ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಎರಡು ದಿನಗಳ ಹಿಂದೆ ಪೊಲೀಸ್ ಸಿಬ್ಬಂದಿಗೆ ಚಾಕು ಹಾಕಿದ್ದ ದುಷ್ಕರ್ಮಿಗೆ ಖಾಕಿ ಪಡೆ ಗುಂಡೇಟು ಕೊಟ್ಟಿದೆ.
ಗುಂಡೇಟು ತಿಂದ ಆರೋಪಿಯನ್ನು ಮರ್ಧಾನ್ ಖಾನ್ ಎಂದು ಗುರುತಿಸಲಾಗಿದೆ. ಈತ ಎರಡು ದಿನಗಳ ಹಿಂದೆ ನಗರದಲ್ಲಿ ಗಲಾಟೆ ಮಾಡಿದ್ದನು. ಪುಂಡ ಯುವಕರನ್ನ ಹಿಡಿಯಲು ಹೋದಾಗ ಪಿಸಿ ನಾಗರಾಜುಗೆ ಚಾಕು ಹಾಕಿ ಈತ ಎಸ್ಕೇಪ್ ಆಗಿದ್ದನು. ಈ ಪ್ರಕರಣ ಸಂಬಂಧ ಪೊಲೀಸರು ಆರೋಪಿ ಬೆನ್ನು ಬಿದ್ದಿದ್ದರು.
ಮುಂಜಾನೆ 4 ಗಂಟೆ ಸುಮಾರಿಗೆ ಆರೋಪಿಯನ್ನು ಹಿಡಿಯಲು ಪೊಲೀಸರು ಹೋದಾಗ ಮತ್ತೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದನು. ಈ ವೇಳೆ ಇನ್ಸ್ಪೆಕ್ಟರ್ ಒಂದು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದರು. ಆದರೂ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆರ್.ಟಿ ನಗರ ಇನ್ಸ್ಪೆಕ್ಟರ್ ಮಿಥುನ್ ಶಿಲ್ಪಿ ಅವರು ಫೈರಿಂಗ್ ಮಾಡಿದ್ದಾರೆ. ಈ ವೇಳೆ ಆರೋಪಿ ಕಾಲಿಗೆ ಎರಡು ಗುಂಡು ಬಿದ್ದಿದ್ದು, ಸದ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ