ಬೆಂಗಳೂರು: ಕಾಲೇಜಿಗೆ ದ್ವಿಚಕ್ರ ವಾಹನ ಹಾಗೂ ಕಾರಿನಲ್ಲಿ ಹೋಗುವವರಿಗೆ ಶಿಕ್ಷಣ ಇಲಾಖೆ ಶಾಕಿಂಗ್ ನ್ಯೂಸ್ ಪ್ರಕಟವಾಗುವ ಸಾಧ್ಯತೆಯಿದೆ.
ಉನ್ನತ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ದ್ವಿಚಕ್ರ ವಾಹನ ಹಾಗೂ ಕಾರುಗಳನ್ನು ನಿರ್ಬಂಧಿಸಲು ಚಿಂತನೆ ನಡೆಸುತ್ತಿದೆ. ಸಾರ್ವಜನಿಕ ಸಾರಿಗೆ ಉತ್ತೇಜಿಸಿ, ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಈ ಪ್ರಸ್ತಾವನೆ ಸಿದ್ಧಪಡಿಸುತ್ತಿದೆ.
ಉನ್ನತ ಶಿಕ್ಷಣ ಇಲಾಖೆ ಸಚಿವರಾದ ಜಿ.ಟಿ.ದೇವೇಗೌಡ ಅವರು ಕಾಲೇಜಿನ ಕ್ಯಾಂಪಸ್ ಒಳಗೆ ವಿದ್ಯಾರ್ಥಿಗಳ ವಾಹನ ನಿಷೇಧಿಸುವ ಬಗ್ಗೆ ಕಾಲೇಜು ಮಂಡಳಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಭೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು, ಖಾಸಗಿ ಮತ್ತು ಡೀಮ್ಡ್ ವಿ.ವಿ ಪ್ರತಿನಿಧಿಗಳು, ವೃತ್ತಿಪರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಭಾಗಿಯಾಗಲಿದ್ದಾರೆ.
ಇಲಾಖೆ ನೀಡುವ ಪ್ರಸ್ತಾವನೆಯ ಆಧಾರದಲ್ಲಿ ಆಡಳಿತ ಮಂಡಳಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ. ಸದ್ಯ ಈ ವಿಷಯಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪೋಷಕರ ಹಾಗೂ ಪಾಲಕರ ಮನವೊಲಿಸಬೇಕಾಗಿದೆ.
ವಿದ್ಯಾರ್ಥಿಗಳ ವಾಹನಗಳು ಅಪಘಾತಗಳಾಗುತ್ತಿರುವ ಹಿನ್ನೆಲೆಯಲ್ಲಿ ಕಾಲೇಜಿನ ಕ್ಯಾಂಪಸ್ ಒಳಗಡೆ ದ್ವಿಚಕ್ರ ಮತ್ತು ಕಾರುಗಳನ್ನು ನಿರ್ಬಂಧಿಸಲು ಇಲಾಖೆ ಚಿಂತನೆ ನಡೆಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv