ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ನಮ್ಮ ಜವಾಬ್ದಾರಿ: ಶಶಿಕಲಾ ಜೊಲ್ಲೆ

Public TV
1 Min Read
SHASHIKALA JOLLE

ಚಿಕ್ಕೋಡಿ: ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ನಮ್ಮ ಜವಾಬ್ದಾರಿಯಾಗಿದ್ದು, ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

Shashikala Jolle 3

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಪ್ರವಾಹ ಪೀಡಿತ ಸಿದ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನೆರೆಯಿಂದ ಮನೆ, ಬೆಳೆ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಗಳನ್ನು ನಾನು ಮನಗಂಡಿದ್ದೇನೆ. ಹೀಗಾಗಿ ನಿಮ್ಮೆಲ್ಲರ ಸಮಸ್ಯೆಗೆ ಶೀಘ್ರದಲ್ಲಿ ಬಿಜೆಪಿ ಸರ್ಕಾರದ ವತಿಯಿಂದ ಸಿಗುವ ಪರಿಹಾರವನ್ನು ಸೂಕ್ತ ರೀತಿಯಲ್ಲಿ ತಲುಪಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ:  ನೆರೆ ಪೀಡಿತ ಸಂತ್ರಸ್ತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ: ಉಮೇಶ್ ಕತ್ತಿ

Shashikala Jolle2

ಸರ್ಕಾರ ಈಗಾಗಲೇ ಸಂತ್ರಸ್ತರಿಗೆ ಪರಿಹಾರ ಧನವನ್ನ ಹೆಚ್ಚಿಸಿ ಆದೇಶ ಹೊರಡಿಸಿದ್ದು, ಪ್ರತಿ ಸಂತ್ರಸ್ಥರಿಗೂ ಪರಿಹಾರ ದೊರಕಿಸಿಕೊಡುವ ಭರವಸೆಯನ್ನ ಶಶಿಕಲಾ ಜೊಲ್ಲೆ ನೀಡಿದರು. ಬಳಿಕ ಉದ್ಯೋಗ ಸಮೂಹದ ವತಿಯಿಂದ 224 ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ಆಹಾರ ಸಾಮಗ್ರಿಗಳ ಕಿಟ್‍ಗಳನ್ನು ಸಚಿವರು ವಿತರಿಣೆ ಮಾಡಿದರು.

Share This Article
Leave a Comment

Leave a Reply

Your email address will not be published. Required fields are marked *