Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವರಾಮ ಕಾರಂತ್ ಬಡಾವಣೆಯ 300 ಕಟ್ಟಡಗಳು ಸಕ್ರಮ: ಸುಪ್ರೀಂ ಕೋರ್ಟ್‌ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಶಿವರಾಮ ಕಾರಂತ್ ಬಡಾವಣೆಯ 300 ಕಟ್ಟಡಗಳು ಸಕ್ರಮ: ಸುಪ್ರೀಂ ಕೋರ್ಟ್‌ ಆದೇಶ

Karnataka

ಶಿವರಾಮ ಕಾರಂತ್ ಬಡಾವಣೆಯ 300 ಕಟ್ಟಡಗಳು ಸಕ್ರಮ: ಸುಪ್ರೀಂ ಕೋರ್ಟ್‌ ಆದೇಶ

Public TV
Last updated: December 2, 2021 5:27 pm
Public TV
Share
2 Min Read
av chandrashekar
SHARE

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಾಣ ಮಾಡುತ್ತಿರುವ ಡಾ. ಶಿವರಾಮ ಕಾರಂತ್ ಬಡಾವಣೆಯ ವ್ಯಾಪ್ತಿಯಲ್ಲಿ 03-08-2018ರ ಮುಂಚಿತವಾಗಿ ಸಾರ್ವಜನಿಕರು ನಿರ್ಮಾಣ ಮಾಡಿರುವ 300 ಕಟ್ಟಡಗಳನ್ನು ಸಕ್ರಮಗೊಳಿಸಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ ಎಂದು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರು ತಿಳಿಸಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾರಂತ್ ಬಡಾವಣೆ ಕುರಿತು ಸುಪ್ರೀಂ ಕೋರ್ಟ್‌ ರಚಿಸಿರುವ ಸಮಿತಿ ಈವರೆಗೆ ಸುಮಾರು 6,200 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕರಿಸಿದೆ. ಅದರಲ್ಲಿ ಮೊದಲ ಹಂತದಲ್ಲಿ 300 ಕಟ್ಟಡಗಳ ದಾಖಲೆಗಳನ್ನು ಇತ್ತೀಚಿಗೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿತ್ತು, ಅದನ್ನು ಮಾನ್ಯ ಮಾಡಿರುವ ನ್ಯಾಯಪೀಠ ನಾಲ್ಕು ವಾರದೊಳಗಾಗಿ ಸಂಬಂಧಿಸಿದವರಿಗೆ ಹಕ್ಕುಪತ್ರ ವಿತರಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕಕ್ಕೆ ಕಾಲಿಟ್ಟ ಡೆಡ್ಲಿ ವೈರಸ್‌- ಬೆಂಗಳೂರಿನ ಇಬ್ಬರಲ್ಲಿ ಓಮಿಕ್ರಾನ್‌ ಪತ್ತೆ!

av chandrashekar 1

ಸಕ್ರಮಗೊಳಿಸಿರುವ ಈ 300 ಕಟ್ಟಡಗಳ ಮಾಲೀಕರಿಗೆ ಹಕ್ಕುಪತ್ರ ವಿತರಿಸುವ ಕಾರ್ಯ ಕೂಡ ತಮ್ಮ (ಸುಪ್ರೀಂ ಕೋರ್ಟ್‌) ನೇತೃತ್ವದ ಸಮಿತಿಯ ಮಾರ್ಗದರ್ಶನದಲ್ಲಿ ನಡೆಸಬೇಕು ಎಂದು ಸೂಚಿಸಿದೆ. ಈಗಾಗಲೇ ಆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು, ಪ್ರತಿಯೊಬ್ಬರಿಗೂ ನೇರವಾಗಿ ಅವರು ನೋಂದಾಯಿಸಿಕೊಂಡಿರುವ ಮೊಬೈಲ್‍ಗಳಿಗೆ ಹಕ್ಕುಪತ್ರ ವಿತರಣೆ ಕುರಿತು ಸಂದೇಶ ರವಾನಿಸಲು ಕ್ರಮ ಕೈಕೊಳ್ಳಲಾಗುವುದು ಎಂದರು.

ನ್ಯಾಯಾಲಯದ ಆದೇಶದಂತೆ ಕಾರಂತ್ ಬಡಾವಣೆ ವ್ಯಾಪ್ತಿಯ ಗ್ರಾಮಗಳಲ್ಲಿ ಸಾರ್ವಜನಿಕರು ತಮ್ಮ ದಾಖಲೆಗಳನ್ನು ನೇರವಾಗಿ ಸಲ್ಲಿಸಲು ಸಹಾಯವಾಗುವಂತೆ ಸಹಾಯ ಕೇಂದ್ರಗಳನ್ನು ತೆರೆಯಲಾಗಿತ್ತು. ಈ ಕುರಿತು ಈವರೆಗೆ ಸಾರ್ವಜನಿಕ ಅರಿವು ಮೂಡಿಸುವ ಅನೇಕ ಕಾರ್ಯಕ್ರಮಗಳನ್ನು ಹಾಗೂ ಮಾಧ್ಯಮಗಳ ಮೂಲಕ ಜಾಹೀರಾತು ನೀಡಲಾಗಿದೆ. ಸಮಿತಿಯು ಸಾರ್ವಜನಿಕರು ಸಲ್ಲಿಸಿರುವ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ ವೈಜ್ಞಾನಿಕವಾಗಿ ಶೇಖರಿಸಿಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗರುಡ ಗಮನ ವೃಷಭ ವಾಹನ ಚಿತ್ರದಲ್ಲಿನ ಮಾದಪ್ಪನ ಹಾಡನ್ನು ತೆಗೆದು ಹಾಕಿ: ಸಾಲೂರುಶ್ರೀ

bda

ಮೊದಲ ಹಂತದಲ್ಲಿ ಸಲ್ಲಿಸಿದ್ದ 300 ಕಟ್ಟಡಗಳನ್ನು ಸಕ್ರಮಗೊಳಿಸಿರುವ ನ್ಯಾಯಾಲಯಕ್ಕೆ ಪ್ರತಿ ತಿಂಗಳಿಗೊಮ್ಮೆ ಇಂತಿಷ್ಟು ಗುರಿಯೊಂದಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ ವೇಗವಾಗಿ ಅಲ್ಲಿನ ಜನರ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಮತ್ತು ಸಕ್ರಮವಾಗಿ ಕಟ್ಟಡ ಕಟ್ಟಿರುವ ಸಾರ್ವಜನಿಕರ ಹಿತ ಕಾಯಲಾಗುವುದು. ಸುಪ್ರೀಂ ಕೋರ್ಟ್‌ ನೀಡಿರುವ ಈ ಆದೇಶ ಅತ್ಯಂತ ಮಹತ್ತರವಾದದ್ದಾಗಿದ್ದು, ಬಡವರು ಮತ್ತು ಮಧ್ಯಮ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸಿದೆ. ಕಾರಂತ್ ಬಡಾವಣೆ ಒಂದು ಅತ್ಯುತ್ತಮ ಬಡಾವಣೆಯಾಗಿ ರೂಪುಗೊಳ್ಳಲಿದ್ದು, ತಮ್ಮ ನೇತೃತ್ವದ ಸಮಿತಿ ಪ್ರತಿ ಹಂತದಲ್ಲೂ ನಿರ್ಣಾಯಕ ಪಾತ್ರವಹಿಸುತ್ತಿದೆ ಎಂದು ಹೇಳಿದರು.

supreme court 12

ಕಾರಂತ್ ಬಡಾವಣೆಯ ಸಾರ್ವಜನಿಕರು ತಮ್ಮ ವ್ಯಾಜ್ಯಗಳ ಕುರಿತಂತೆ ಸಮಿತಿಯನ್ನು ನೇರವಾಗಿ ಭೇಟಿಯಾಗಬಹುದಾಗಿದೆ. ಎರಡನೇ ಹಂತದಲ್ಲಿ ಮತ್ತಷ್ಟು ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮೂಲಕ ಡಿಸೆಂಬರ್ ತಿಂಗಳೊಳಗೆ ಮತ್ತೊಂದು ಆದೇಶವನ್ನು ಪಡೆಯುವ ಗುರಿ ನಿರೀಕ್ಷಿಸಲಾಗಿದೆ. ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳನ್ನು ಮೂರು ವಿಧಗಳಲ್ಲಿ ವಿಭಜಿಸಲಾಗಿದೆ. ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದು ನಿರ್ಮಿಸಿರುವ ಕಟ್ಟಡಗಳು, ಸಕ್ಷಮವಲ್ಲದ ಸ್ಥಳೀಯ ಪ್ರಾಧಿಕಾರದಿಂದ (ಗ್ರಾಮ ಪಂಚಾಯಿತಿಗಳು) ಅನುಮತಿ ಪಡೆದು ನಿರ್ಮಿಸಿರುವ ಕಟ್ಟಡಗಳು ಹಾಗೂ ಯಾವುದೇ ಅನುಮತಿಯನ್ನು ಪಡೆಯದೇ ನಿರ್ಮಿಸಿರುವ ಕಟ್ಟಡಗಳೆಂದು ಗುರುತಿಸಲಾಗಿದೆ. ಪ್ರತಿ ದಾಖಲೆಗಳನ್ನೂ ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದ್ದು, ಎಲ್ಲರಿಗೂ ನ್ಯಾಯ ಒದಗಿಸುವುದು ನಮ್ಮ ಗುರಿಯಾಗಿದೆ. ಸಾರ್ವಜನಿಕರು ಸಮಿತಿಯ ಹೆಚ್ಚಿನ ಮಾಹಿತಿಗಾಗಿ https://jcc-skl.in/ ಗೆ ಭೇಟಿ ನೀಡಬಹುದಾಗಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸದಸ್ಯರಾದ ನಿವೃತ್ತ ಐಎಎಸ್ ಅಧಿಕಾರಿ ಜೈಕರ್ ಜೆರೋಮ್ ಅವರು ಉಪಸ್ಥಿತಿರಿದ್ದರು.

TAGGED:300 buildingsshivaram karanth layoutSupreme Courtಶಿವರಾಮ ಕಾರಂತ್‌ ಬಡಾವಣೆಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Century Gowda
ತಿಥಿ ಸಿನಿಮಾ ಖ್ಯಾತಿಯ ಸೆಂಚುರಿ ಗೌಡ ನಿಧನ
Cinema Latest Mandya Sandalwood Top Stories
Spandana Somanna
BBK 12 | ಬಿಗ್‌ ಬಾಸ್‌ ಮನೆಯಿಂದ ಸ್ಪಂದನಾ ಔಟ್‌
Cinema Latest Main Post TV Shows
Love Mocktail 3 Darling Krishna
ಜಾಹೀರಾಯ್ತು ಲವ್ ಮಾಕ್ಟೇಲ್ 3 ಬಿಡುಗಡೆ ದಿನಾಂಕ!
Cinema Latest Sandalwood Top Stories
yash mother pushpa compound demolition
ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ: ಯಶ್‌ ತಾಯಿ ರಿಯಾಕ್ಷನ್‌
Cinema Hassan Latest Sandalwood Top Stories

You Might Also Like

Madhusri
Crime

ಸುಳ್ಯ | ರಾತ್ರಿ ಮನೆಯಲ್ಲಿ ಮಲಗಿದ್ದ ತಾಯಿ ಮಗು ಕೆರೆಯಲ್ಲಿ ಶವವಾಗಿ ಪತ್ತೆ

Public TV
By Public TV
4 minutes ago
Krishna Byre Gowda
Bengaluru City

Kogilu Demolition| ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ: ಕೃಷ್ಣಬೈರೇಗೌಡ

Public TV
By Public TV
15 minutes ago
g.parameshwara 2
Bengaluru City

ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು ಜನ ಚಿಕ್ಕ ಹುಡುಗರಿಂದ ಕಲ್ಲೆಸೆತ: ಪರಮೇಶ್ವರ್‌

Public TV
By Public TV
17 minutes ago
Prahlad Joshi 1
Latest

ರಾಜ್ಯದ ಕಾರ್ಮಿಕರ ದಾರಿತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ : ಜೋಶಿ

Public TV
By Public TV
51 minutes ago
DK Shivakumar 11
Bengaluru City

ಬೆಂಗಳೂರಿನ 500 ಕಿ.ಮೀ ರಸ್ತೆಗಳಿಗೆ ವೈಟ್ ಟಾಪಿಂಗ್ ಭಾಗ್ಯ

Public TV
By Public TV
2 hours ago
Donald Trump 2
Latest

ರಷ್ಯಾದಿಂದ ಕಚ್ಚಾ ತೈಲ ಖರೀದಿ ನಿಲ್ಲಿಸದಿದ್ದರೆ ಸುಂಕ ಏರಿಕೆ: ಭಾರತಕ್ಕೆ ಟ್ರಂಪ್‌ ಮತ್ತೆ ಧಮ್ಕಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?