ಮುಂಬೈ: ಮಹಾರಾಷ್ಟ್ರ ಫಲಿತಾಂಶದಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಮುನ್ನಡೆ ಸಿಗುತ್ತಿದ್ದಂತೆ ಚುನಾವಣಾಪೂರ್ವ ಮೈತ್ರಿ ಮಾಡಿಕೊಂಡಿದ್ದ ಶಿವಸೇನಾ ಹಾಗೂ ಬಿಜೆಪಿ ನಡುವೆ ಸಿಎಂ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ.
ಚುನಾವಣೆಯಲ್ಲಿ ಶಿವಸೇನಾ ಕಿಂಗ್ ಮೇಕರ್ ಆಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾತನಾಡಿರುವ ಪಕ್ಷದ ವಕ್ತಾರ ಸಂಜಯ್ ರವಾತ್, ನಾವು ಮತ್ತು ಮಹಾರಾಷ್ಟ್ರದ ಜನತೆ ಆದಿತ್ಯ ಠಾಕ್ರೆ ಅವರನ್ನು ಮುಖ್ಯಮಂತ್ರಿಯಾಗಲು ಬಯಸುತ್ತೇವೆ ಎಂದು ಹೇಳಿದ್ದಾರೆ.
- Advertisement 2
Sanjay Raut, Shiv Sena: I am going to meet Uddhav Ji. Number itne bure bhi nahi hain, aisa hota hai kabhi kabhi. Yes, we will definitely continue with the alliance. We have agreed upon a 50-50 formula. #MaharashtraAssemblyPolls2019 pic.twitter.com/WpLhJkmq8r
— ANI (@ANI) October 24, 2019
- Advertisement 3
ಮಹಾರಾಷ್ಟ್ರದ ವೊರ್ಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಆದಿತ್ಯ ಠಾಕ್ರೆ ಮತ ಎಣಿಕೆಯಲ್ಲಿ ಮುಂದಿದ್ದು, ಗೆಲುವು ಪಡೆಯುವ ಸಾಧ್ಯತೆ ಹೆಚ್ಚಿದೆ. ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ರಾವತ್, ಮಹಾರಾಷ್ಟ್ರದಲ್ಲಿ ಶಿವಸೇನಾ ಹಾಗೂ ಬಿಜೆಪಿ ಮೈತ್ರಿ ಪಕ್ಷಗಳು ಸರ್ಕಾರ ರಚನೆ ಮಾಡಲಿದೆ. ಆದರೆ ಕಾಂಗ್ರೆಸ್ ಮತ್ತು ಎನ್ಸಿಪಿ ಮೈತ್ರಿಯೂ ಉತ್ತಮ ಫಲಿತಾಂಶವನ್ನು ಪಡೆಯುವ ನಿರೀಕ್ಷೆ ಇದೆ. ಇದು ನಮಗೆ ಸಂತಸ ತಂದಿದ್ದು, ಮೈತ್ರಿ 50-50 ಫಾರ್ಮುಲಾದೊಂದಿಗೆ ಮುಂದುವರಿಯಲಿದೆ. ರಾಜ್ಯದಲ್ಲೂ ಉತ್ತಮ ವಿರೋಧ ಪಕ್ಷದ ಇರುವುದು ಅಗತ್ಯವಿದ್ದು, ಖಂಡಿತ ಶಿವಸೇನಾ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಸ್ಪಷ್ಟಪಡಿಸಿದರು.
- Advertisement 4
ಇತ್ತ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಕೂಡ ಮುನ್ನಡೆ ಸಾಧಿಸಿದ್ದು, ವಾರ್ಲಿ ಕ್ಷೇತ್ರದಲ್ಲಿಯೂ ಶಿವಸೇನೆಯ ಆದಿತ್ಯ ಠಾಕ್ರೆ ಭಾರೀ ಮುನ್ನಡೆ ಸಾಧಿಸಿದ್ದಾರೆ.
#WATCH Sanjay Raut, Shiv Sena: I am going to meet Uddhav Ji. Number itne bure bhi nahi hain, aisa hota hai kabhi kabhi. Yes, we will definitely continue with the alliance. We have agreed upon a 50-50 formula. #MaharashtraAssemblyPolls2019 pic.twitter.com/ae0bJUNI8q
— ANI (@ANI) October 24, 2019