ನಾಲ್ಕೈದು ತಿಂಗಳು ಶಿರಾಡಿಯಲ್ಲಿ ವಾಹನ ಸಂಚರಿಸಲ್ಲ

Public TV
2 Min Read
shiradi ghat 1

ಹಾಸನ: ಶಿರಾಡಿಘಾಟ್ ರಸ್ತೆ ಕಾಮಗಾರಿ ಸಂಪೂರ್ಣ ಮುಗಿಯುವವರೆಗೆ ಯಾವುದೇ ಸಂಚಾರಕ್ಕೆ ಅವಕಾಶ ನೀಡಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ.

ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಶಿರಾಡಿಘಾಟ್ ರಸ್ತೆ ರಸ್ತೆ ಕಾಮಗಾರಿ ಸಂಪೂರ್ಣ ಮುಗಿಯುವವರೆಗೆ ಯಾವುದೇ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಕಾಮಗಾರಿ ಮುಗಿಯಲು ನಾಲ್ಕೈದು ತಿಂಗಳ ಕಾಲ ಸಮಯವಕಾಶ ಬೇಕಿದೆ. ಶಿರಾಡಿಘಾಟ್ ಸಂಚಾರ ರಸ್ತೆ ಕಾಮಗಾರಿ ಪ್ರಗತಿಯ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಿ ರಸ್ತೆ ಸರಿಪಡಿಸಿದ ಬಳಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದ್ದಾರೆ.

shiradi ghat 2

ಇದೇ ವೇಳೆ ಪ್ರವಾಹದಲ್ಲಿ ಸಿಲುಕಿರುವ ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ನೀಡಿದ ಸಚಿವರು, ಸಕಲೇಶಪುರ ತಾಲ್ಲೂಕಿನ ಹತ್ತಾರು ಗ್ರಾಮಗಳ ಜನರ್ನು ಬೇರೆಡೆಗೆ ಸ್ಥಳಾಂತರಿಸಲು ಸೂಚನೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಅತ್ತಿಹಳ್ಳಿ, ಹೊಂಗಡಹಳ್ಳ ಮಾಗೇರಿ, ಪಟ್ಲ, ಹೆತ್ತೂರು ಗ್ರಾಮಸ್ಥರಿಗೆ ಗಂಜಿಕೇಂದ್ರ ತೆರೆಯಲು ಆದೇಶಿಸಲಾಗಿದೆ ಎಂದರು.

ಜಿಲ್ಲೆಯ ಇತರೇ ಭಾಗಗಳಲ್ಲಿ ಅಪಾಯವಿದೆಯೋ ಅಲ್ಲಿರುವ ಜನರನ್ನು ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಕೊಡಗಿನಲ್ಲಿರುವ ರಸ್ತೆಗಳು ಕೊಚ್ಚಿ ಹೋಗಿರುವುದರಿಂದ ಅಂದಾಜು 138 ಕೋಟಿ ರೂ. ನಷ್ಟ ಉಂಟಾಗಿದೆ. ಅಲ್ಲದೇ ಒಟ್ಟು ಲೋಕೋಪಯೋಗಿ ಇಲಾಖೆಯಲ್ಲಿ 150 ಕೋಟಿ ರೂ. ನಷ್ಟದ ಅಂದಾಜು ಮಾಡಲಾಗಿದೆ ಎಂದರು.

HD REVANNA

ಪ್ರವಾಹದಲ್ಲಿ ಸಿಲುಕಿರುವ ಜನರನನ್ನು ರಕ್ಷಿಸಲು ಎರಡು ಹೆಲಿಕಾಪ್ಟರ್ ಬಳಕೆ ಮಾಡಲಾಗಿದೆ. ಸಂತ್ರಸ್ತರಿಗೆ ಬೇಕಾದ ಎಲ್ಲಾ ನೆರವನ್ನು ಸರ್ಕಾರದಿಂದ ನೀಡಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಅಲ್ಲದೇ ಹಾಸನ ಜಿಲ್ಲೆಯಲ್ಲಿ ಪ್ರವಾಹ ನಷ್ಟದ ಬಗ್ಗೆ ಸಂಪೂರ್ಣ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ಮಾಹಿತಿ ನೀಡಿದರು.

ಜುಲೈ 15 ರಂದು ಸಚಿವ ಹೆಚ್.ಡಿ.ರೇವಣ್ಣ ಶಿರಾಡಿ ಘಾಟ್ ಉದ್ಘಾಟಿಸಿದ್ದರು. ಆರಂಭದಲ್ಲಿ ಲಘು ವಾಹನಗಳಿಗೆ, ಬಳಿಕ ಘನ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಗುಡ್ಡಗಳು ಜರಿದು ಬೀಳುತ್ತಿದ್ದ ಕಾರಣ ಇಲ್ಲೂ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿತ್ತು.

ಮಡಿಕೇರಿ- ಮಂಗಳೂರು ಸಂಪರ್ಕ ಕಲ್ಪಿಸುವ ಸಂಪಾಜೆ ಘಾಟಿಯ ಮದೇನಾಡು, ಜೋಡುಪಾಲದಲ್ಲಿ ಗುಡ್ಡ ಕುಸಿದು ಅಲ್ಲಲ್ಲಿ ಪ್ರವಾಹ ರೂಪದಲ್ಲಿ ನೀರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹರಿದು ಹೋಗುತ್ತಿದೆ. ಹೀಗಾಗಿ ಈ ರಸ್ತೆಯ ರಿಪೇರಿಯಾಗಲು ಹಲವು ತಿಂಗಳು ಬೇಕಾಗಬಹುದು ಎಂದು ಈ ಸ್ಥಳಕ್ಕೆ ತೆರಳಿದವರು ಹೇಳುತ್ತಿದ್ದಾರೆ. ಹೀಗಾಗಿ ಇನ್ನು ಮುಂದೆ ಚಾರ್ಮಾಡಿ ಮಾರ್ಗದ ಮೂಲಕವಷ್ಟೇ ಮಂಗಳೂರನ್ನು ಸಂಪರ್ಕಿಸಬೇಕಾಗುತ್ತದೆ. ಎರಡು ಹೆದ್ದಾರಿಗಳು ಬಂದ್ ಆಗಿರುವ ಕಾರಣ ಈ ರಸ್ತೆಯಲ್ಲೂ ಭಾರೀ ಟ್ರಾಫಿಕ್ ಜಾಮ್ ಆಗುತ್ತಿದೆ.

shiradi ghat 3

Share This Article