Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವರಾಮ ಕಾರಂತ್ ಬಡಾವಣೆಯ 300 ಕಟ್ಟಡಗಳು ಸಕ್ರಮ: ಸುಪ್ರೀಂ ಕೋರ್ಟ್‌ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಶಿವರಾಮ ಕಾರಂತ್ ಬಡಾವಣೆಯ 300 ಕಟ್ಟಡಗಳು ಸಕ್ರಮ: ಸುಪ್ರೀಂ ಕೋರ್ಟ್‌ ಆದೇಶ

Karnataka

ಶಿವರಾಮ ಕಾರಂತ್ ಬಡಾವಣೆಯ 300 ಕಟ್ಟಡಗಳು ಸಕ್ರಮ: ಸುಪ್ರೀಂ ಕೋರ್ಟ್‌ ಆದೇಶ

Public TV
Last updated: December 2, 2021 5:27 pm
Public TV
Share
2 Min Read
av chandrashekar
SHARE

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಾಣ ಮಾಡುತ್ತಿರುವ ಡಾ. ಶಿವರಾಮ ಕಾರಂತ್ ಬಡಾವಣೆಯ ವ್ಯಾಪ್ತಿಯಲ್ಲಿ 03-08-2018ರ ಮುಂಚಿತವಾಗಿ ಸಾರ್ವಜನಿಕರು ನಿರ್ಮಾಣ ಮಾಡಿರುವ 300 ಕಟ್ಟಡಗಳನ್ನು ಸಕ್ರಮಗೊಳಿಸಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ ಎಂದು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರು ತಿಳಿಸಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾರಂತ್ ಬಡಾವಣೆ ಕುರಿತು ಸುಪ್ರೀಂ ಕೋರ್ಟ್‌ ರಚಿಸಿರುವ ಸಮಿತಿ ಈವರೆಗೆ ಸುಮಾರು 6,200 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿದೆ. ಅದರಲ್ಲಿ ಮೊದಲ ಹಂತದಲ್ಲಿ 300 ಕಟ್ಟಡಗಳ ದಾಖಲೆಗಳನ್ನು ಇತ್ತೀಚಿಗೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿತ್ತು, ಅದನ್ನು ಮಾನ್ಯ ಮಾಡಿರುವ ನ್ಯಾಯಪೀಠ ನಾಲ್ಕು ವಾರದೊಳಗಾಗಿ ಸಂಬಂಧಿಸಿದವರಿಗೆ ಹಕ್ಕುಪತ್ರ ವಿತರಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕಕ್ಕೆ ಕಾಲಿಟ್ಟ ಡೆಡ್ಲಿ ವೈರಸ್‌- ಬೆಂಗಳೂರಿನ ಇಬ್ಬರಲ್ಲಿ ಓಮಿಕ್ರಾನ್‌ ಪತ್ತೆ!

av chandrashekar 1

ಸಕ್ರಮಗೊಳಿಸಿರುವ ಈ 300 ಕಟ್ಟಡಗಳ ಮಾಲೀಕರಿಗೆ ಹಕ್ಕುಪತ್ರ ವಿತರಿಸುವ ಕಾರ್ಯ ಕೂಡ ತಮ್ಮ (ಸುಪ್ರೀಂ ಕೋರ್ಟ್‌) ನೇತೃತ್ವದ ಸಮಿತಿಯ ಮಾರ್ಗದರ್ಶನದಲ್ಲಿ ನಡೆಸಬೇಕು ಎಂದು ಸೂಚಿಸಿದೆ. ಈಗಾಗಲೇ ಆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ಪ್ರತಿಯೊಬ್ಬರಿಗೂ ನೇರವಾಗಿ ಅವರು ನೋಂದಾಯಿಸಿಕೊಂಡಿರುವ ಮೊಬೈಲ್‍ಗಳಿಗೆ ಹಕ್ಕುಪತ್ರ ವಿತರಣೆ ಕುರಿತು ಸಂದೇಶ ರವಾನಿಸಲು ಕ್ರಮ ಕೈಕೊಳ್ಳಲಾಗುವುದು ಎಂದರು.

ನ್ಯಾಯಾಲಯದ ಆದೇಶದಂತೆ ಕಾರಂತ್ ಬಡಾವಣೆ ವ್ಯಾಪ್ತಿಯ ಗ್ರಾಮಗಳಲ್ಲಿ ಸಾರ್ವಜನಿಕರು ತಮ್ಮ ದಾಖಲೆಗಳನ್ನು ನೇರವಾಗಿ ಸಲ್ಲಿಸಲು ಸಹಾಯವಾಗುವಂತೆ ಸಹಾಯ ಕೇಂದ್ರಗಳನ್ನು ತೆರೆಯಲಾಗಿತ್ತು. ಈ ಕುರಿತು ಈವರೆಗೆ ಸಾರ್ವಜನಿಕ ಅರಿವು ಮೂಡಿಸುವ ಅನೇಕ ಕಾರ್ಯಕ್ರಮಗಳನ್ನು ಹಾಗೂ ಮಾಧ್ಯಮಗಳ ಮೂಲಕ ಜಾಹೀರಾತು ನೀಡಲಾಗಿದೆ. ಸಮಿತಿಯು ಸಾರ್ವಜನಿಕರು ಸಲ್ಲಿಸಿರುವ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ ವೈಜ್ಞಾನಿಕವಾಗಿ ಶೇಖರಿಸಿಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿನ ಮಾದಪ್ಪನ ಹಾಡನ್ನು ತೆಗೆದು ಹಾಕಿ: ಸಾಲೂರುಶ್ರೀ

bda

ಮೊದಲ ಹಂತದಲ್ಲಿ ಸಲ್ಲಿಸಿದ್ದ 300 ಕಟ್ಟಡಗಳನ್ನು ಸಕ್ರಮಗೊಳಿಸಿರುವ ನ್ಯಾಯಾಲಯಕ್ಕೆ ಪ್ರತಿ ತಿಂಗಳಿಗೊಮ್ಮೆ ಇಂತಿಷ್ಟು ಗುರಿಯೊಂದಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ ವೇಗವಾಗಿ ಅಲ್ಲಿನ ಜನರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಮತ್ತು ಸಕ್ರಮವಾಗಿ ಕಟ್ಟಡ ಕಟ್ಟಿರುವ ಸಾರ್ವಜನಿಕರ ಹಿತ ಕಾಯಲಾಗುವುದು. ಸುಪ್ರೀಂ ಕೋರ್ಟ್‌ ನೀಡಿರುವ ಈ ಆದೇಶ ಅತ್ಯಂತ ಮಹತ್ತರವಾದದ್ದಾಗಿದ್ದು, ಬಡವರು ಮತ್ತು ಮಧ್ಯಮ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸಿದೆ. ಕಾರಂತ್ ಬಡಾವಣೆ ಒಂದು ಅತ್ಯುತ್ತಮ ಬಡಾವಣೆಯಾಗಿ ರೂಪುಗೊಳ್ಳಲಿದ್ದು, ತಮ್ಮ ನೇತೃತ್ವದ ಸಮಿತಿ ಪ್ರತಿ ಹಂತದಲ್ಲೂ ನಿರ್ಣಾಯಕ ಪಾತ್ರವಹಿಸುತ್ತಿದೆ ಎಂದು ಹೇಳಿದರು.

supreme court 12

ಕಾರಂತ್ ಬಡಾವಣೆಯ ಸಾರ್ವಜನಿಕರು ತಮ್ಮ ವ್ಯಾಜ್ಯಗಳ ಕುರಿತಂತೆ ಸಮಿತಿಯನ್ನು ನೇರವಾಗಿ ಭೇಟಿಯಾಗಬಹುದಾಗಿದೆ. ಎರಡನೇ ಹಂತದಲ್ಲಿ ಮತ್ತಷ್ಟು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮೂಲಕ ಡಿಸೆಂಬರ್ ತಿಂಗಳೊಳಗೆ ಮತ್ತೊಂದು ಆದೇಶವನ್ನು ಪಡೆಯುವ ಗುರಿ ನಿರೀಕ್ಷಿಸಲಾಗಿದೆ. ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳನ್ನು ಮೂರು ವಿಧಗಳಲ್ಲಿ ವಿಭಜಿಸಲಾಗಿದೆ. ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ನಿರ್ಮಿಸಿರುವ ಕಟ್ಟಡಗಳು, ಸಕ್ಷಮವಲ್ಲದ ಸ್ಥಳೀಯ ಪ್ರಾಧಿಕಾರದಿಂದ (ಗ್ರಾಮ ಪಂಚಾಯಿತಿಗಳು) ಅನುಮತಿ ಪಡೆದು ನಿರ್ಮಿಸಿರುವ ಕಟ್ಟಡಗಳು ಹಾಗೂ ಯಾವುದೇ ಅನುಮತಿಯನ್ನು ಪಡೆಯದೇ ನಿರ್ಮಿಸಿರುವ ಕಟ್ಟಡಗಳೆಂದು ಗುರುತಿಸಲಾಗಿದೆ. ಪ್ರತಿ ದಾಖಲೆಗಳನ್ನೂ ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದ್ದು, ಎಲ್ಲರಿಗೂ ನ್ಯಾಯ ಒದಗಿಸುವುದು ನಮ್ಮ ಗುರಿಯಾಗಿದೆ. ಸಾರ್ವಜನಿಕರು ಸಮಿತಿಯ ಹೆಚ್ಚಿನ ಮಾಹಿತಿಗಾಗಿ https://jcc-skl.in/ ಗೆ ಭೇಟಿ ನೀಡಬಹುದಾಗಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ನಿವೃತ್ತ ಐಎಎಸ್ ಅಧಿಕಾರಿ ಜೈಕರ್ ಜೆರೋಮ್ ಅವರು ಉಪಸ್ಥಿತಿರಿದ್ದರು.

TAGGED:300 buildingsshivaram karanth layoutSupreme Courtಶಿವರಾಮ ಕಾರಂತ್‌ ಬಡಾವಣೆಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories

You Might Also Like

Shola Forest Wildfire chikkamagaluru
Chikkamagaluru

ಚಿಕ್ಕಮಗಳೂರು | ಹೊತ್ತಿ ಉರಿಯುತ್ತಿದೆ ಶೋಲಾರಣ್ಯ – 25ಕ್ಕೂ ಹೆಚ್ಚು ಕಡೆಗಳಲ್ಲಿ ಕಾಣಿಸಿಕೊಂಡ ಬೆಂಕಿ

Public TV
By Public TV
44 minutes ago
rcb
Bengaluru City

RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಉಚಿತ

Public TV
By Public TV
1 hour ago
Samartha Shamanur
Davanagere

ಟಿಕೆಟ್‌ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಮರ್ಥ್‌ ಶಾಮನೂರು

Public TV
By Public TV
2 hours ago
g.parameshwara 2
Bengaluru City

ತುಮಕೂರಿನಲ್ಲಿ ಲಾಕಪ್‌ ಡೆತ್‌ ಪ್ರಕರಣ ಸಿಐಡಿ ತನಿಖೆಗೆ: ಪರಮೇಶ್ವರ್‌

Public TV
By Public TV
2 hours ago
veterinarian dies after attacked by an hippopotamus at tiger and lion safari tyavarekoppa
Districts

ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ

Public TV
By Public TV
2 hours ago
ATM money withdrawal
Latest

10,000 ರೂ. ಹಣ ಡ್ರಾ ಮಾಡಲು ಹೋಗಿದ್ದ ವ್ಯಕ್ತಿಗೆ ಎಟಿಎಂ ದೋಷದಿಂದ ಸಿಕ್ತು 3 ಲಕ್ಷ ರೂ.!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?