– ವಿಶ್ವ ವೇದಿಕೆಯಲ್ಲಿ ಪಾಕ್ ನಿಜ ಬಣ್ಣ ಬಯಲು ಮಾಡಲು ಮುಂದಾದ ಭಾರತ
ನವದೆಹಲಿ: ಕಳೆದ ಏಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ʻಆಪರೇಷನ್ ಸಿಂಧೂರʼದ ಮೂಲಕ ಪ್ರತೀಕಾರ ತೀರಿಸಿಕೊಂಡಿರುವ ಭಾರತ ಇದೀಗ ಭಯೋತ್ಪಾದನೆ, ಉಗ್ರ ಪೋಷಿತ ಕೃತ್ಯಗಳಿಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನದ ಮುಖವಾಡವನ್ನ ಇಡೀ ವಿಶ್ವದ ಮುಂದೆ ಬಿಚ್ಚಿಡಲು ಸಜ್ಜಾಗಿದೆ. ಅದಕ್ಕಾಗಿ ವಿವಿಧ ರಾಜಕೀಯ ಪಕ್ಷಗಳ 7 ಸಂಸದರ ನಿಯೋಗವನ್ನ ರಚಿಸಿದೆ.
Yesterday morning, the Minister of Parliamentary Affairs Kiren Rijiju spoke with the Congress President and the Leader of the Opposition in the Lok Sabha. The INC was asked to submit names of 4 MPs for the delegations to be sent abroad to explain India’s stance on terrorism from…
— Jairam Ramesh (@Jairam_Ramesh) May 17, 2025
7 ಸಂಸದರ ನಿಯೋಗದ ಪಟ್ಟಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor) ಅವರ ಹೆಸರನ್ನೂ ಕೇಂದ್ರ ಸರ್ಕಾರ ಸೇರಿಸಿದೆ. ವಿಶೇಷವೆಂದರೆ ಕಾಂಗ್ರೆಸ್ನಿಂದ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾದ ಪಟ್ಟಿಯಲ್ಲಿ 4 ಹೆಸರುಗಳ ಪೈಕಿ ಶಶಿ ತರೂರ್ ಅವರ ಹೆಸರೇ ಇಲ್ಲದಿರುವುದು ಚರ್ಚೆಗೆ ಗ್ರಾಸವಾಗಿದೆ.
ಆಪರೇಷನ್ ಸಿಂಧೂರದ ಬಳಿಕ ಶಶಿ ತರೂರ್ ಅವರು ಪ್ರಧಾನಿ ಮೋದಿ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದರು. ಇದರಿಂದ ʻಲಕ್ಷ್ಮಣ ರೇಖೆʼ ಮೀರಿದ್ದಾರೆ ಎಂದು ಕಾಂಗ್ರೆಸ್ನಿಂದಲೇ ಟೀಕೆಗೆ ಒಳಗಾಗಿದ್ದರು.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮೇ 16ರಂದು ನಿಯೋಗಕ್ಕೆ 4 ಸಂಸದರ ಹೆಸರು ಶಿಫಾರಸು ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೋರಿದ್ದರು. ಅದರಂತೆಯೇ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸೂಚನೆಯಂತೆ ಆನಂದ ಶರ್ಮಾ, ಗೌರವ್ ಗೊಗೊಯಿ, ಡಾ. ಸಯದ್ ನಾಸೀರ್ ಹುಸೇನ್ ಮತ್ತು ರಾಜ್ ಬ್ರಾರ್ ಅವರ ಹೆಸರುಗಳನ್ನು ಶಿಫಾರಸು ಮಾಡಿ ಶುಕ್ರವಾರ ಸಂಜೆಯೇ ಪಟ್ಟಿ ಕಳುಹಿಸಲಾಗಿದೆ ಎಂದು ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.
I am honoured by the invitation of the government of India to lead an all-party delegation to five key capitals, to present our nation’s point of view on recent events.
When national interest is involved, and my services are required, I will not be found wanting.
Jai Hind! 🇮🇳 pic.twitter.com/b4Qjd12cN9
— Shashi Tharoor (@ShashiTharoor) May 17, 2025
ಸಂಸದೀಯ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ತಿರುವನಂತಪುರದ ಸಂಸದ ಕಾಂಗ್ರೆಸ್ನ ಶಶಿ ತರೂರ್ ಹೆಸರು ಮೊದಲನೆಯದ್ದಾಗಿದೆ. ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಮತ್ತು ಬೈಜಯಂತ್ ಪಾಂಡಾ, ಜೆಡಿಯು ಸಂಸದ ಸಂಜಯ್ ಜಾ, ಡಿಎಂಕೆ ಸಂಸದೆ ಕನಿಮೋಳಿ, ಎನ್ಸಿಪಿ (ಎಸ್ಪಿ) ಸಂಸದೆ ಸುಪ್ರಿಯಾ ಸುಳೆ, ಶಿವಸೇನಾ ಸಂಸದ ಶ್ರೀಕಾಂತ್ ಶಿಂದೆ ಅವರ ಹೆಸರುಗಳಿವೆ.