ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯಿತಿ ಇಲ್ಲ: ಶಶಿ ತರೂರ್‌

Public TV
1 Min Read
Shashi Tharoor 1

ನವದೆಹಲಿ: ಸಂಸತ್‌ನಲ್ಲಿ ಮಂಗಳವಾರ ಮಂಡಿಸಲಾದ ಕೇಂದ್ರ ಬಜೆಟ್‌ ಕುರಿತು ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಪ್ರತಿಕ್ರಿಯಿಸಿದ್ದಾರೆ.

Nirmala Sitharaman

ನಾವು ಭಯಾನಕ ಹಣದುಬ್ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಬಜೆಟ್‌ನಲ್ಲಿ ಮಧ್ಯಮ ವರ್ಗದವರಿಗೆ ಯಾವುದೇ ತೆರಿಗೆ ವಿನಾಯಿತಿ ಇಲ್ಲ. ಈ ಬಜೆಟ್‌ನಲ್ಲಿ ಅಚ್ಛೇ ದಿನ್‌ ಮರೀಚಿಕೆಯಾಗಿದೆ. ಅಚ್ಛೇ ದಿನ್‌ ಬರಲು ನಾವು ಇನ್ನೂ 25 ವರ್ಷಗಳವರೆಗೆ ಕಾಯಬೇಕಾಗಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: Union Budget: ದುಡಿಯುವ ವರ್ಗದ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಹುಸಿ ಮಾಡಿದೆ: ರಣದೀಪ್ ಸುರ್ಜೇವಾಲಾ ವ್ಯಂಗ್ಯ

ಅತ್ಯಂತ ನಿರಾಶಾದಾಯಕ ಬಜೆಟ್‌ ಇದಾಗಿದೆ. ಬಜೆಟ್‌ನಲ್ಲಿ ಏನೂ ಇಲ್ಲ. ಮನ್ರೇಗಾ, ರಕ್ಷಣೆ, ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಪೂರಕವಾದ ಯಾವುದೇ ಅಂಶಗಳ ಉಲ್ಲೇಖವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Nirmala Sitharaman 1

ಡಿಜಿಟಲ್‌ ಕರೆನ್ಸಿಗೆ ಪೂರಕವಾದ ದಿಕ್ಕಿನಲ್ಲಿ ಸರ್ಕಾರ ಸಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ. ಇದು ಸಮಂಜಸ ಎನಿಸಿದರೂ, ಸಾಮಾನ್ಯ ನಾಗರಿಕರ ಅಗತ್ಯತೆಗಳ ಬಗ್ಗೆ ಹೆಚ್ಚಿನ ಕಾಳಜಿಯನ್ನು ಬಜೆಟ್‌ ತೋರಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಗ್ರಾಮೀಣ, ನಗರಾಭಿವೃದ್ಧಿ ಎರಡು ಕ್ಷೇತ್ರಗಳ ಅಭಿವೃದ್ಧಿಗೆ ಪೂರಕ: ಬಿಎಸ್‌ವೈ ಮೆಚ್ಚುಗೆ

Share This Article
Leave a Comment

Leave a Reply

Your email address will not be published. Required fields are marked *