜಕೀಯವಾಗಿಲಿ ಮಾಡುವುದು ಬೇಡ. ನಾನು ಸಹ ಅಭಿವೃದ್ಧಿಯ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಯಾವುದೇ ರಾಜಕೀಯ ಮಾಡದೇ ಕೆಲಸ ಮಾಡೋಣ. ಈಗಾಗಲೇ ತಾಲೂಕು ಪಂಚಾಯಿತಿ ಹಂತದಲ್ಲಿ ಸಾಕಷ್ಟು ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ಅಧಿಕಾರಿಗಳಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

sharat bachegowda 2

ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ ತಾಲೂಕಿನಲ್ಲಿ ಈವರೆಗೆ ಶೇ.69.94ರಷ್ಟು ಕೆಲಸವಾಗಿದ್ದು, ಇದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೇ ಅಧಿಕ ಎಂದು ತಾಲೂಕು ಕಾರ್ಯನಿರ್ವಹಣಾಧಿಕಾರಿ ಶ್ರೀನಾಥ್ ಗೌಡ ತಿಳಿಸಿದರು. ತಾಲೂಕಿನಲ್ಲಿ 268 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಅದರಲ್ಲಿ 8 ಮಾತ್ರ ಕೆಲಸ ಮಾಡುತ್ತಿಲ್ಲ. ಉಳಿದಂತೆ ತಾಲೂಕಿನಲ್ಲಿ ಕುಡಿಯುವ ನೀರಿಗೆ ವ್ಯವಸ್ಥೆ ಇದೆ ಎಂದು ಮಾಹಿತಿ ನೀಡಿದರು.

ತಾಲೂಕಿನ ಚೊಕ್ಕಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಊರಿನ ಎಲ್ಲ ಬೀದಿ ದೀಪಗಳಿಗೂ ಸೋಲಾರ್ ಕರೆಂಟ್ ಅಳವಡಿಸಿದ್ದು, ಇದಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡೆಸಿದರು. ನೀರಿಗೆ ಹೆಚ್ಚು ಒತ್ತು ಕೊಟ್ಟು ಕೆಲಸಮಾಡಿ, ನೀರಿನ ಸಮಸ್ಯೆ ಬಗೆಹರಿಸಿವಂತೆ ಅಧಿಕಾರಿಗಳಿಗೆ ಸೂಚಿಸಿದರು.

Share This Article