ಭಾರತದೊಂದಿಗೆ ಕಾರ್ಯನಿರ್ವಹಿಸಲು ಬಾಂಗ್ಲಾದೇಶ ಉತ್ಸುಕವಾಗಿದೆ: ಶೇಖ್ ಹಸೀನಾ

Public TV
1 Min Read
Sheikh Hasina

ಢಾಕಾ: ಭಾರತದೊಂದಿಗೆ ಕಾರ್ಯನಿರ್ವಹಿಸಲು ಬಾಂಗ್ಲಾದೇಶ ಉತ್ಸುಕವಾಗಿದೆ ಪ್ರಧಾನ ಮಂತ್ರಿ ಶೇಖ್ ಹಸೀನಾ ಹೇಳಿದ್ದಾರೆ.

ದೇಶದ 73ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತದ ಜನತೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿ ಅವರು ಈ ಹೇಳಿಕೆ ನೀಡಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಋತುಸ್ರಾವದ ರಕ್ತ ಸೇವಿಸುತ್ತೇನೆ, ಫೇಸ್ ಮಾಸ್ಕ್‌ ಆಗಿ ಬಳಸುತ್ತೇನೆ

NARENDRA MODI

ಭಾರತ ಮತ್ತು ಬಾಂಗ್ಲಾದೇಶದ ಬಾಂಧವ್ಯಕ್ಕೆ 2021 ಒಂದು ಐತಿಹಾಸಿಕ ವರ್ಷವಾಗಿದೆ. ಈ ವೇಳೆ ಉಭಯ ರಾಷ್ಟ್ರಗಳ ನಡುವೆ ಉನ್ನತ ಮಟ್ಟದ ಸಭೆಗಳು, ಕಾರ್ಯಕ್ರಮಗಳು ನಡೆದಿವೆ ಎಂದು ಅವರು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದ ಕೇರಳ ಸಚಿವ – ರಾಜೀನಾಮೆಗೆ ಬಿಜೆಪಿ ಆಗ್ರಹ

ಶಾಂತಿಯುತ ಮತ್ತು ಸಮೃದ್ಧ ಪ್ರದೇಶ ನಿರ್ಮಾಣವನ್ನು ಸಾಕಾರಗೊಳಿಸಲು ಭಾರತದೊಂದಿಗೆ ಕಾರ್ಯನಿರ್ವಹಿಸಲು ಬಾಂಗ್ಲಾದೇಶ ಉತ್ಸುಕವಾಗಿದೆ. ಬಾಂಗ್ಲಾದೇಶದ ಸರ್ಕಾರ, ರಾಷ್ಟ್ರದ ಜನತೆ ಪರವಾಗಿ ಭಾರತದ ಜನತೆ ಮತ್ತು ಪ್ರಧಾನಿಗೆ ಭಾರತ ಗಣರಾಜ್ಯೋತ್ಸವದ ಹೃದಯಪೂರ್ವಕ ಶುಭಾಶಯಗಳು ಎಂದು ಹಸೀನಾ ಅವರು ಪತ್ರದಲ್ಲಿ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *