ಶಿವಲಿಂಗದ ಮೇಲೆ ಮೂಡಿದ ಕಣ್ಣಿನ ಆಕೃತಿ – ವಿಸ್ಮಯ ನೋಡಲು ಮುಗಿಬಿದ್ದ ಜನ

Public TV
1 Min Read
ramanagara

ರಾಮನಗರ: ಮಾಗಡಿ (Magadi) ಪಟ್ಟಣದ ಕೆಎಸ್‍ಆರ್‌ಟಿಸಿ ಬಸ್ (KSRTC Bus)ನಿಲ್ದಾಣದ ಆವರಣದಲ್ಲಿರುವ ಬಸವೇಶ್ವರ ಹಾಗೂ ಉಮಾ ಮಹೇಶ್ವರಿ ದೇಗುಲದಲ್ಲಿನ ಶಿವಲಿಂಗ ಕಣ್ಣು ತೆರೆದಿದೆ ಎಂಬ ವದಂತಿ ಹಬ್ಬಿದ ಹಿನ್ನೆಲೆ ದೇಗುಲಕ್ಕೆ ಭಕ್ತರ ದಂಡೇ ಹರಿದುಬಂದಿದೆ.

ramanagara 1

ಭಕ್ತರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಟ್ಟಿದ್ದಾರೆ. ಹೂವಿನಿಂದ ಅಲಂಕೃತಗೊಂಡಿದ್ದ ಲಿಂಗ ಆಕಾರದ ಮೂರ್ತಿಯ ಮೇಲ್ಭಾಗದಲ್ಲಿ ಕಣ್ಣುಗಳ ಆಕೃತಿ ಕಾಣಿಸಿಕೊಂಡಿದೆ. ಇದರಿಂದ ದೇವರೇ ಕಣ್ಣು ಬಿಟ್ಟಿದ್ದಾನೆಂದು ಭಾವಿಸಿದ ಭಕ್ತರು ಶಿವಲಿಂಗ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.  ಇದನ್ನೂ ಓದಿ: ಮಂಡ್ಯದಲ್ಲಿ ಕಮಲ ಅರಳಿಸಲು ಪ್ಲಾನ್ – ಸುಮಲತಾ ಅಂಬರೀಶ್ ಆಪ್ತ ಸಚ್ಚಿದಾನಂದ ಬಿಜೆಪಿಗೆ

ಇದನ್ನು ಕಾಣಲು ಸುತ್ತಮುತ್ತಲಿನ ನೂರಾರು ಜನರು ದೇವಾಲಯಕ್ಕೆ ಬಂದಿದ್ದು, ಕ್ರಮೇಣ ನೂಕುನುಗ್ಗಲು ಉಂಟಾಗಿದೆ. ಕೆಲಕಾಲದ ಬಳಿಕ ಕಣ್ಣಿನ ಆಕೃತಿ ಅದೃಶ್ಯವಾಗಿದ್ದು ಭಕ್ತರನ್ನು ಅಚ್ಚರಿಗೊಳಿಸಿದೆ. ಇದನ್ನೂ ಓದಿ: ಶ್ರದ್ಧಾವಾಕರ್ ಹತ್ಯೆ ಪ್ರಕರಣ – ಪಾಲಿಗ್ರಾಫ್ ಪರೀಕ್ಷೆ ವೇಳೆ ಅಫ್ತಾಬ್‍ಗೆ ಕೇಳಿದ ಪ್ರಶ್ನೆಗಳೇನು?

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *