Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಮತಾಂತರ ಕಾಯ್ದೆ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ: ಶೋಭಾ ಕರಂದ್ಲಾಜೆ

Public TV
Last updated: December 12, 2021 12:42 pm
Public TV
Share
2 Min Read
Shobha Karandlaje
SHARE

ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ಮತಾಂತರ ಕಾಯ್ದೆ ವಿಚಾರವಾಗಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕೇಂದ್ರ ಕೃಷಿ ಇಲಾಖೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

Bommai

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಮತಾಂತರ ಕಾಯ್ದೆ ವಿಚಾರವಾಗಿ ಸರ್ಕಾರ ಒಂದು ನಿರ್ಧಾರ ತೆಗೆದುಕೊಳ್ಳುತ್ತದೆ. ಮಂಗಳೂರು ಆತ್ಮಹತ್ಯೆ, ಲವ್ ಜಿಹಾದಿ ಪ್ರಕರಣಗಳ ನಂತರ, ದೇಶದಲ್ಲಿ ಮತಾಂತರ ಕಾಯ್ದೆ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ. ದೊಡ್ಡ ಪ್ರಮಾಣದಲ್ಲಿ ಎಲ್ಲ ಜಾತಿ ವರ್ಗದ ಜನರನ್ನು ಅವರ ಬಡತನ, ಅನಾರೋಗ್ಯ ಸಂದರ್ಭ ಮುಂದಿಟ್ಟುಕೊಂಡು ಮತಾಂತರಗೊಳಿಸುವುದು ನಡೆಯುತ್ತಿದೆ. ಇದರ ಬಗ್ಗೆ ಸರ್ಕಾರ ಗಂಭೀರವಾಗಿ ಯೋಚನೆ ಮಾಡಬೇಕು ಎಂದರು. ಇದನ್ನೂ ಓದಿ: ಬಡತನಕ್ಕೆ, ಆಸೆ ಆಮಿಷಕ್ಕೆ ಮತಾಂತರ ಆಗೋದು ತಪ್ಪು : ಬೊಮ್ಮಾಯಿ

suvarna soudha 2

ಸಾಮಾಜಿಕ ಅಸಮತೋಲನೆ ನಿರ್ಮಾಣ ಆಗಬಾರದು. ನಮ್ಮ ಬಡತನ ನಮ್ಮ ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಳ್ಳಲು ಯಾರಿಗೂ ಅವಕಾಶ ಕೊಡಬಾರದು. ನಾವು ಕೂಡ ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಬೇಕು. ಯಾವ ಕಾರಣಕ್ಕೆ ಧರ್ಮವನ್ನು ಬಿಟ್ಟು ಹೋಗೋದಕ್ಕೆ ಸಾಧ್ಯವಾಗಿದೆ. ಇದಕ್ಕೆ ಜಾತಿ ಕಾರಣವೋ, ಆರೋಗ್ಯ ಕಾರಣವೋ, ಆರ್ಥಿಕ ಪರಿಸ್ಥಿತ ಕಾರಣವೋ, ಸಾಮಾಜಿಕ ಅಡತಡೆಗಳು ಕಾರಣವೋ ಎನ್ನುವುದನ್ನು ಪ್ರಾಮಾಣಿಕವಾಗಿ ಅಧ್ಯಯನ ಮಾಡಬೇಕು. ಸೂಕ್ತವಾದ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.

suvarna soudha 1

ಮತಾಂತರ ಕಾಯ್ದೆಗೆ ಕಾಂಗ್ರೆಸ್ ವಿರೋಧಿಸುತ್ತಿರುವ ವಿಚಾರ ಕುರಿತಂತೆ ಮಾತನಾಡಿದ ಅವರು, ನಾನು ಕೇಂದ್ರ ಸಚಿವೆಯಾಗಿ ಈ ಬಗ್ಗೆ ಹೆಚ್ಚು ಮಾತಾಡಲ್ಲ. ಆದರೆ, ನಾನೇ ಕಂಡಂತೆ, ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಬಾಂಗ್ಲಾ ದೇಶದಿಂದ ಬರುವ ಮಕ್ಕಳನ್ನು ಇಲ್ಲಿಗೆ ತಂದು ರಕ್ಷಣೆ ಮಾಡಲಾಗುತ್ತದೆ. ಅವರಿಗೆ ವೋಟರ್ ಐಡಿ ಕೊಟ್ಟು ಮುಂದೆ ಅವರನ್ನು ಮತದಾರರನ್ನಾ ಮಾಡುತ್ತಿದ್ದಾರೆ. ಈ ಬಗ್ಗೆ ತನಿಖೆ ಮಾಡಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈ ಮಾನಸಿಕತೆ ಇರುವುದು ಕಾಂಗ್ರೆಸ್‍ನಲ್ಲಿ ಮಾತ್ರ. ಜಾತಿ ಹಾಗೂ ಧರ್ಮದ ಆಧಾರದಲ್ಲಿ ಪರ್ಮನೆಂಟ್ ಆಗಿ ಅಧಿಕಾರದಲ್ಲಿ ಇರಬಹುದು ಎನ್ನುವುದು ಕಾಂಗ್ರೆಸ್ ಮಾನಸಿಕತೆ. ಈ ಬಗ್ಗೆ ಡಿಕೆ ಶಿವಕುಮಾರ್ ಚರ್ಚೆ ಮಾಡದೇ ಇರುವುದು ಒಳ್ಳೆಯದು. ಅವರ ಪಕ್ಷ ನಿಂತಿದ್ದೆ ಇದೇ ಆಧಾರದಲ್ಲಿ. ಜಾತಿ, ಧರ್ಮ, ಒಂದು ವರ್ಗ ಓಲೈಸಿ ಅಧಿಕಾರ ಪಡೆಯುವುದು ಅಲ್ಲ ಎಂದು ಮೋದಿ ಅವರು ಎರಡು ಚುನಾವಣೆಯಲ್ಲಿ ತೋರಿಸಿಕೊಟ್ಟಿದ್ದಾರೆ. ಇದನ್ನೂ ಓದಿ: ಎಷ್ಟೋ ಜನ ಮುಸ್ಲಿಮರು ಲಿಂಗಾಯತರಾದ್ರು, ನಾವೇನಾದ್ರೂ ಮಾತಾಡಿದ್ವಾ: ಸಿ.ಎಂ ಇಬ್ರಾಹಿಂ

DKSHI 3

ರಾವತ್ ಸಾವಿಗೆ ವಿಕೃತ ಮನಸ್ಸುಗಳ ಸಂಭ್ರಮಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ದೇಶದ ಸಿಡಿಎಸ್ ರಾವತ್ ಅವರು ನಿಧನರಾದ ಸಂದರ್ಭದಲ್ಲಿ ಕೆಲವು ವಿಕೃತ ಮನಸ್ಸುಗಳು ಸಂಭ್ರಮಿಸಿದ್ದಾರೆ. ಅವರು ವಿಕೃತ ಮನಸ್ಸುಗಳಲ್ಲ, ದೇಶದ್ರೋಹಿಗಳು. ಈ ಬಗ್ಗೆ ಕೇಂದ್ರ ಸರ್ಕಾರದ ಗೃಹ ಇಲಾಖೆ ಮತ್ತು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಇಂಥವರಿಗೆ ಕಠಿಣವಾದ ಶಿಕ್ಷೆಯನ್ನು ಕೊಡಬೇಕು ಅನ್ನುವುದು ನಮ್ಮೆಲ್ಲರ ಆಗ್ರಹ ಹಾಗೂ ದೇಶದ ಜನರ ಆಗ್ರಹವಾಗಿದೆ. ಇದರಲ್ಲೇನು ರಾಜಕೀಯವಿಲ್ಲ. ಕೆಲವರು ದೇಶಕ್ಕಾಗಿ ವಿರೋಧ ಮಾಡುವವರು ವಿರೋಧಿಗಳಾಗಿಯೇ ಇರುತ್ತಾರೆ. ಅಂತವರಿಗೆ ಪಕ್ಷ ಇಲ್ಲ, ಪಂಗಡ ಇಲ್ಲ, ಜಾತಿ ಇಲ್ಲ, ಪಂಥ ಇಲ್ಲ. ಅಂಥವರ ಮೇಲೆ ಉಗ್ರ ಕ್ರಮಕೈಗೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬದ್ಧವಾಗಿದೆ ಎಂದು ಹೇಳಿದರು.

TAGGED:belagavibelagavi sessionConversion Billgovernmentshobha karandlajeಬೆಳಗಾವಿಬೆಳಗಾವಿ ಅಧಿವೇಶನಮತಾಂತರ ನಿಷೇಧ ಮಸೂದೆಶೋಭಾ ಕರಂದ್ಲಾಜೆಸರ್ಕಾರ
Share This Article
Facebook Whatsapp Whatsapp Telegram

Cinema Updates

Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
2 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
4 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
5 hours ago
akhil akkineni
ಜೂನ್‌ನಲ್ಲಿ ಝೈನಾಬ್ ಜೊತೆ ಅಖಿಲ್ ಅಕ್ಕಿನೇನಿ ಮದುವೆ?
6 hours ago

You Might Also Like

Thawar Chand Gehlot
Bengaluru City

ಮುಸ್ಲಿಮರಿಗೆ 4%ರಷ್ಟು ಗುತ್ತಿಗೆ ಮೀಸಲಿಗೆ ಒಪ್ಪದ ಗವರ್ನರ್ – ರಾಷ್ಟ್ರಪತಿಗಳ ಅಂಗಳಕ್ಕೆ ರವಾನೆ?

Public TV
By Public TV
1 hour ago
Madhabi Puri Buch
Latest

ಸೆಬಿ ಮಾಜಿ ಮುಖ್ಯಸ್ಥೆ ಮಾಧವಿ ಪುರಿ ಬುಚ್‌ಗೆ ಲೋಕಪಾಲ್ ಕ್ಲೀನ್ ಚಿಟ್

Public TV
By Public TV
2 hours ago
Shashi Tharoor 1
Latest

ಶಶಿ ತರೂರ್ ಬಿಜೆಪಿಯ ಸೂಪರ್ ವಕ್ತಾರ ಆಗಿದ್ದಾರೆ: ಕಾಂಗ್ರೆಸ್ ಕಿಡಿ

Public TV
By Public TV
2 hours ago
Rishabh Pant 4
Cricket

RCB ವಿರುದ್ಧದ ಪಂದ್ಯದಲ್ಲಿ ನಾನಾ ಅವತಾರ – ಪಂತ್‌ ಸೇರಿ ಎಲ್‌ಎಸ್‌ಜಿಗೆ ಬಿತ್ತು ಭಾರಿ ದಂಡ

Public TV
By Public TV
2 hours ago
Kodagu Student Suicide copy
Crime

Kodagu | ಕಾಲೇಜು ಹಾಸ್ಟೆಲ್‌ನಲ್ಲಿ ರಾಯಚೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

Public TV
By Public TV
3 hours ago
Uttar Pradesh Operation Langda
Latest

ಯುಪಿಯಲ್ಲಿ ರೇಪಿಸ್ಟ್, ಕೊಲೆಗಾರರ ವಿರುದ್ಧ ‘ಆಪರೇಷನ್ ಲಂಗ್ಡಾ’ – 11 ಕ್ರಿಮಿನಲ್ಸ್ ಕಾಲಿಗೆ ಗುಂಡೇಟು

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?