ಲೋಸಕಭಾ ಚುನಾವಣೆಯ ಪ್ರಚಾರ ಮತ್ತು ಸತತ ಚಿತ್ರೀಕರಣದಿಂದಾಗಿ ಸುಸ್ತಾಗಿದ್ದ ನಟ ಶಿವರಾಜ್ ಕುಮಾರ್ (Shivaraj Kumar) ಒಂದು ದಿನ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ಇಂದು ಆಸ್ಪತ್ರೆಗೆ (hospital) ದಾಖಲಾಗಿ ಚಿಕಿತ್ಸೆ ಪಡೆದು ನಾಳೆ ಮನೆಗೆ ವಾಪಸ್ಸಾಗಲಿದ್ದಾರೆ.
ದೇವನಹಳ್ಳಿ ಬಳಿ ಚಿತ್ರೀಕರಣದ ವೇಳೆ ಶಿವರಾಜ್ ಕುಮಾರ್ ಅವರಿಗೆ ಸುಸ್ತಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ಪರೀಕ್ಷೆಗಳನ್ನ ಮಾಡಿಸಿ ರಿಪೋರ್ಟ್ ಪಡೆದು, ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಶಿವಣ್ಣ. ಆದರೆ, ಶೂಟಿಂಗ್ ಸೆಟ್ ನಲ್ಲಿ ಬಹಳಷ್ಟು ಧೂಳು ಆವರಿಸಿ ಮತ್ತೆ ಸುಸ್ತಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಚಿಕಿತ್ಸೆ ಪಡೆದು ನಾಳೆ ಬೆಳಿಗ್ಗೆ ಮನೆಗೆ ತೆರಳಲಿದ್ದಾರೆ ಶಿವರಾಜ್ ಕುಮಾರ್. ಚಿಕಿತ್ಸೆ ನಂತರ ಶಿವರಾಜ್ ಕುಮಾರ್ ಆರಾಮಾಗಿದ್ದಾರೆ. ಯಾವುದೇ ಆತಂಕ ಪಡುವಂಥದ್ದು ಇಲ್ಲ ಎಂದಿದ್ದಾರೆ ಆಪ್ತರು.