Crime
ಅಪರಿಚಿತ ವ್ಯಕ್ತಿಗಳಿಂದ ಯುವಕರ ಮೇಲೆ ಚಾಕು ಇರಿತ

ಶಿವಮೊಗ್ಗ: ಯುವಕರಿಬ್ಬರಿಗೆ ಅಪರಿಚಿತ ವ್ಯಕ್ತಿಗಳು ಚಾಕು ಇರಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ನಗರದ ಸೀಗೆಹಳ್ಳಿ ಬಳಿ ರಾತ್ರಿ ಬಾರ್ ಮುಂದೆ ನಿಂತಿದ್ದ ಯುವಕರ ಮೇಲೆ ನಾಲ್ವರು ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿ ಚಾಕುವಿನಿಂದ ಇರಿದ್ದಾರೆ. ದಾಳಿಗೊಳಗಾದ ಯುವಕರನ್ನು ಜೀವನ್(28) ಮತ್ತು ಕೇಶವ (28) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಜೀವನ್ ಮೃತಪಟ್ಟಿದ್ದು, ಕೇಶವ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಕೇಶವ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆ ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
