ಚಾಮರಾಜನಗರ: ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ವಿಶ್ರಾಂತಿ ಪಡೆಯಲೆಂದು ನಗರದ ಕೆ.ಗುಡಿಯ ಜಂಗಲ್ ಲಾಡ್ಜನಲ್ಲಿದ್ದರು ಅವರು ವಾಪಸ್ ಆಗುವ ವೇಳೆ ಕೈ (Congress) ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಳೆದ ಎರಡು ದಿನಗಳಿಂದ ಕುಟುಂಬದ ಜೊತೆಗೆ ವಿಶ್ರಾಂತಿ ಪಡೆಯಲೆಂದು ಚಾಮರಾಜನಗರ (Chamarajanagar) ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತಾರಣ್ಯದ ಕೆ.ಗುಡಿಯ ಜಂಗಲ್ ಲಾಡ್ಜ್ನಲ್ಲಿ ವಾಸ್ತವ್ಯ ಹೂಡಿದ್ದರು. ಪತ್ನಿ ಶಿಲ್ಪಾ ಶೆಟ್ಟರ್ ಅವರು ಕೆ.ಗುಡಿ ಜಂಗಲ್ ಲಾಡ್ಜ್ಗೆ ಆಗಮಿಸಿದ್ದರು. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ – ಮೋದಿ, ನಡ್ಡಾ ನೇತೃತ್ವದಲ್ಲಿ 2 ದಿನ ಹೈವೋಲ್ಟೇಜ್ ಸಭೆ
ಜದೀಶ್ ಶೆಟ್ಟರ್ ಅವರು ತಮ್ಮ ವಿಶ್ರಾಂತಿ ಮುಗಿಸಿ ತೆರಳುವ ವೇಳೆ ಅವರಿದ್ದ ಸ್ಥಳಕ್ಕೆ ಬಂದ ಕಾಂಗ್ರೆಸ್ ಕಾರ್ಯರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿ ಪ್ರತಿಭಟನೆ ನಡೆಸಿದ ವೇಳೆ ಜಗದೀಶ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರು ಶೆಟ್ಟರ್ ವಾಸ್ತವ್ಯ ಹೂಡಿದ್ದ ಸ್ಥಳಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್ – 108 ಆರೋಪಿಗಳಿಗೆ ಜಾಮೀನು, ದರ್ಗಾದಲ್ಲಿ ಸಂಭ್ರಮಾಚರಣೆ
ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಶೆಟ್ಟರ್ ಇತ್ತೀಚಿಗೆ ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಸೇರಿದ್ದರು. ಇದನ್ನೂ ಓದಿ: ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ