ಗೌರಿಬಿದನೂರು ಕ್ಷೇತ್ರಕ್ಕೆ ಕೈ ಹಾಕಿದ್ರೆ ಕೈ ಕತ್ತರಿಸ್ತೇನೆ- ಶಿವಶಂಕರ ರೆಡ್ಡಿ

Public TV
1 Min Read
reddy

ಚಿಕ್ಕಬಳ್ಳಾಪುರ: ಗೌರಿಬಿದನೂರು ವಿಧಾನಸಭಾ ಕ್ಷೇತ್ರಕ್ಕೆ ಕೈ ಹಾಕಿದರೆ ಕೈ ಕತ್ತರಿಸುತ್ತೇನೆ ಎಂದು ಅನರ್ಹ ಶಾಸಕ ಸುಧಾಕರ್ ಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಎಚ್ ಶಿವಶಂಕರ ರೆಡ್ಡಿ ವಾರ್ನಿಂಗ್ ನೀಡಿದ್ದಾರೆ.

ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಗಂಗಸಂದ್ರ ಗ್ರಾಮದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಶಿವಶಂಕರ ರೆಡ್ಡಿ, ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ತಂಟೆಗೆ ಬಂದರೆ ಕೈ ಕತ್ತರಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

CKB SUDHAKAR

ಚಿಕ್ಕಬಳ್ಳಾಪುರದ ಸುಧಾಕರ್ ಅವರು ಮಂಚೇನಹಳ್ಳಿ ತಾಲೂಕು ಮಾಡುವುದಾಗಿ ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ತೊಂಡೆಬಾವಿ ಹೋಬಳಿಯನ್ನ ಮಂಚೇನಹಳ್ಳಿಗೆ ಸೇರಿಸೋಕೆ ಪ್ರಯತ್ನ ಮಾಡಿದ್ದಾರೆ. ಅದಲ್ಲದೆ ಕೆಲ ಗ್ರಾಮಗಳನ್ನ ನಮ್ಮವರೇ ಕುಮ್ಮಕ್ಕು ನೀಡಿ ಮಂಚೇನಹಳ್ಳಿಗೆ ಸೇರಿಸೋಕೆ ಸುಧಾಕರ್ ಜೊತೆ ಕೈ ಜೋಡಿಸಿದ್ದಾರೆ. ಆದರೆ ಇದನ್ನು ನಾನು ಸಹಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.

N. H. Shivashankara Reddy A e1571547285547

Share This Article
Leave a Comment

Leave a Reply

Your email address will not be published. Required fields are marked *