Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಾಜಕೀಯ ಅಸ್ತಿತ್ವದ ಪ್ರಶ್ನೆಯಾಗಿರುವ ಶಿವಮೊಗ್ಗ ಕ್ಷೇತ್ರ

Public TV
Last updated: April 20, 2019 12:27 pm
Public TV
Share
4 Min Read
Shivamogga
SHARE

– ಹಾಲಸ್ವಾಮಿ ಆರ್.ಎಸ್.

ಶಿವಮೊಗ್ಗ: ರಾಜ್ಯದ ಪ್ರತಿಷ್ಠಿತ ಕಣಗಳಲ್ಲಿ ಸದಾ ಮೊದಲ ಸಾಲಿನಲ್ಲೇ ಇರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆ ಈ ಬಾರಿ ಬರೀ ಸೋಲು-ಗೆಲುವಿಗಷ್ಟೇ ಸೀಮಿತವಾಗದೆ ರಾಜಕೀಯ ಭವಿಷ್ಯವನ್ನು ತನ್ನೊಡಲಲ್ಲಿ ಇಟ್ಟುಕೊಂಡಿದೆ.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸೀತಾರಾಮ ಕೇಸರಿ ಅವರು 1992ರಲ್ಲಿ ಮುಖ್ಯಮಂತ್ರಿ ಆಗಿದ್ದ ಬಂಗಾರಪ್ಪ ಅವರನ್ನು ಕೆಳಗಿಳಿಸಿ ವೀರಪ್ಪ ಮೂಯ್ಲಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಿದ್ದರು. ಇದರಿಂದ ಕುದ್ದು ಹೋದ ಬಂಗಾರಪ್ಪ ಕಾಂಗ್ರೆಸ್ ತೊರೆದು ಕರ್ನಾಟಕ ಕಾಂಗ್ರೆಸ್ ಪಾರ್ಟಿ ಸ್ಥಾಪಿಸಿದರು. ಈ ಕೆಸಿಪಿ ಹೊಡೆತಕ್ಕೆ 1994ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತತ್ತರಿಸಿ ಹೋಯಿತು. ಮತ್ತೆ ಕಾಂಗ್ರೆಸ್ ಸೇರಿದ ಬಂಗಾರಪ್ಪ 1997ರಲ್ಲಿ ಮತ್ತೆ ಕರ್ನಾಟಕ ವಿಕಾಸ ಪಾರ್ಟಿ ಸ್ಥಾಪಿಸಿದರು. ನಂತರ ಇದನ್ನೂ ಕಾಂಗ್ರೆಸ್ ನಲ್ಲಿ ವಿಲೀನಗೊಳಿಸಿದರು. 2004ರಲ್ಲಿ ಮತ್ತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಹೀಗೆ ಬಂಗಾರಪ್ಪ ಅವರು ನಿರಂತರವಾಗಿ ಕಾಂಗ್ರೆಸ್ ಪಕ್ಷದ ಜೊತೆ ಹಾವು ಏಣಿ ಆಟ ಆಡಿದ ಪರಿಣಾಮವಾಗಿ, ನಂತರ ನಾಯಕತ್ವದ ಕೊರತೆ, ಒಳಸುಳಿಗಳ ಪರಿಣಾಮವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ನಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳೇ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ಕೆಪಿಸಿಸಿಯ ಡಜನ್ ಗಟ್ಟಲೆ ನಾಯಕರು ಇಂದು ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಪರವಾಗಿ ಕಣದಲ್ಲಿ ಟೊಂಕಕಟ್ಟಿ ನಿಂತಿದ್ದಾರೆ.

Shivamogga Akhada

ಇದುವರೆಗೂ ನಾಲ್ಕು ಚುನಾವಣೆ ಎದುರಿಸಿರುವ ಮಧು ಬಂಗಾರಪ್ಪ ಮೂರರಲ್ಲಿ ಸೋತಿದ್ದಾರೆ. ಇದು ಇವರ ಐದನೇ ಚುನಾವಣೆ. ಕಳೆದ ವಿಧಾನಸಭಾ ಚುನಾವಣೆ, ಲೋಕಸಭೆಗೆ ನಡೆದ ಉಪ ಚುನಾವಣೆಯಲ್ಲಿ ಸೋತಿದ್ದಾರೆ. ಸೋಲಿನ ಹ್ಯಾಟ್ರಿಕ್ ಆಗುವುದಿಲ್ಲ ಎಂಬುದು ಅವರ ವಿಶ್ವಾಸ.

ಮೈತ್ರಿ ಉಳಿಯಲು ಮಧು ಗೆಲುವು ಅನಿವಾರ್ಯ ಎಂಬ ಮಾತನ್ನು ಸಿಎಂ ಕುಮಾರಸ್ವಾಮಿ ಪರೋಕ್ಷವಾಗಿ ಹೇಳಿದ್ದಾರೆ. ರಾಜಕೀಯದಲ್ಲಿ ಯಾವುದೇ ಮೈತ್ರಿ ಕ್ಷಣಿಕವೂ ಅಲ್ಲ- ಶಾಶ್ವತವೂ ಅಲ್ಲ ಎನ್ನುವಂತೆ ಸದ್ಯದ ಪರಿಸ್ಥಿತಿಯಲ್ಲಿ ಜೆಡಿಎಸ್ ನ ಮಧು ಬಂಗಾರಪ್ಪ ಅವರಿಗಾಗಿ ವೀರಾವೇಶದಿಂದ ಹೋರಾಡುವ ಅನಿವಾರ್ಯತೆಯಲ್ಲಿ ಕಾಂಗ್ರೆಸ್ ಸಿಲುಕಿದೆ. ಮೈತ್ರಿ ಪಕ್ಷಗಳ ನಡುವಿನ ಭಿನ್ನಮತ ಢಾಳಾಗಿ ಬಹಿರಂಗ ಆಗದಿದ್ದರೂ ಒಳಗಿನ ಕಿಚ್ಚು ಹಾಗೇ ಇದೆ. ಮುಖ್ಯವಾಗಿ ಭದ್ರಾವತಿ, ತೀರ್ಥಹಳ್ಳಿ ಕ್ಷೇತ್ರಗಳಲ್ಲಿ ಇಂಥ ಭಿನ್ನತೆಯ ನಡುವೆಯೇ ಅಭ್ಯರ್ಥಿ ಗೆಲುವಿಗಾಗಿ ಕೆಲಸ ನಡೆಯುತ್ತಿದೆ.

Madhu

ಕಾಂಗ್ರೆಸ್ ನಲ್ಲಿ ಅಭ್ಯರ್ಥಿಗಳೇ ಸಿಗದ ಪರಿಸ್ಥಿತಿಯಲ್ಲಿ ಮಧು ಕೊರಳಿಗೆ ಹಾರ ಹಾಕಲಾಗಿದೆ. ಒಂದು ಲೆಕ್ಕದಲ್ಲಿ ಮಧು ಬಂಗಾರಪ್ಪ ಮೈತ್ರಿ ಕೂಟದ ಸಾಂದರ್ಭಿಕ ಶಿಶು ಎಂದರೆ ತಪ್ಪಾಗದು. ಈ ಶಿಶುವಿನ ಗೆಲವು ಮೈತ್ರಿಯ ಗೆಲವು- ಜಿಲ್ಲೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಗೆಲವು. ಸತತ ಮೂರು ಸೋಲುಗಳಿಂದ ಕಂಗೆಟ್ಟಿರುವ ಮಧು ಬಂಗಾರಪ್ಪ ಅವರ ರಾಜಕೀಯ ಭವಿಷ್ಯವನ್ನು ಈ ಚುನಾವಣೆ ನಿರ್ಣಯ ಮಾಡಲಿದೆ. ಈ ಎಲ್ಲಾ ಕಾರಣಗಳಿಂದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಗೆಲ್ಲಬೇಕಿದೆ. ಗೆಲ್ಲುವ ವಿಶ್ವಾಸ ಮೂಡಿಸಲು ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್, ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ ಸೇರಿಂದತೆ ರಣಧೀರರ ಪಡೆಯೇ ಶಿವಮೊಗ್ಗದಲ್ಲಿ ನೆಲೆಯೂರಿದೆ. ಈ ಪಡೆ ರಣತಂತ್ರಗಳು ಮತಗಳಾಗಿ ಪರಿವರ್ತನೆ ಆಗಬೇಕಷ್ಟೇ.

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಗೆಲುವು- ಸೋಲು ಅವರ ತಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಭವಿಷ್ಯ ನಿರ್ಧರಿಸಲಿದೆ. ಬಿಜೆಪಿಗಿಂತ ಈ ಗೆಲುವು ಯಡಿಯೂರಪ್ಪ ಅವರಿಗೆ ಅನಿವಾರ್ಯವಾಗಿದೆ. ಸರ್ಕಾರ ರಚನೆ ಮಾಡಲು ಹೋಗಿ ಕೈ ಸುಟ್ಟುಕೊಂಡ ಯಡಿಯೂರಪ್ಪ ಪಕ್ಷದ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಚುನಾವಣೆಯಲ್ಲಿ ಪಕ್ಷ ಎಡವಿದರೆ ಅದರ ಹೊಣೆ ಯಡಿಯೂರಪ್ಪ ಒಬ್ಬರ ತಲೆಗೆ ಕಟ್ಟಲು ವೇದಿಕೆ ಸಜ್ಜಾಗಿದೆ. ಗೆದ್ದರೆ ಸಾಮೂಹಿಕ ನಾಯಕತ್ವ- ಸೋತರೆ ಪಕ್ಷದ ರಾಜ್ಯಾಧ್ಯಕ್ಷರೇ ಹೊಣೆ ಎನ್ನುವುದು ಬಿಜೆಪಿಯ ಸಾಂಪ್ರದಾಯಿಕ ಪದ್ಧತಿ. ಪಕ್ಷದ ದೆಹಲಿ ನಾಯಕರ ಇತ್ತೀಚಿನ ವರ್ತನೆಯಿಂದ ಇದನ್ನು ಯಡಿಯೂರಪ್ಪ ಮನದಟ್ಟು ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ ಪಕ್ಷ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಬೇಕು ಹಾಗೇ ತಮ್ಮ ಮಗ ಬಿ.ವೈ.ರಾಘವೇಂದ್ರ ಕೂಡ ಶಿವಮೊಗ್ಗದಲ್ಲಿ ಗೆಲ್ಲಬೇಕು ಎಂಬ ಅನಿವಾರ್ಯತೆಯಲ್ಲಿ ಯಡಿಯೂರಪ್ಪ ಇದ್ದಾರೆ.

D2u538rWwAEi6pI

ಈ ಬಾರಿ ಮಗನೂ ಗೆಲ್ಲುತ್ತಾನೆ, ರಾಜ್ಯದಲ್ಲೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತೆ, ಮೈತ್ರಿ ಖತಂಗೊಂಡು ನಾನು ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಸುವರ್ಣ ಅವಕಾಶ ಕಣ್ಮುಂದೆ ಇದೆ ಎಂಬ ಆಶಾವಾದದಲ್ಲಿ 76 ವರ್ಷದ ಬಿ.ಎಸ್.ಯಡಿಯೂರಪ್ಪ ಇದ್ದಾರೆ. ಯಡಿಯೂರಪ್ಪ ಅವರ ಕುಟುಂಬ ರಾಜಕಾರಣ ಬಿಜೆಪಿಯ ಒಂದು ವರ್ಗದ ಅಸಹನೆಗೆ ಕಾರಣವಾಗಿದೆ. ಮತ್ತೆ ಸಿಎಂ ಆಗುವ ಬಯಕೆ, ಮಗನ ರಾಜಕೀಯ ಭವಿಷ್ಯ ರೂಪಿಸುವ ಕನಸು- ಈ ಎಲ್ಲಾ ಕಾರಣಗಳಿಂದ ಯಡಿಯೂರಪ್ಪ ಈ ಚುನಾವಣೆಯಲ್ಲಿ ತಮ್ಮ ಎಲ್ಲಾ ರೀತಿಯ ತಂತ್ರ-ಮಂತ್ರಗಳನ್ನು ಪ್ರಯೋಗಿಸಲು ಸಜ್ಜಾಗಿದ್ದಾರೆ.

ಇನ್ನು ಕ್ಷೇತ್ರದ ಸಮಸ್ಯೆಗಳ ವಿಷಯಕ್ಕೆ ಬಂದರೆ ಬಗರ್ ಹುಕುಂ, ಅರಣ್ಯ ಹಕ್ಕು, ವಿಐಎಸ್ ಎಲ್, ಎಂಪಿಎಂ, ನೀರಾವರಿ ಯೋಜನೆಗಳು, ಮಂಗನಕಾಯಿಲೆ ಇತ್ಯಾದಿ ವಿಷಯಗಳ ಬಗ್ಗೆ ಎರಡೂ ಪಕ್ಷಗಳು ತಮಗೆ ಬೇಕಾದಂತೆ ವ್ಯಾಖ್ಯಾನ ಮಾಡುತ್ತಿವೆ. ಇಂಥ ಇನ್ನೂ ಹತ್ತಾರು ವಿಷಯಗಳಿಗೆ ಕೇಂದ್ರ- ರಾಜ್ಯ ಸರ್ಕಾರಗಳೆರಡೂ ಹೊಣೆಯಾಗಿವೆ. ಈ ಸಮಸ್ಯೆಗಳು ತಾರಕಕ್ಕೇರಲು ಎಲ್ಲಾ ಪಕ್ಷಗಳ ಕೊಡುಗೆಯೂ ಇದೆ.

HDK

ಸ್ವಾತಂತ್ರ್ಯಾ ನಂತರ ಇದೂವರೆಗೂ ಕ್ಷೇತ್ರದಲ್ಲಿ 18 ಚುನಾವಣೆಗಳು ನಡೆದಿವೆ. 1991ರ ಚುನಾವಣೆಯವರೆಗೂ ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆ. ಇಲ್ಲಿ ಹತ್ತು ಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದಿದೆ. ಇನ್ನು ಇತ್ತೀಚಿನ ವರ್ಷಗಳಲ್ಲಿ ಅಂದರೆ 1998ರಿಂದ ಈಚೆಗೆ ನಡೆದ ಏಳು ಚುನಾವಣೆಗಳಲ್ಲಿ ಬಿಜೆಪಿ ಆರು ಚುನಾವಣೆಗಳನ್ನು ಗೆದ್ದಿದೆ. ಕೊನೆ ಮೂರು ಚುನಾವಣೆಗಳಲ್ಲೂ ಬಿಜೆಪಿ ನಿರಂತರವಾಗಿ ಗೆಲ್ಲುತ್ತಲೇ ಬಂದಿದೆ. ಆದರೆ, ಕಳೆದ ವರ್ಷ ನಡೆದ ಉಪಚುನಾವಣೆಯಲ್ಲಿ ಗೆಲುವಿನ ಅಂತರ 50 ಸಾವಿರಕ್ಕೆ ಇಳಿದದ್ದು, ಬಿಜೆಪಿಯನ್ನು ಚಿಂತೆಗೀಡು ಮಾಡಿದೆ. ಈ ಗೆಲುವನ್ನೂ ಸೋಲೆಂದೇ ಸ್ವೀಕರಿಸಿ ಬಿಜೆಪಿ ಕೆಲಸ ಮಾಡಿದೆ. ಚುನಾವಣೆ ಗೆಲುವನ್ನೇ ಗುರಿ ಮಾಡಿಕೊಂಡು ಈ ಮಟ್ಟಿಗಿನ ಬದ್ಧತೆಯ ಕೆಲಸ ಮೈತ್ರಿಕೂಟದಲ್ಲಿ ಆಗಿಲ್ಲ. ಈಗ ಮತ್ತೊಮ್ಮೆ ಮೈತ್ರಿ- ಬಿಜೆಪಿ ಅಭ್ಯರ್ಥಿಗಳು ಮುಖಾಮುಖಿಯಾಗಿದ್ದಾರೆ.

ಹೀಗೆ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಫ್ಯಾಮಿಲಿಯ ಹಣಾಹಣಿಗೆ ವೇದಿಕೆಯಾಗಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರ ದೇಶದ ಗಮನ ಸೆಳೆದಿದೆ. ಕೊನೆಯ ಗಳಿಗೆಯ ಆಟಕ್ಕೆ ಎರಡೂ ಬಣಗಳು ಸಜ್ಜಾಗಿವೆ. ಇನ್ನು ಮತದಾನ- ಫಲಿತಾಂಶದತ್ತ ಕುತೂಹಲ ಮೂಡಿದೆ.

D2wJFFpWwAEQHdw

TAGGED:bjpbs yeddyurappaBY RaghavendracongressjdsLok Sabha elections 2019madhu bangarappaPublic TVshivamoggaಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿ.ವೈ.ರಾಘವೇಂದ್ರಬಿಜೆಪಿಮಧು ಬಂಗಾರಪ್ಪಲೋಕಸಭಾ ಚುನಾವಣೆ 2019ಶಿವಮೊಗ್ಗ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

mammootty
ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್
Cinema Latest South cinema Top Stories
Prabhas Anuksha
ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಪ್ರಭಾಸ್-ಅನುಷ್ಕಾ
Cinema Latest South cinema Top Stories
Chahal Dhanashree
ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ
Cinema Cricket Latest Top Stories
amitabh bacchan house
ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
Cinema Latest National Top Stories
Rukmini Vasanth Pot Making
ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್
Cinema Latest Sandalwood Top Stories

You Might Also Like

Chikkodi Flooded
Belgaum

`ಮಹಾ’ ಮಳೆಗೆ ಕೃಷ್ಣಾ ನದಿ ಒಳಹರಿವು ಹೆಚ್ಚಳ – ತುಂಬು ಗರ್ಭಿಣಿ ಸೇರಿ ನಡುಗಡ್ಡೆಯಲ್ಲಿ ಸಿಲುಕಿದ 40 ಕುಟುಂಬ

Public TV
By Public TV
8 minutes ago
Chitradurga
Chitradurga

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ ರಹಸ್ಯ ಬಯಲು – ಪ್ರಿಯತಮನಿಂದಲೇ ಸ್ಕೆಚ್‌; ಮರ್ಮ ಅರಿಯದೇ ಹೊರಟಿದ್ದಳು ಮುಗ್ಧೆ

Public TV
By Public TV
9 minutes ago
CHIKKODI FLOOD
Belgaum

ಚಿಕ್ಕೋಡಿ | ಗ್ರಾಮಕ್ಕೆ ನುಗ್ಗಿದ ವೇದಗಂಗಾ ನದಿ ನೀರು- 20ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂತರ

Public TV
By Public TV
25 minutes ago
Nikki Haley
Latest

ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ

Public TV
By Public TV
35 minutes ago
naseer ahmed 2
Bengaluru City

ಮೋದಿ ದೇಶದ ದೊಡ್ಡ ಫ್ರಾಡ್, ಹೀಗೆ ಮಾಡಿದ್ದಕ್ಕೆ ಟ್ರಂಪ್‌ 50% ಸುಂಕ ಹಾಕಿದ್ದು: ನಜೀರ್ ಅಹಮದ್

Public TV
By Public TV
2 hours ago
Dharmasthala Chalo
Bengaluru City

ಬಿಜೆಪಿಯ ಮತ್ತೊಂದು ತಂಡದಿಂದ ಇಂದು `ಧರ್ಮಸ್ಥಳ ಚಲೋ’ – 500 ಕಾರುಗಳಲ್ಲಿ ಹೊರಟ ಕಾರ್ಯಕರ್ತರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?