– ಆಡಳಿತ ಮಂಡಳಿ ವಿರುದ್ಧ ಆಕ್ರೋಶ
ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಪಿಇಎಸ್ ಸಂಸ್ಥೆಯ ಎಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿನಿ ಅನುಮಾನಸ್ಪದವಾಗಿ ಸಾವಿಗೀಡಾದ ಘಟನೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಪರಿಣಿತಾ (20) ಎಂದು ಗುರುತಿಸಲಾಗಿದೆ. ಶಿವಮೊಗ್ಗ ತಾಲೂಕಿನ ಬೀರನಕೆರೆ ಬಳಿ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ ಎಂದು ಕಾಲೇಜು ಆಡಳಿತಮಂಡಳಿ ತಿಳಿಸಿದೆ.
ಕಾಲೇಜಿನ ವತಿಯಿಂದ ಬೀರನಕೆರೆ ಬಳಿ ಸರ್ವೆ ಕಾರ್ಯಕ್ಕೆ ಸಂಬಂಧಿಸಿದಂತೆ ಕ್ಯಾಂಪ್ ನಡೆಸಲಾಗುತ್ತಿತ್ತು. ಹೀಗಾಗಿ 22 ವಿದ್ಯಾರ್ಥಿಗಳ ತಂಡ ಕಳೆದ ನಾಲ್ಕು ದಿನಗಳಿಂದ ಬೀರನಕೆರೆಯಲ್ಲಿ ವಾಸ್ತವ್ಯ ಹೂಡಿತ್ತು. ಇಂದು ಬೆಳಗ್ಗೆ ವಿದ್ಯಾರ್ಥಿನಿ ವಾಕಿಂಗ್ ತೆರಳಿದ್ದ ವೇಳೆ ಅಪರಿಚಿತ ವಾಹನ ಗುದ್ದಿ ಸಾವು ಸಂಭವಿಸಿದೆ ಎಂದು ಕಾಲೇಜ್ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
ಆದರೆ ವಿದ್ಯಾರ್ಥಿನಿಯ ಪೋಷಕರು ಮಾತ್ರ ಇದನ್ನು ಒಪ್ಪಿದೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆ ಶವಗಾರದ ಬಳಿ ಕಾಲೇಜು ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರ ಮಧ್ಯೆ ಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.