Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೈಡ್ರಾಮದ ಬಳಿಕ ಸುಸೂತ್ರವಾಗಿ ನಡೆದ ಚುನಾವಣೆ- ಬಿಜೆಪಿ ನಾಯಕರ ಆದೇಶಕ್ಕೆ ತಲೆಬಾಗಿದ ಮೇಯರ್ ಅಭ್ಯರ್ಥಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹೈಡ್ರಾಮದ ಬಳಿಕ ಸುಸೂತ್ರವಾಗಿ ನಡೆದ ಚುನಾವಣೆ- ಬಿಜೆಪಿ ನಾಯಕರ ಆದೇಶಕ್ಕೆ ತಲೆಬಾಗಿದ ಮೇಯರ್ ಅಭ್ಯರ್ಥಿ

Districts

ಹೈಡ್ರಾಮದ ಬಳಿಕ ಸುಸೂತ್ರವಾಗಿ ನಡೆದ ಚುನಾವಣೆ- ಬಿಜೆಪಿ ನಾಯಕರ ಆದೇಶಕ್ಕೆ ತಲೆಬಾಗಿದ ಮೇಯರ್ ಅಭ್ಯರ್ಥಿ

Public TV
Last updated: January 29, 2020 3:39 pm
Public TV
Share
4 Min Read
Shivamogga Mayor 1
SHARE

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ಕೊನೆಗೂ ಹೈಡ್ರಾಮದ ನಡುವೆ ಮುಗಿದಿದೆ. ಮೇಯರ್ ಆಗಿ ಬಿಜೆಪಿಯ ಸುವರ್ಣ ಶಂಕರ್ ಆಯ್ಕೆಯಾದರೆ, ಉಪಮೇಯರ್ ಆಗಿ ಸುರೇಖಾ ಮುರಳೀಧರ್ ಆಯ್ಕೆಗೊಂಡಿದ್ದಾರೆ.

ಒಂದು ಹಂತದಲ್ಲಿ ನ್ಯಾಯಾಲಯದ ಮೆಟ್ಟಿಲು ಏರಿದ್ದ ಮೇಯರ್ ಆಯ್ಕೆ ಪ್ರಕರಣ ನಂತರ ಬಿಜೆಪಿ ನಾಯಕರ ಮಧ್ಯೆ ಪ್ರವೇಶದಿಂದಾಗಿ ಸುಖಾಂತ್ಯ ಕಂಡಿದೆ. ಕಣ್ಣೀರು, ಸಿಟ್ಟು, ಸಂತಸ, ಸಂಭ್ರಮ ಇವೆಲ್ಲದರ ನಡುವೆ ಮೇಯರ್ ಮತ್ತು ಉಪಮೇಯರ್ ಆಯ್ಕೆ ನಡೆದಿದೆ.

Shivamogga Mayor 2

ಕಳೆದೊಂದು ವಾರದಿಂದ ಭಾರೀ ಕೂತುಹಲ ಮತ್ತು ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದ್ದ ಶಿವಮೊಗ್ಗ ಮಹಾನಗರ ಪಾಲಿಕೆಯ 2ನೇ ಅವಧಿಗೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ಸುಖಾಂತ್ಯ ಕಂಡಿದೆ. ನ್ಯಾಯಾಲಯದ ಮೆಟ್ಟಿಲು ಸಹ ಏರಿದ್ದ ಮೇಯರ್ ಆಯ್ಕೆ ಪ್ರಕ್ರಿಯೆ ಕೊನೆಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರ ಮಧ್ಯಸ್ಥಿಕೆ ನಡುವೆ ಅಂತಿಮವಾಗಿ ಬಿಜೆಪಿ ಪಕ್ಷದ ಹಿರಿಯ ಸದಸ್ಯೆ ಸುವರ್ಣ ಶಂಕರ್ ಅವರ ಆಯ್ಕೆ ನಡೆದಿದೆ.

ಅಷ್ಟಕ್ಕೂ ಕಳೆದೊಂದು ವಾರದಿಂದ ಬಿಜೆಪಿಯ ಪಾಲಿಕೆ ಸದಸ್ಯರ ನಡುವೆಯೇ ಮೇಯರ್ ಆಗಬೇಕೆಂಬ ಜಿದ್ದಾಜಿದ್ದು ಏರ್ಪಟಿತ್ತು. ಬಿಸಿಎಂ (ಬಿ)ಗೆ ಮೀಸಲಾಗಿದ್ದ ಮೇಯರ್ ಸ್ಥಾನಕ್ಕೆ ಸುವರ್ಣ ಶಂಕರ್ ಮತ್ತು ಅನಿತಾ ರವಿಶಂಕರ್ ನಡುವೆ ಭಾರೀ ಪೈಪೋಟಿ ನಡೆದಿತ್ತು. ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ಕಾರ್ಪೋರೇಟರ್ ಆಗಿ ಆಯ್ಕೆಯಾಗಿದ್ದ ಸುವರ್ಣ ಶಂಕರ್ ಅವರಿಗೆ ಬಿಸಿಎಂ (ಬಿ) ಜಾತಿ ಪ್ರಮಾಣ ಪತ್ರ ನೀಡಿದ್ದರ ಕುರಿತಂತೆ ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಈ ಬಗ್ಗೆ ಕಾನೂನಿನ ಮೂಲಕ ಪ್ರಶ್ನಿಸಲಾಗಿತ್ತು. ಅಂತಿಮವಾಗಿ ಸುವರ್ಣ ಶಂಕರ್ ಅರ್ಜಿ ವಜಾ ಮಾಡಿ ಅನಿತಾ ರವಿಶಂಕರ್ ಅವರ ಅರ್ಜಿ ಮಾನ್ಯ ಮಾಡಿದ್ದ ಎಸಿ ನ್ಯಾಯಾಲಯ ತೀರ್ಪು ಕೂಡ ನೀಡಿತ್ತು. ಆದರೆ ಇದನ್ನ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ನಿನ್ನೆ ಸ್ಟೇ ಆರ್ಡರ್ ತಂದಿದ್ದ ಸುವರ್ಣ ಶಂಕರ್ ಇಂದು ಅಂತಿಮವಾಗಿ ಮೇಯರ್ ಆಗಿ ಆಯ್ಕೆಗೊಂಡಿದ್ದಾರೆ.

Shivamogga Mayor A 2

ಇಂದು ಮುಂಜಾನೆಯೇ ಸಚಿವ ಈಶ್ವರಪ್ಪ ಸೇರಿದಂತೆ ಪಕ್ಷದ ಹಿರಿಯ ನಾಯಕರ ನೇತೃತ್ವದಲ್ಲಿ ಪಾಲಿಕೆ ಸದಸ್ಯರ ಸಭೆ ನಡೆಸಿದ ಬಳಿಕ ಸುವರ್ಣ ಶಂಕರ್ ಅವರನ್ನೇ ಅಂತಿಮವಾಗಿ ಮೇಯರ್ ಅಭ್ಯರ್ಥಿ ಎಂದು ಘೋಷಿಸಿದರಲ್ಲದೇ ಮತ್ತೊಬ್ಬ ಪ್ರಬಲ ಸ್ಪರ್ಧಾಕಾಂಕ್ಷಿ ಅದರಲ್ಲೂ ಯಡಿಯೂರಪ್ಪ ಬಣ ಎಂದು ಗುರುತಿಸಿಕೊಂಡಿದ್ದ ಅನಿತಾ ರವಿಶಂಕರ್ ಅವರಿಗೆ ಸುಮ್ಮನಿರುವಂತೆ ತಾಕೀತು ಮಾಡಲಾಯಿತು. ಈ ವೇಳೆ ಸಿಟ್ಟಿನಿಂದಲೇ ಸಭೆಯಿಂದ ಹೊರಬಂದ ಅನಿತಾ ರವಿಶಂಕರ್ ಅಳುತ್ತಲೇ ಕಾರಿನಲ್ಲಿ ತೆರಳಿದರು. ಬಿಜೆಪಿ ಸದಸ್ಯರೆಲ್ಲರೂ ಒಂದೇ ಬಸ್ ನಲ್ಲಿ ದೇವಾಲಯಕ್ಕೆ ತೆರಳಿ ಪಾಲಿಕೆಗೆ ಬಂದರೂ ಕೂಡ ಅನಿತಾ ರವಿಶಂಕರ್ ಮಾತ್ರ ಅಂತರ ಕಾಯ್ದುಕೊಂಡೇ ಇದ್ದರು.

Shivamogga Mayor A 1

ಈ ನಡುವೆ ಪಾಲಿಕೆ ಸಭಾಂಗಣದಲ್ಲಿ ನಡೆದ ಮೇಯರ್ ಮತ್ತು ಉಪಮೇಯರ್ ಆಯ್ಕೆ ಪ್ರಕ್ರಿಯೆಯಲ್ಲಿ, ಮೇಯರ್ ಗೆ 26 ಜನರು ಕೈ ಎತ್ತುವ ಮೂಲಕ ಮತ್ತು ಉಪಮೇಯರ್ ಗೆ 26 ಜನರು ಕೈ ಎತ್ತುವ ಮೂಲಕ ಆಯ್ಕೆ ನಡೆಸಲಾಯಿತು. ಈ ಮಧ್ಯೆ ಕಾಂಗ್ರೆಸ್ ಪಕ್ಷ ಕೂಡ ಮೇಯರ್ ಮತ್ತು ಉಪಮೇಯರ್ ಗೆ ಸ್ಪರ್ಧಿಸಿ 12 ಮತಗಳಿಗೆ ತೃಪ್ತಿಪಟ್ಟು ಕೊಳ್ಳಬೇಕಾಯಿತು.

ಈ ಎಲ್ಲಾ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿದ ಸಚಿವ ಕೆ.ಎಸ್. ಈಶ್ವರಪ್ಪ, ಸ್ವಾಭಾವಿಕವಾಗಿ ಸದಸ್ಯರಿಗೆ ಮೇಯರ್ ಆಗಬೇಕೆಂಬ ಅಪೇಕ್ಷೆ ಇದ್ದೆ ಇರುತ್ತದೆ. ಆದ್ರೆ ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧ ಎಂದು ತೋರಿಸಿಕೊಡುವುದೇ ಬಿಜಪಿ ಎನ್ನುವ ಮೂಲಕ ಬೇಸರಗೊಂಡಿರುವ ಸದಸ್ಯರಿಗೆ ಕಿವಿ ಮಾತು ಹೇಳಿದ್ದಾರೆ.

Shivamogga Mayor A 4

ಅಷ್ಟಕ್ಕೂ ಮೇಯರ್ ಆಗುವ ಆಸೆ ಕೈಚೆಲ್ಲಿ ಬೇಸರಗೊಂಡಿರುವ ಅನಿತಾ ರವಿಶಂಕರ್ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರೂ ಕೂಡ ಅವರ ಮುಖದಲ್ಲಿ ದುಃಖ ಎದ್ದು ಕಾಣುತಿತ್ತು. ಒಂದು ಹಂತದಲ್ಲಿ ಮತ ಚಲಾವಣೆಗೆ ಕೈ ಎತ್ತುವ ಸಂದರ್ಭದಲ್ಲಿ ಅರ್ಧ ಕೈ ಎತ್ತುವ ಮೂಲಕ ತಮ್ಮ ಅಸಮಾಧಾನವನ್ನು ಕೂಡ ಅವರು ಹೊರ ಹಾಕಿದ ಘಟನೆಯೂ ನಡೆಯಿತು.

ಈ ಮಧ್ಯೆ ಬಿಜೆಪಿ ಸದಸ್ಯರ ಕಾಲೆಳೆದ ಕಾಂಗ್ರೆಸ್ ಸದಸ್ಯರಿಗೆ ಸಚಿವ ಈಶ್ವರಪ್ಪ ಕ್ಲಾಸ್ ಕೂಡ ತೆಗೆದುಕೊಂಡರು. ಬಿಜೆಪಿಯ ಎರಡು ಬಣಗಳ ಇಬ್ಬರು ಅಭ್ಯರ್ಥಿಗಳು ರೇಸ್ ನ ಹಿನ್ನೆಲೆಯಲ್ಲಿ, ಪಾಲಿಕೆಯ ಕಾಂಗ್ರೆಸ್ ಸದಸ್ಯ ಯೋಗಿಶ್ ಬಿಜೆಪಿ ಸದಸ್ಯರ ಕಾಲೆಳೆದರು. ಈ ವೇಳೆ ಸಿಟ್ಟಿಗೆದ್ದ ಈಶ್ವರಪ್ಪ ಕಾಂಗ್ರೆಸ್ ಪ್ರಾಂತವಾರು ನಾಲ್ವರು ಕೆಪಿಸಿಸಿ ಕಾರ್ಯಧ್ಯಕ್ಷರ ಆಯ್ಕೆಗೆ ಮುಂದಾಗಿದ್ದಾರೆ ಎಂದು ಕುಟುಕಿದರು. ಕಾಂಗ್ರೆಸ್ ಪಕ್ಷದ ಹಣೆಬರಹ ನೋಡಿ ಎಂದು ಹೇಳುವ ಮೂಲಕ ಸಚಿವ ಈಶ್ವರಪ್ಪ ಚುನಾವಣಾ ಅಧಿಕಾರಿಗಳ ಮುಂದೆಯೇ ಕೈ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡರು.

Shivamogga Mayor A 3

ಈ ನಡುವೆ ಮೇಯರ್ ಮತ್ತು ಉಪಮೇಯರ್ ಆಯ್ಕೆ ಪ್ರಕ್ರಿಯೆ ಸರಾಗವಾಗಿ ನಡೆದು ಸ್ಥಾಯಿ ಸಮಿತಿ ಸದಸ್ಯ ಸ್ಥಾನಕ್ಕೆ ಅವಿರೋಧ ಆಯ್ಕೆಯೂ ನಡೆಯಿತು. ಇನ್ನು ನೂತನವಾಗಿ ಮೇಯರ್ ಮತ್ತು ಉಪಮೇಯರ್ ಆಗಿ ಆಯ್ಕೆಗೊಂಡ ಸುವರ್ಣ ಶಂಕರ್ ಮತ್ತು ಸುರೇಖಾ ಮುರಳೀಧರ್ ಅವರಿಗೆ ಸಚಿವ ಈಶ್ವರಪ್ಪ ಸೇರಿದಂತೆ ಬಿಜೆಪಿ ಸದಸ್ಯರು ಹಾರ ತುರಾಯಿ ಹಾಕುವ ಮೂಲಕ ಸುವರ್ಣ ಶಂಕರ್ ಪರವಾಗಿ ಇರುವುದಾಗಿ ತೋರ್ಪಡಿಸಿದರು. ಆದರೆ ಈ ವೇಳೆ ಬೇಸರಗೊಂಡ ಅನಿತಾ ರವಿಶಂಕರ್ ಸಭೆಯಿಂದ ನಿರ್ಗಮಿಸಿ ಆಗಿತ್ತು.

ಇಂದು ನಡೆದ ಶಿವಮೊಗ್ಗ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಮಹಾ ಪೌರರಾಗಿ ಶ್ರೀಮತಿ ಸುವರ್ಣ ಶಂಕರ್ ಹಾಗೂ ಉಪ ಮಹಾಪೌರರಾಗಿ ಶ್ರೀಮತಿ ಸುರೇಖಾ ಮುರಳೀಧರ ರವರು ಆಗಿ ಆಯ್ಕೆಯಾಗಿದ್ದಾರೆ.

ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. pic.twitter.com/ioBMfYy9Nm

— K S Eshwarappa (@ikseshwarappa) January 29, 2020

ಒಟ್ಟಿನಲ್ಲಿ ಬಲು ರೋಚಕತೆ ಪಡೆದುಕೊಂಡಿದ್ದ ಮೇಯರ್ ಆಯ್ಕೆ ಪ್ರಕ್ರಿಯೆ ಬಿಜೆಪಿ ನಾಯಕರ ಮಧ್ಯೆ ಪ್ರವೇಶದಿಂದಾಗಿ ಸುಖಾಂತ್ಯ ಕಂಡಿದೆ. ಈ ನಡುವೆ ಬಿಜೆಪಿ ಸದಸ್ಯರಲ್ಲೂ ಎಲ್ಲವೂ ಸರಿಯಿಲ್ಲ ಎಂಬುದು ತೋರ್ಪಡಿಸಿದಂತಾಗಿದ್ದು, ಯಡಿಯೂರಪ್ಪ ಬಣ ಮತ್ತು ಈಶ್ವರಪ್ಪ ಬಣದ ಸದಸ್ಯರ ಪೈಕಿ ಈಶ್ವರಪ್ಪ ಬಣದ ಸದಸ್ಯೆ ಮೇಯರ್ ಆಗಿ ಆಯ್ಕೆಗೊಂಡಂತಾಗಿದೆ. ಅಂದಹಾಗೆ ಇದೀಗ ಅಸಮಾಧಾನಗೊಂಡಿರುವ ಅನಿತಾ ರವಿಶಂಕರ್ ಅವರಿಗೆ ಯಾವ ಹುದ್ದೆ ನೀಡಿ ಮನವೊಲಿಸಲಾಗುತ್ತೆ ಎಂಬುದನ್ನು ಕಾದು ನೋಡಬೇಕಿದೆ.

TAGGED:bjpks eshwarappashivamoggashivamogga municipal corporationಕೆ.ಎಸ್.ಈಶ್ವರಪ್ಪಬಿಜೆಪಿಶಿವಮೊಗ್ಗಶಿವಮೊಗ್ಗ ಮಹಾನಗರ ಪಾಲಿಕೆ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Khawaja Asif Benjamin Netanyahu
Latest

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Public TV
By Public TV
4 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್‌ – ಕಿಡ್ನ್ಯಾಪ್‌ ಶಂಕೆ ವ್ಯಕ್ತಪಡಿಸಿದ ವಿದ್ಯಾರ್ಥಿನಿ ತಾಯಿ

Public TV
By Public TV
21 minutes ago
daily horoscope dina bhavishya
Astrology

ದಿನ ಭವಿಷ್ಯ 10-04-2026

Public TV
By Public TV
46 minutes ago
Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
8 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
8 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?