Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮೂರು ದಶಕಗಳಿಂದ ಸುಮಲತಾ ಮಂಡ್ಯದ ಮಗಳು – ರೇವಣ್ಣ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

Public TV
Last updated: March 8, 2019 7:32 pm
Public TV
Share
3 Min Read
Shobha karandlaje HD REVANNA
SHARE

ಉಡುಪಿ: ಲೋಕೋಪಯೋಗಿ ಸಚಿವ ರೇವಣ್ಣ, ಸುಮಲತಾ ಅಂಬರೀಶ್ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದು ಅಕ್ಷಮ್ಯ. ಅವರು ಕೂಡಲೇ ಅವರು ಕ್ಷಮೆ ಕೇಳಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಮಲತಾ ಮೂರು ದಶಕದಿಂದ ಮಂಡ್ಯದ ಮಗಳು. ಅವರಿಗೆ ಈಗ ಅಂಬರೀಶ್ ಅವರಂತೆ ಜನಸೇವೆ ಮಾಡುವ ಮನಸ್ಸಾಗಿದೆ. ಸಚಿವ ರೇವಣ್ಣ ಜವಾಬ್ದಾರಿಯುತ ರಾಜಕಾರಣಿಯಾಗಿ ಈ ರೀತಿ ಹಗುರವಾಗಿ ಮಾತನಾಡಿರುವುದು ಅಕ್ಷಮ್ಯ. ಅಂಬರೀಶ್ ಸಾಯಲು ಸುಮಲತಾ ಕಾರಣವಲ್ಲ. ಈ ಹಿಂದೆ ಅಂಬರೀಶ್ ಅವರು ಕಾವೇರಿ ವಿಚಾರಕ್ಕೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದರು. ಅಂತಹ ವ್ಯಕ್ತಿಯ ಪತ್ನಿ ಬಗ್ಗೆ ಕೀಳಾಗಿ ಮಾತನಾಡಿದ್ದು ಸರಿಯಲ್ಲ ಎಂದರು.

sumalatha ambareesh SHOBHA

ಗಂಡ ಸತ್ತವರು ರಾಜಕೀಯಕ್ಕೆ ಬರಲು ಇಷ್ಟೇ ದಿನ ಆಗಬೇಕಾಗಿಲ್ಲ. ಅವರು ರಾಜಕಾರಣಿಯಾಗಿ ಜನಸೇವೆ ಮಾಡುತ್ತಾ ತಮ್ಮ ದುಃಖ ಮರೆಯುವ ಪ್ರಯತ್ನದಲ್ಲಿದ್ದಾರೆ. ಸಮಾಜಸೇವೆಗೆ ಬರುವ ಹೆಣ್ಣು ಮಕ್ಕಳ ಬಗ್ಗೆ ಹೀಗೆಲ್ಲಾ ಮಾತನಾಡಿದ್ದು ಸರಿಯಲ್ಲ. ಅದ್ದರಿಂದ ರೇವಣ್ಣ ಅವರು ಕೂಡಲೇ ಕ್ಷಮೆ ಯಾಚಿಸಲಿ. ಗಂಡ ಕಳೆದುಕೊಂಡ ನೋವಲ್ಲಿರುವವರಿಗೆ ಮತ್ತೆ ನೋವು ಕೊಡಬೇಡಿ. ಅದು ಕೂಡ ಮಹಿಳಾ ದಿನಾಚರಣೆ ದಿನ ರೇವಣ್ಣ ಅವರು ಹೀಗೆ ಮಾತನಾಡಬಾರದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುಮಲತಾ ಸ್ಪರ್ಧೆ ಮಾಡುವ ಬಗ್ಗೆ ಪಕ್ಷದ ನಾಯಕರು ಸ್ಪಷ್ಟಪಡಿಸಿದ್ದು, ಅವರು ಪಕ್ಷೇತರವಾಗಿ ನಿಂತರೆ ಬಿಜೆಪಿ ಬೆಂಬಲ ನೀಡುತ್ತದೆ. ಆದರೆ ಈಗ ಸುಮಲತಾ ಅವರು ಕಾಂಗ್ರೆಸ್ ಮನೆಯ ರಾಜಕಾರಣಿ. ಅವರು ಬಿಜೆಪಿಗೆ ಬಂದರೆ ಸ್ವಾಗತ ಮಾಡುತ್ತೇವೆ ಎಂದರು.

revanna family politics

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ ಕಾಂಗ್ರೆಸ್ ಸೋಲುವ ಭೀತಿಯಲ್ಲಿದೆ. ಹೀಗಾಗಿ ಕೀಳು ರಾಜಕಾರಣಕ್ಕೆ ಕಾಂಗ್ರೆಸ್ ಇಳಿದಿದೆ. ದೇಶದ ಸೈನಿಕರಿಗೆ ಅವರನ್ನು ಅವಮಾನ ಮಾಡುತ್ತಿದ್ದಾರೆ. ಅಧಿಕಾರಕ್ಕೆ ಬರಲ್ಲ ಎಂದು ಗೊತ್ತಿದ್ದು ನಾಯಕರು ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ದೇಶದ ವಿರುದ್ಧವಾಗಿ ಮಾತನಾಡಿದವರಿಗೆ ಕಾಂಗ್ರೆಸ್ ಪಕ್ಷ ಇದುವರೆಗೂ ಶಿಕ್ಷೆ ಕೊಟ್ಟಿಲ್ಲ. ಇಷ್ಟೆಲ್ಲಾ ಮಾತನಾಡುವ ನೀವು ಪುಲ್ವಾಮಾ ಘಟನೆ ಬಗ್ಗೆ ನಿಮ್ಮ ನಿಲುವನ್ನು ಸ್ಪಷ್ಟಪಡಿಸಿ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ವಿರುದ್ಧ ಕಿಡಿಕಾರಿದರು.

ಮುಸಲ್ಮಾನರು ಒಪ್ಪಿದ್ರೆ ಎಲ್ಲ ಸಮಸ್ಯೆ ಬಗೆ ಹರಿಯುತ್ತೆ: ಮುಸಲ್ಮಾನರು ರಾಮ ಮಂದಿರ ನಿರ್ಮಾಣಕ್ಕೆ ಒಪ್ಪಿಗೆ ನೀಡಲಿ. ಆಗ ಎಲ್ಲಾ ಸಮಸ್ಯೆ ಬಗೆ ಹರಿದು, ಹಿಂದುಗಳ ಕನಸು ನನಸಾಗುತ್ತದೆ. ರಾಮಮಂದಿರ ವಿವಾದ ಸುಪ್ರೀಂ ಆದೇಶದಂತೆ ಸಂಧಾನದಲ್ಲೇ ಬಗೆಹರಿಯಲಿ. ಅಯೋಧ್ಯೆಯ ರಾಮಮಂದಿರ ವಿಚಾರವನ್ನು ನಾವು ಚುನಾವಣೆಗೆ ಬಳಸಲ್ಲ. ಅಯೋಧ್ಯೆ ಭಕ್ತಿಯ ಶ್ರದ್ಧಾಕೇಂದ್ರ. ಈ ಬಗ್ಗೆ ನ್ಯಾಯಾಲಯ ನೀಡಿದ ಆದೇಶಕ್ಕೆ ತಲೆಬಾಗುತ್ತೇವೆ. ಎಂಟು ವಾರದ ಗಡುವಿನಲ್ಲಿ ಏನಾಗುತ್ತೋ ಗೊತ್ತಿಲ್ಲ. ಮಾತುಕತೆ ಪ್ರಯತ್ನದಿಂದ ಸಮಸ್ಯೆ ಬಗೆಹರಿದರೆ ಸಂತಸ ಎಂದರು.

MYS SUMALATHA

2014 ರಲ್ಲಿ ಮೋದಿ ಅವರು ಜನತೆಯ ಮುಂದಿಟ್ಟ ನಾಲ್ಕು ಭರವಸೆ ಈಡೇರಿದೆ. ಇನ್ನೆರಡು ದಿನಗಳಲ್ಲಿ ಚುನಾವಣೆ ಘೋಷಣೆ ಆಗಲಿದೆ. 2014 ರಲ್ಲಿ ನೀಡಿರುವ ಭರವಸೆಯಂತೆ ಭ್ರಷ್ಟಾಚಾರ ರಹಿತ, ಅಭಿವೃದ್ಧಿ, ಸ್ವಚ್ಛತೆ, ವಿದೇಶಾಂಗ ನೀತಿ, ಕೃಷಿ ಸಹಿತ ರಕ್ಷಣೆ ಒತ್ತು ಕೊಟ್ಟಿದ್ದೇವೆ. ದೇಶದ ಸೈನಿಕರು ಮೋದಿ ಸರ್ಕಾರದ ಆಡಳಿತ ಮೆಚ್ಚಿದ್ದಾರೆ. ಒನ್ ರಾಂಕ್ ಒನ್ ಪೆನ್ಶನ್ ನಂತರ ಸೈನಿಕರು ಖುಷಿಯಲ್ಲಿದ್ದಾರೆ ಎಂದರು.

ರಾಜ್ಯ ಸರ್ಕಾರ ಕೇಂದ್ರದ ಅನುದಾನ ಬಿಡುಗಡೆಯೇ ಮಾಡಿಲ್ಲ. ಟೆಂಡರ್ ಕರೆಯದೆ ಕೋಟಿ ಕೋಟಿ ರೂ. ಹಣ ನೆನೆಗುದಿಗೆ ಬಿದ್ದಿದೆ. ರಾಜ್ಯದಲ್ಲಿ ಅತೀ ಹೆಚ್ಚು ಅನುದಾನ ಉಡುಪಿ-ಚಿಕ್ಕಮಗಳೂರಿಗೆ ಬಂದಿದೆ. ರಸ್ತೆ, ಪಾಸ್ ಪೋರ್ಟ್, ಸಖಿ ಸೆಂಟರ್ ಸ್ಥಾಪನೆಯಾಗಿದೆ ತಮ್ಮ ಐದು ವರ್ಷದ ರಿಪೋಟ್ ಕಾರ್ಡನ್ನು ತೆರೆದಿಟ್ಟರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Lok Sabha electionmandyaMinister RevannaMP Shobha KarandlajePublic TVSumalatha Ambareeshudupiಉಡುಪಿಪಬ್ಲಿಕ್ ಟಿವಿಮಂಡ್ಯಲೋಕಸಭಾ ಚುನಾವಣೆಸಚಿವ ರೇವಣ್ಣಸಂಸದೆ ಶೋಭಾ ಕರಂದ್ಲಾಜೆಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

You Might Also Like

Dhruva Sarja 2
Cinema

ಮೂರು ಮೆಗಾ ಪ್ರಾಜೆಕ್ಟ್ ಒಪ್ಪಿದ ಧ್ರುವ ಸರ್ಜಾ

Public TV
By Public TV
4 minutes ago
DARSHAN 1 1
Cinema

ವಿದೇಶಕ್ಕೆ ಹಾರಲು ರೆಡಿಯಾದ ದರ್ಶನ್

Public TV
By Public TV
5 minutes ago
Swetcha Votarkar
Latest

ತೆಲುಗು ಸುದ್ದಿ ನಿರೂಪಕಿ ಸ್ವೆಚ್ಚಾ ವೋಟಾರ್ಕರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Public TV
By Public TV
11 minutes ago
shefali jariwala 8
Bollywood

ಶೆಫಾಲಿ ಸಾವಿನ ಬೆನ್ನಲ್ಲೇ ಪುನೀತ್ ಸಾವಿನ ಬಗ್ಗೆ ಚರ್ಚೆ

Public TV
By Public TV
18 minutes ago
Miracle in Gujarat Toddler comes under SUV escapes without a scratch
Crime

ಗುಜರಾತ್‍ನಲ್ಲಿ ಮಿರ‍್ಯಾಕಲ್ | ಮನೆ ಮುಂದೆ ಆಟ ಆಡ್ತಿದ್ದ ಮಗುವಿಗೆ ಕಾರು ಡಿಕ್ಕಿ – ಗ್ರೇಟ್ ಎಸ್ಕೇಪ್; ವಿಡಿಯೋ ವೈರಲ್‌

Public TV
By Public TV
22 minutes ago
Su From So 2
Cinema

ರಾಜ್ ಬಿ ಶೆಟ್ಟಿ ಹೊಸ ಸಾಹಸ – ಸು ಫ್ರಮ್ ಸೋ ಸಾಂಗ್ ರಿಲೀಸ್

Public TV
By Public TV
57 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?