ಆಗುಂಬೆಯಲ್ಲಿ ಅಕಾಲಿಕ ಮಳೆ

Public TV
0 Min Read
SMG Rain

ಶಿವಮೊಗ್ಗ: ಮಲೆನಾಡಿನ ಭಾಗದಲ್ಲಿ ಅಕಾಲಿಕ ಮಳೆ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆಗುಂಬೆಯಲ್ಲಿ ಶನಿವಾರ 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ.

ಶನಿವಾರ ಸುರಿದ ಮಳೆ ರೈತರನ್ನು ಕಂಗೆಡಿಸಿದೆ. ಆಗುಂಬೆ ಭಾಗದಲ್ಲಿ ಈಗಾಗಲೇ ಭತ್ತದ ಕೊಯ್ಲು ಆರಂಭಗೊಂಡಿದ್ದು, ಮಳೆಯಿಂದಾಗಿ ಭತ್ತದ ಕೊಯ್ಲುಗೆ ಅಡಚಣೆ ಎದುರಾಗಲಿದೆ. ಅಷ್ಟೇ ಅಲ್ಲದೆ ಅಡಿಕೆ ಬೆಳೆಗೂ ಈ ಮಳೆಯಿಂದ ರೋಗ ತಗುಲಲಿದೆ ಎಂಬ ಆತಂಕ ರೈತರಲ್ಲಿ ಮನೆ ಮಾಡಿದೆ.

SMG Rain A

ಈಗಾಗಿ ಅಕಾಲಿಕ ಮಳೆಗೆ ರೈತಾಪಿ ವರ್ಗ ಹಿಡಿಶಾಪ ಹಾಕುತ್ತಿದೆ. ಚಳಿಗಾಲದಲ್ಲಿಯೂ ಮಳೆ ಸುರಿಯುತ್ತಿರುವುದಕ್ಕೆ ಮಲೆನಾಡಿನ ಮಂದಿ ಆಶ್ಚರ್ಯ ವ್ಯಕ್ತಪಡಿಸಿದರೆ, ರೈತರು ಆತಂಕಕ್ಕೊಳಗಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *