ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಂಡ ಚೈತನ್ಯ ಹಾಗೂ ಕ್ರಿಯಾಶೀಲತೆಯ ವ್ಯಕ್ತಿಯಾಗಿದ್ದಾರೆ. ವಿಶೇಷವಾಗಿ ರಾಜಕೀಯವಾಗಿ ಪ್ರಭಾವಶಾಲಿ ಕೆಲವು ಕೆಲಸಗಳನ್ನು ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಶ್ಲಾಘಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಮುಕ್ತಾಯಗೊಂಡ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದರು. ಬಿಜೆಪಿಯು ಇಷ್ಟು ಅಂತರದಿಂದ ಗೆಲ್ಲುತ್ತಾರೆ ಎಂದು ನಾವು ನಿರೀಕ್ಷಿಸಿರಲಿಲ್ಲ. ಆದರೆ ಅವರು ಗೆಲುವು ಸಾಧಿಸಿದ್ದಾರೆ ಎಂದರು.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಕುರಿತು ಮಾತನಾಡಿದ ಅವರು, ಭಾರತೀಯ ಮತದಾರರು ಅಚ್ಚರಿಗೊಳಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಅವರು ಮುಂದೊಂದು ದಿನ ಬಿಜೆಪಿಯನ್ನು ಅಚ್ಚರಿಗೊಳಿಸುತ್ತಾರೆ. ಆದರೆ ಇಂದು ಜನರು ಬಿಜೆಪಿಗೆ ಬಯಸಿದ್ದನ್ನು ನೀಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಕೊರೊನಾ
ಪ್ರಧಾನಿ ನರೇಂದ್ರ ಮೋದಿ ಅವರು ಕೋಮು ಮತ್ತು ಧಾರ್ಮಿಕ ಆಧಾರದ ಮೇಲೆ ವಿಭಜಿಸುವ ಶಕ್ತಿಗಳನ್ನು ಸಮಾಜದಲ್ಲಿ ಬಿಚ್ಚಿಟ್ಟಿದ್ದಾರೆ. ಇದು ದುರಾದೃಷ್ಟಕರ ವಿಷಯವಾಗಿದೆ ಎಂದು ಕಿಡಿಕಾರಿದರು.
ಎಕ್ಸಿಟ್ ಪೋಲ್ಗಳು ಹೊರಬರುವವರೆಗೂ ನನ್ನ ಮನಸ್ಸಿನಲ್ಲಿ ಯಾವುದೇ ಪ್ರಶ್ನೆ ಇರಲಿಲ್ಲ. ಹೆಚ್ಚಿನ ಜನರು ಬಹಳ ನಿಕಟ ಹೋರಾಟವನ್ನು ನಿರೀಕ್ಷಿಸುತ್ತಿದ್ದರು. ಕೆಲವರು ಸಮಾಜವಾದಿ ಪಕ್ಷವು ಮುಂದಿದೆ ಎಂದು ಹೇಳಿದ್ದರು ಎಂದು ಹೇಳಿದರು. ಇದನ್ನೂ ಓದಿ: ಕ್ಷಿಪಣಿ ಬಗ್ಗೆ ಭಾರತಕ್ಕೆ ಪ್ರತ್ಯುತ್ತರ ನೀಡೋ ಬದಲು ಪಾಕಿಸ್ತಾನ ಸಂಯಮ ಬಯಸುತ್ತೆ: ಇಮ್ರಾನ್ ಖಾನ್