ನವದೆಹಲಿ: ಸ್ಯಾಂಡಲ್ವುಡ್ ನಟ ಶಿವರಾಜ್ಕುಮಾರ್ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನು ಭೇಟಿಯಾಗಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾದ ಬೆನ್ನಲ್ಲೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನು ಶಿವರಾಜ್ಕುಮಾರ್ ಭೇಟಿಯಾಗಿದ್ದಾರೆ. ಮೈಸೂರಿನ ಶಕ್ತಿಧಾಮಕ್ಕೆ ಬರುವಂತೆ ಆಹ್ವಾನಿಸಿದರು. ಆಮಂತ್ರಣವನ್ನು ವೆಂಕಯ್ಯ ನಾಯ್ಡು ಸ್ವೀಕರಿಸಿದ್ದಾರೆ.
- Advertisement 2
- Advertisement 3
ಕೆಲವು ದಿನಗಳ ಹಿಂದೆ ಶಿವರಾಕುಮಾರ್, ಗೀತಾ ದಂಪತಿ ಚೆನ್ನೈಗೆ ತೆರಳಿದ್ದರು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಆಗಿದ್ದರು. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದನ್ನೂ ಓದಿ: ತಮಿಳುನಾಡು ಸಿಎಂ ಮನೆಗೆ ಶಿವರಾಜ್ಕುಮಾರ್ ದಂಪತಿ ಭೇಟಿ
- Advertisement 4
ವೆಂಕಯ್ಯ ನಾಯ್ಡು ಮತ್ತು ಶಿವರಾಜ್ಕುಮಾರ್ ಅವರದ್ದು, ಸಹಜ ಭೇಟಿ ಎಂದು ಹೇಳಲಾಗುತ್ತಿದೆ. ಭೇಟಿಯ ಉದ್ದೇಶ ಏನು ಎಂಬ ಬಗ್ಗೆ ಶಿವಣ್ಣ ಅಧಿಕೃತ ಹೇಳಿಕೆ ನೀಡಬೇಕಿದೆ. ಎಂ.ಕೆ. ಸ್ಟಾಲಿನ್ ಅವರ ಜೊತೆ ಶಿವರಾಜ್ಕುಮಾರ್ ಮತ್ತು ಗೀತಾ ಅವರು ನಿಂತಿರುವ ಫೋಟೋ ಸಹ ಲಭ್ಯವಾಗಿತ್ತು. ಇದೀಗ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನು ಭೇಟಿಯಾಗಿದ್ದಾರೆ.