ಬೆಳಗಾವಿ: ಪ್ರಧಾನಿ ಮೋದಿ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಗಳು ಕೈ ಜೋಡಿಸಿದ್ದಾರೆ.
ಅಲ್ಲದೇ ಕಳೆದ ಒಂದು ವರ್ಷದಿಂದ ಹುಕ್ಕೇರಿ ಹಿರೇಮಠ ಪರಿಸರ ರಕ್ಷಣೆ ಹಿನ್ನೆಲೆಯಲ್ಲಿ 20 ಲಕ್ಷ ಬಟ್ಟೆಯ ಬ್ಯಾಗ್ಗಳನ್ನು ನೀಡಿ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಮಾಡಲು ಶ್ರಮ ವಹಿಸುತ್ತಿದೆ ಎಂದು ಹೇಳಿದ್ದಾರೆ.
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಕರೆ ನೀಡಿರುವ ಪ್ಲಾಸ್ಟಿಕ್ ಮುಕ್ತ ಭಾರತ ಆಂದೋಲನಕ್ಕೆ ಕರೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಚಂದ್ರಶೇಖರ ಶಿವಾಚಾರ್ಯ ಶ್ರೀಗಳಿಂದ ಜಾಗೃತಿ ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ರ್ಯಾಲಿ ಹಮ್ಮಿಕೊಳ್ಳಲಾಯಿತು.
ಹುಕ್ಕೇರಿ ಪಟ್ಟಣದ ಪ್ರಮುಖ ಬೀದಿ ಬದಿಯ ಕಸವನ್ನು ಸ್ವತಃ ಸ್ವಾಮೀಜಿಗಳೇ ಸ್ವಚ್ಛ ಮಾಡಿ ಇತರರಿಗೂ ಮಾದರಿಯಾದರು. ಈ ರ್ಯಾಲಿ ಮೂಲಕ ಶ್ರೀಗಳು ವ್ಯಾಪಾರಿಗಳಲ್ಲಿ ಪ್ಲಾಸ್ಟಿಕ್ ಬಳಸದಂತೆ ಮನವಿ ಮಾಡಿಕೊಂಡರು.
ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಮೊದಲು ದೇವಸ್ಥಾನಗಳನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ಕರೆ ನೀಡುವುದರ ಜೊತೆಗೆ ಪಟ್ಟಣದ ದೇವಸ್ಥಾನಗಳಿಗೆ ಸ್ಟೀಲ್ ಕಸದ ಬುಟ್ಟಿ ನೀಡಿ ಪ್ಲಾಸ್ಟಿಕ್ ಬಳಸದಂತೆ ದೇವಸ್ಥಾನಗಳ ಅರ್ಚಕರಲ್ಲಿ ಮನವಿ ಮಾಡಿಕೊಂಡರು.