Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಹೌದು, ನಾನು ಡ್ರಗ್ಸ್ ಸೇವಿಸುತ್ತಿದ್ದೆ, ನಶೆಯಲ್ಲೇ ಶ್ರದ್ಧಾ ಹತ್ಯೆ ಮಾಡಿದೆ: ಅಫ್ತಾಬ್ ತಪ್ಪೊಪ್ಪಿಗೆ

Public TV
Last updated: November 18, 2022 1:38 pm
Public TV
Share
3 Min Read
Aftab
SHARE

-ಶ್ರದ್ಧಾ ಕೂಡಾ ಮದ್ಯ ಸೇವಿಸುತ್ತಿದ್ದಳು
– 35 ಅಲ್ಲ 16 ಪೀಸ್ ಮಾಡಿದ್ದೆ

ನವದೆಹಲಿ: ಶ್ರದ್ಧಾ ವಾಕರ್ (Shraddha Walkar) ಹತ್ಯೆ ಪ್ರಕರಣದಲ್ಲಿ ಪ್ರತಿನಿತ್ಯ ಸ್ಫೋಟಕ ಮಾಹಿತಿಗಳು ಹೊರ ಬರುತ್ತಿದೆ. ಪ್ರಕರಣ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು (Delhi) ಮುಂದೆ ಅಫ್ತಾಬ್ ಹೊಸ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾನೆ. ತನಿಖೆ ವೇಳೆ ಅಫ್ತಾಬ್ (Aftab Amin Poonawala) ಡ್ರಗ್ಸ್‌ಗೆ ಅಡಿಕ್ಟ್ ಆಗಿರುವುದಾಗಿ ಒಪ್ಪಿಕೊಂಡಿದ್ದಾನೆ. ನಿತ್ಯ ಗಾಂಜಾ ಸೇವಿಸುತ್ತಿದ್ದೆ, ನಶೆಯಲ್ಲಿ ತೇಲಾಡುತ್ತಿದ್ದೆ, ಗಾಂಜಾ ಸೇವನೆಯನ್ನು ಶ್ರದ್ಧಾ ವಿರೋಧಿಸಿದ್ದಳು, ಇದೇ ಕಾರಣಕ್ಕೆ ಶ್ರದ್ಧಾ ಜಗಳವಾಡುತ್ತಿದ್ದಳು ಎಂದು ತನಿಖೆ ವೇಳೆ ಅಫ್ತಾಬ್ ಹೇಳಿಕೊಂಡಿದ್ದಾನೆ.

Contents
-ಶ್ರದ್ಧಾ ಕೂಡಾ ಮದ್ಯ ಸೇವಿಸುತ್ತಿದ್ದಳು – 35 ಅಲ್ಲ 16 ಪೀಸ್ ಮಾಡಿದ್ದೆLive Tv

Shraddha Aaftab Ameen Poonawala dehli murder

ಮುಂಬೈನಿಂದ (Mumbai) ದೆಹಲಿಗೆ ಶಿಫ್ಟ್ ಆಗಿದ್ದರಿಂದ ಶ್ರದ್ಧಾ ಮತ್ತು ನನ್ನ ನಡುವೆ ಲಗೇಜ್ ತರುವ ವಿಚಾರಕ್ಕೆ ಮೇ 18 ರಂದು ಜಗಳವಾಗಿತ್ತು. ಮುಂಬೈನಲ್ಲಿ ಮನೆ ಬಳಕೆಯ ಲಗೇಜ್ ಇತ್ತು, ಅದನ್ನು ದೆಹಲಿಗೆ ತರುವ ಬಗ್ಗೆ ಇಬ್ಬರ ನಡುವೆ ಜಗಳವಾಗಿತ್ತು. ಇಬ್ಬರು ನಗದು ಹಣದ ಕೊರತೆ ಎದುರಿಸುತ್ತಿದ್ದರಿಂದ ಮುಂಬೈನಿಂದ ಲಗೇಜ್ ತರುವುದು ಯಾರು ಎಂದು ಜಗಳಮಾಡಿಕೊಂಡಿದ್ದೆವು, ಕೊಲೆಯಾದ ದಿನ ತೀವ್ರ ಮಾತಿನ ಜಕಮಕಿ ನಡೆದಿತ್ತು.

delhi Shraddha murder Aaftab 1

ಜಗಳ ನಡುವೆ ಮನೆಯಿಂದ ಹೊರಗೆ ಹೋಗಿ ಗಾಂಜಾ ಸೇವಿಸಿ ಮನೆಗೆ ವಾಪಸ್ ಆಗಿದ್ದೆ, ಈ ವೇಳೆ ಜಗಳ ಮುಂದುವರಿದು ನಶೆಯಲ್ಲಿ ಕತ್ತು ಹಿಸುಕಿ ಹತ್ಯೆ ಮಾಡಿರುವುದಾಗಿ ಅಫ್ತಾಬ್ ಹೇಳಿದ್ದಾನೆ. ಇದು ನಶೆಯಲ್ಲಿ ನಡೆದ ಘಟನೆಯಾಗಿದ್ದು, ಶ್ರದ್ಧಾ ಹತ್ಯೆ ಮಾಡುವ ಉದ್ದೇಶ ಇರಲಿಲ್ಲ ಎಂದು ಸೈಕೋ ಕಿಲ್ಲರ್ ಅಫ್ತಾಬ್ ಹೇಳಿಕೆ ನೀಡಿದ್ದಾನೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾದವಳು ಮತಾಂತರವಾಗಲಿಲ್ಲ – ಪತ್ನಿಯನ್ನೇ ಕೊಲ್ಲಲು ಮುಂದಾದ ಪತಿ

SHRADDA AFTAB 3

ಶ್ರದ್ಧಾ ಜೊತೆ ಮದ್ಯ ಸೇವಿಸುತ್ತಿದ್ದೆ
ವಿಚಾರಣೆ ವೇಳೆ ಶ್ರದ್ಧಾ ಕೂಡಾ ಮದ್ಯ ಸೇವನೆ ಮಾಡುತ್ತಿದ್ದ ಮಾಹಿತಿಯನ್ನು ಅಫ್ತಾಬ್ ಹಂಚಿಕೊಂಡಿದ್ದಾನೆ. ಹಲವು ಬಾರಿ ಮನೆಯಲ್ಲಿ ಶ್ರದ್ಧಾ ಜೊತೆಯಲ್ಲಿ ಮದ್ಯ ಸೇವನೆ ಮಾಡಿ ಜಗಳ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ.

SHRADDA AFTAB 1

35 ಅಲ್ಲ 16 ಪೀಸ್ ಮಾಡಿದ್ದೆ
ಇದೇ ವೇಳೆ ಅಫ್ತಾಬ್ ತನ್ನ ಹೇಳಿಕೆಯನ್ನು ಬದಲಿಸಿದ್ದು, ಶ್ರದ್ಧಾ ದೇಹವನ್ನು 35 ಭಾಗವಲ್ಲ ಬದಲಿಗೆ 16 ಭಾಗಗಳಾಗಿ ತುಂಡರಿಸಿ ಫ್ರಿಡ್ಜ್‌ನಲ್ಲಿ ತುಂಬಿದ್ದೆ ಎಂದು ಅಫ್ತಾಬ್ ಹೇಳಿದ್ದಾನೆ. ಸೊಂಟದ ಕೆಳಭಾಗದಿಂದ ಕಾಲಿನವರೆಗೆ ಮೂರು ಭಾಗಗಳಾಗಿ ಮಾಡಿದರೆ, ಮೇಲಿನ ದೇಹ ಮತ್ತು ಒಳ ಭಾಗಗಳನ್ನು 13 ಭಾಗಗಳಾಗಿ ಕತ್ತರಿಸಿರುವುದಾಗಿ ಹೇಳಿದ್ದಾನೆ, ತಲೆಯನ್ನು ಗುರುತು ಸಿಗದ ಹಾಗೇ ಸುಟ್ಟು ಎಸೆದಿದ್ದು, ಅದನ್ನು ಕತ್ತಿರಿಸುವ ಪ್ರಯತ್ನ ಮಾಡಿಲ್ಲ ಎಂದು ತಿಳಿಸಿದ್ದಾನೆ.

ಮಂಪರು ಪರೀಕ್ಷೆ ನಿರ್ಧಾರದ ಬಳಿಕ ಅಫ್ತಾಬ್ ತನ್ನ ಹೇಳಿಕೆಯಲ್ಲಿ ಮಹತ್ವದ ಹೇಳಿಕೆ ಬದಲಿಸಿದ್ದು ಇದು ತನಿಖೆಯ ದಿಕ್ಕನ್ನು ಮತ್ತೊಂದು ಕಡೆಗೆ ತಿರುಗಿಸಲಿದೆ. ಈಗಾಗಲೇ ಪೊಲೀಸರು 13 ಭಾಗಗಳನ್ನು ಗುರುತಿಸಿದ್ದು, ತಲೆ ಬರುಡೆಯನ್ನು ಪತ್ತೆ ಹಚ್ಚಿ ಡಿಎನ್‍ಎ ಟೆಸ್ಟ್‌ಗೆ ಕಳುಹಿಸಿದೆ. ಈ ವರದಿಗಾಗಿಯೂ ಪೊಲೀಸರು ಕಾಯುತ್ತಿದ್ದಾರೆ. ಇದನ್ನೂ ಓದಿ: ಭೀಮಾ ಕೋರೆಗಾಂವ್‌ ಪ್ರಕರಣ – ದಲಿತ ಚಿಂತಕ ಆನಂದ್‌ ತೇಲ್ತುಂಬ್ಡೆಗೆ ಬಾಂಬೆ ಹೈಕೋರ್ಟ್ ಜಾಮೀನು

delhi Shraddha murder Aaftab 1

2020ರಲ್ಲೇ ಶ್ರದ್ಧಾ ಮೇಲೆ ತೀವ್ರ ಹಲ್ಲೆ ಮಾಡಿದ್ನಾ ಆಫ್ತಾಬ್?
ಶ್ರದ್ಧಾ ಸೋಶಿಯಲ್ ಮೀಡಿಯಾ ಪರಿಶೀಲನೆ ನಡೆಸಿರುವ ಪೊಲೀಸರಿಗೆ ಹೊಸ ಮಾಹಿತಿ ತಿಳಿದು ಬಂದಿದೆ. ಶ್ರದ್ಧಾ ಅಪ್ಲೋಡ್ ಮಾಡಿದ ಹಳೆಯ ಫೋಟೋದಲ್ಲಿ ಮುಖದ ಮೇಲೆ ಗಾಯ ಪತ್ತೆಯಾಗಿದೆ. ಮುಖದ ಮೇಲೆ ಗಾಯ, ಊದಿಕೊಂಡ ಕಣ್ಣುಗಳು, ಮೂಗಿನ ಮೇಲೆಯೂ ಗಾಯದ ಗುರುತು ಹೊಂದಿರುವ ಫೋಟೋಗಳನ್ನು 2020ರಲ್ಲಿ ಶ್ರದ್ಧಾ ಅಪ್ಲೋಡ್ ಮಾಡಿದ್ದಾಳೆ. ಹೀಗಾಗಿ ಅಫ್ತಾಬ್ ಈ ಹಿಂದೆಯೂ ಶ್ರದ್ಧಾ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ನಾ ಎಂಬ ಅನುಮಾನ ಮೂಡಿದೆ.

176 ಪೊಲೀಸ್ ಠಾಣೆಗಳಿಗೆ ನೋಟಿಸ್
ಶ್ರದ್ಧಾ ಮೃತ ದೇಹ ಪತ್ತೆ ಮಾಡುವ ನಿಟ್ಟಿನಲ್ಲಿ ದೆಹಲಿ ಪೊಲೀಸ್ ಮಹಾ ನಿರ್ದೇಶಕರು ಮೆಹ್ರೋಲಿ ಸುತ್ತಲಿನ 176 ಪೊಲೀಸ್ ಠಾಣೆಗಳಿಗೆ ನೋಟಿಸ್ ನೀಡಿದ್ದಾರೆ. ಮೇ 18 ರಿಂದ ಜುಲೈ ಅಂತ್ಯದ ಅವಧಿಯಲ್ಲಿ ದೆಹಲಿಯಲ್ಲಿ ಪತ್ತೆಯಾದ ಗುರುತು ಸಿಗದ ಹೆಣ್ಣು ದೇಹಗಳ ಮಾಹಿತಿಯನ್ನು ತಿಳಿಸುವಂತೆ ಸೂಚನೆ ನೀಡಿದ್ದಾರೆ. ಈ ಮೂಲಕ ಶ್ರದ್ಧಾಳ ಬಾಕಿ ದೇಹಕ್ಕಾಗಿ ಹುಡುಕಾಟ ತೀವ್ರವಾಗಿದೆ.

ಅಫ್ತಾಬ್ ವಿಚಾರಣೆ ವೇಳೆ ಪದೇ ಪದೇ ಹೇಳಿಕೆ ಬದಲಿಸುತ್ತಿರುವ ಹಿನ್ನೆಲೆ ಪೊಲೀಸರು ಸಾಕಷ್ಟು ಗೊಂದಲಕ್ಕೀಡಾಗಿದ್ದಾರೆ. ಈಗಾಗಲೇ ಮಂಪರು ಪರೀಕ್ಷೆ ನಡೆಸಲು ನ್ಯಾಯಲಯ ಅನುಮತಿ ನೀಡಿದ್ದು, ಅಫ್ತಾಬ್ ಕೂಡಾ ಒಪ್ಪಿಗೆ ಸೂಚಿಸಿದ್ದಾನೆ. ತಜ್ಞರ ಸಮ್ಮುಖದಲ್ಲಿ ಪರೀಕ್ಷೆ ನಡೆಸಲು ಪೊಲೀಸರು ತಯಾರಿ ಮಾಡಿಕೊಳುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:AftabalcoholNew DelhipoliceShraddhaಅಫ್ತಾಬ್ನವದೆಹಲಿಪೊಲೀಸರುಮದ್ಯಶ್ರದ್ಧಾ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
7 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
9 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
8 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
11 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
4 hours ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
4 hours ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
4 hours ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
5 hours ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
5 hours ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?