Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕಾಗೇರಿಗೊಂದು ನ್ಯಾಯ ಹೆಬ್ಬಾರ್‌ಗೊಂದು ನ್ಯಾಯ- ಸಿಡಿದೆದ್ದ ಹೆಬ್ಬಾರ್ ಅಭಿಮಾನಿಗಳು?

Public TV
Last updated: October 24, 2023 3:01 pm
Public TV
Share
3 Min Read
KARWAR
SHARE

ಕಾರವಾರ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಯಲ್ಲಾಪುರದ ಐದು ಜನ ಬಿಜೆಪಿ ಪದಾಧಿಕಾರಿಗಳನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷ ವೆಂಕಟೇಶ್ ನಾಯ್ಕ್ ಮರು ನೇಮಕ ಮಾಡಿರುವುದಕ್ಕೆ ಶಿವರಾಮ್ ಹೆಬ್ಬಾರ್ (Shivaram Hebbar) ಅವರ ಅಭಿಮಾನಿ ಬಳಗ ಅಸಮಾಧಾನ ಹೊರಹಾಕಿದೆ.

ಇಂದು ಯಲ್ಲಾಪುರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಬ್ಬಾರ್ ಅಭಿಮಾನಿ ಬಳಗದ ಪಟ್ಟಣಪಂಚಾಯತ್ ಸದಸ್ಯ ಸತೀಶ್ ಶಿವಾನಂದ್ ನಾಯ್ಕ್, ಅಸಮಾಧಾನ ಹೊರಹಾಕಿದ್ದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಚಟುವಟಿಕೆ ನಡೆಸಿ ಯಲ್ಲಾಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಶಿವರಾಮ್ ಹೆಬ್ಬಾರ್ ರವರು ಅತ್ಯಲ್ಪ ಮತಗಳಿಂದ ಗೆಲುವು ಕಾಣುವಂತಾಯ್ತು. ಹೀಗಾಗಿ ಇಂಥವರ ವಿರುದ್ಧ ಕ್ರಮಕ್ಕಾಗಿ ಶಾಸಕ ಶಿವರಾಮ್ ಹೆಬ್ಬಾರ್ ರವರು ಪಕ್ಷದ ವರಿಷ್ಟರಿಗೆ ದೂರು ನೀಡಿದ್ದರು. ಇದಲ್ಲದೇ ಶಿರಸಿ ಯ ಮಾಜಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಸಹ ದೂರು ನೀಡಿದ್ದರು.

ಇದರ ಅನ್ವಯ ಶಿರಸಿ, ಯಲ್ಲಾಪುರದಲ್ಲಿ ಪದಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡ ಪಕ್ಷದ ಶಿಸ್ತುಪಾಲನಾ ಸಮಿತಿ ಯಲ್ಲಾಪುರ ಹಾಗೂ ಶಿರಸಿ ಭಾಗದಲ್ಲಿನ ಪಕ್ಷ ವಿರೋಧಿ ಕಾರ್ಯ ನಡೆಸಿದ ಪದಾಧಿಕಾರಿಗಳನ್ನು ಪಕ್ಷದ ಪದಾಧಿಕಾರಿ ಸ್ಥಾನ ದಿಂದ ವಿಮುಕ್ತಿಗೊಳಿಸಲಾಗಿತ್ತು. ಆದರೆ ಇದೀಗ ಯಲ್ಲಾಪುರದಲ್ಲಿ ಐದು ಜನರನ್ನು ಪುನಃ ಪದಾಧಿಕಾರಿ ಸ್ಥಾನಕ್ಕೆ ಅವರನ್ನು ಮರು ನೇಮಕ ಮಾಡಿಕೊಳ್ಳಲಾಗಿದೆ. ಆದರೆ ಶಿರಸಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಇದ್ದು ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಯಲ್ಲಾಪುರದಲ್ಲಿ ಮರು ನೇಮಕ ಮಾಡಿದಂತೆ ಶಿರಸಿಯಲ್ಲಿ ಯಾಕೆ ಮಾಡಲಿಲ್ಲ? ಹೆಬ್ಬಾರ್ ಗೆ ಒಂದು ನ್ಯಾಯ, ಕಾಗೇರಿಯವರಿಗೆ ಒಂದು ನ್ಯಾಯ ಮಾಡಿದ್ದು ಎಷ್ಟು ಸರಿ ಎಂದು ಅವರು ಅಕ್ರೋಶ ಹೊರಹಾಕಿದರು. ಇದನ್ನೂ ಓದಿ: ಭಾರತ ಅಭಿವೃದ್ಧಿಯಾದರೆ ಕೆಲವರ ಆಟ ನಡೆಯಲ್ಲ: ಮೋಹನ್ ಭಾಗವತ್

ಶಾಸಕರು ನೀಡಿದ ಲಿಖಿತ ದೂರಿಗೆ ಪಕ್ಷ ಮಣ್ಣನೆ ನೀಡಿಲ್ಲ. ಪಕ್ಷವಿರೋಧಿಗಳನ್ನ ಪುನಃ ಸೇರ್ಪಡೆ ಮಾಡಿಕೊಂಡ ಪಕ್ಷದ ವರಿಷ್ಠರ ನಡೆ ಖಂಡನೀಯ. ಕೇವಲ ನಾಮಕಾವಸ್ತೆ ಕ್ರಮ ಜರುಗಿಸಿದಂತೆ ಪಕ್ಷದಲ್ಲಿದ್ದ ಪದವಿಗಳಿಂದ ವಿಮುಕ್ತಿಗೊಳಿಸಿ ತೇಪೆ ಹಚ್ಚುವ ಕೆಲಸವಾಗಿತ್ತು. ಆದರೆ ಇದೀಗ ಪಕ್ಷದ ಅಭ್ಯರ್ಥಿಯನ್ನೇ ಸೋಲಿಸ ಹೊರಟ ಪಕ್ಷ ದ್ರೋಹಿಗಳಿಗೆ ಮತ್ತೆ ಅದೇ ಸ್ಥಾನಗಳಿಗೆ ಮರು ಸೇರ್ಪಡೆ ಮಾಡುತ್ತಿರುವ ಸುದ್ದಿ ನೋಡಿ ನಿಷ್ಠಾವಂತ ಹೆಬ್ಬಾರ್ ಅಭಿಮಾನಿಗಳಾದ ನಮ್ಮಂತಹ ಸಹಸ್ರಾರು ಮಂದಿಗೆ ಅತೀವ ಬೇಸರವಾಗಿದೆ. ನನ್ನನ್ನು ಸಹ ಹೆಸರಿಗೆ ಮಾತ್ರ ಶಕ್ತಿಕೇಂದ್ರದ ಅಧ್ಯಕ್ಷೆಯನ್ನಾಗಿಸಿ ಫೋನ್ ಕರೆ ಮಾಡುವ ಕೆಲಸಕ್ಕೆ ಮಾತ್ರ ಬಳಸಿಕೊಂಡು ನಿರ್ಲಕ್ಷಿಸಿದ ಧೋರಣೆ ಅತ್ಯಂತ ಖಂಡನೀಯ.

ಪಕ್ಷದ ವರಿಷ್ಠರ ಈ ನಡೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ನಮ್ಮೆಲ್ಲರ ಚುನಾವಣೆ ಸಂದರ್ಭದ ಶ್ರಮಕ್ಕೆ ಅವಮಾನಿಸಿದಂತಾಗಿದೆ. ಈ ಸಂಬಂಧ ಪಕ್ಷದ ಜಿಲ್ಲಾ ವರಿಷ್ಟರು ಮತ್ತು ರಾಜ್ಯದ ವರಿಷ್ಠರು ಪಕ್ಷದ ಶಾಸಕರ ಗಮನಕ್ಕೂ ತರದೆ ಪಕ್ಷದ್ರೋಹಿಗಳನ್ನು ಮತ್ತೆ ಪಕ್ಷದ ಪದವಿಗಳಿಗೆ ಮರು ಸೇರ್ಪಡೆ ಮಾಡಿರುವುದು ಶಾಸಕರಿಗೆ ಮಾಡಿದ ಅಪಮಾನವಾಗಿದ್ದು, ಇದನ್ನು ಹೆಬ್ಬಾರ್ ಅಭಿಮಾನಿ ಬಳಗ ಉಗ್ರವಾಗಿ ವಿರೋಧಿಸುತ್ತಿದೆ ಎಂದರು.

ತಕ್ಷಣ ಪಕ್ಷದ ನಾಯಕರು ಶಾಸಕರೊಂದಿಗೆ ಮಾತನಾಡಿ ಅವರ ಒಪ್ಪಿಗೆ ಪಡೆದು ಈ ಕ್ರಮದ ಬಗ್ಗೆ ನಿರ್ಧರಿಸಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಬರಲಿರುವ ಲೋಕ ಸಭಾ ಚುನಾವಣೆಯಲ್ಲಿ ಪಕ್ಷವೇ ಅಧಿಕೃತವಾಗಿ ಪಕ್ಷದ್ರೋಹಿಗಳಿಗೆ ಬಲ ತುಂಬಿ ಪಕ್ಷದಿಂದ ಸ್ಪರ್ಧಿಸುವ ಅಧಿಕೃತ ಅಭ್ಯರ್ಥಿ ವಿರುದ್ಧ ಪ್ರಚಾರಮಾಡಿ ಸೋಲಿಸುವಂತೆ ಪ್ರೇರಣೆ ನೀಡಿದಂತಾಗಲಿದೆ.

ಹಾಗೇನಾದರೂ ಆದಲ್ಲಿ ಪಕ್ಷ, ತತ್ವ, ಸಿದ್ಧಾಂತ, ಶಿಸ್ತು ಎಲ್ಲವೂ ತೋರ್ಪಡಿಕೆಯ ಭಾಷಣದ ಪದಗಳೆಂದು ಕಾರ್ಯಕರ್ತರಾದ ನಾವುಭಾವಿಸುವಂತಾಗಲಿದೆ ದಯವಿಟ್ಟು ಅದಕ್ಕೆ ಆಸ್ಪದ ನೀಡದೇ ಕ್ರಮಜರುಗಿಸಬೇಕಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಅಮಿತ್ ಅಂಗಡಿ, ಸದಸ್ಯರಾದ ಪ್ರಶಾಂತ್ ತಳವಾರ, ಅಬ್ದುಲ್ ಅಲಿ ನೂತನ ನಗರ, ಹಲೀಮ ಕಕ್ಕೇರಿ, ಗೀತಾ ದೇಶ ಭಂಡಾರಿ, ನಾಗರಾಜ್ ಅಂಕೋಲೆಕರ್ ಉಪಸ್ಥಿತರಿದ್ದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

TAGGED:karwarShivaram Hebbarvishweshwara heggade kageriಕಾರವಾರವಿಶ್ವೇಶ್ವರ ಹೆಗ್ಗಡೆ ಕಾಗೇರಿಶಿವರಾಮ್ ಹೆಬ್ಬಾರ್
Share This Article
Facebook Whatsapp Whatsapp Telegram

Cinema Updates

ranjani raghavan
ಗೆಳೆಯನ ಜೊತೆ ರಂಜನಿ ರಾಘವನ್ ಲಾಂಗ್ ಡ್ರೈವ್
7 minutes ago
hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
13 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
16 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
17 hours ago

You Might Also Like

Abdul Rahim Murder
Crime

ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ | ಮತ್ತಿಬ್ಬರು ಆರೋಪಿಗಳು ಅರೆಸ್ಟ್‌ – ಹತ್ಯೆಗೆ ಕಾರಣವೇ ಇನ್ನೂ ಸಸ್ಪೆನ್ಸ್!‌

Public TV
By Public TV
44 minutes ago
Punjab Firecracker Factory 2
Crime

ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಐವರು ಸಾವು, 25 ಮಂದಿಗೆ ಗಾಯ

Public TV
By Public TV
57 minutes ago
Bengaluru
Bengaluru City

ಸಲೂನ್‌ಗೆ ನುಗ್ಗಿ ಲೇಡಿ ರೌಡಿ ಗ್ಯಾಂಗ್‌ನಿಂದ ದಾಂಧಲೆ – ಮೂವರು ಅರೆಸ್ಟ್‌

Public TV
By Public TV
1 hour ago
Pakistan Spy 2
Crime

ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ ಪೂರೈಸುತ್ತಿದ್ದ ಪಾಕ್‌ ಸ್ಪೈ ಅರೆಸ್ಟ್‌

Public TV
By Public TV
2 hours ago
KRS Dam
Districts

ನಾಲ್ಕೇ ದಿನಕ್ಕೆ KRSನಲ್ಲಿ 11 ಅಡಿ ನೀರು ಹೆಚ್ಚಳ – ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ ಭರ್ತಿ!

Public TV
By Public TV
2 hours ago
HS Venkata murty
Bengaluru City

ಕನ್ನಡದ ಖ್ಯಾತ ಕವಿ ಹೆಚ್.ಎಸ್ ವೆಂಕಟೇಶಮೂರ್ತಿ ಇನ್ನಿಲ್ಲ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?