Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಹೌದು, ನಾನು ಡ್ರಗ್ಸ್ ಸೇವಿಸುತ್ತಿದ್ದೆ, ನಶೆಯಲ್ಲೇ ಶ್ರದ್ಧಾ ಹತ್ಯೆ ಮಾಡಿದೆ: ಅಫ್ತಾಬ್ ತಪ್ಪೊಪ್ಪಿಗೆ

Public TV
Last updated: November 18, 2022 1:38 pm
Public TV
Share
3 Min Read
Aftab
SHARE

-ಶ್ರದ್ಧಾ ಕೂಡಾ ಮದ್ಯ ಸೇವಿಸುತ್ತಿದ್ದಳು
– 35 ಅಲ್ಲ 16 ಪೀಸ್ ಮಾಡಿದ್ದೆ

ನವದೆಹಲಿ: ಶ್ರದ್ಧಾ ವಾಕರ್ (Shraddha Walkar) ಹತ್ಯೆ ಪ್ರಕರಣದಲ್ಲಿ ಪ್ರತಿನಿತ್ಯ ಸ್ಫೋಟಕ ಮಾಹಿತಿಗಳು ಹೊರ ಬರುತ್ತಿದೆ. ಪ್ರಕರಣ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು (Delhi) ಮುಂದೆ ಅಫ್ತಾಬ್ ಹೊಸ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾನೆ. ತನಿಖೆ ವೇಳೆ ಅಫ್ತಾಬ್ (Aftab Amin Poonawala) ಡ್ರಗ್ಸ್‌ಗೆ ಅಡಿಕ್ಟ್ ಆಗಿರುವುದಾಗಿ ಒಪ್ಪಿಕೊಂಡಿದ್ದಾನೆ. ನಿತ್ಯ ಗಾಂಜಾ ಸೇವಿಸುತ್ತಿದ್ದೆ, ನಶೆಯಲ್ಲಿ ತೇಲಾಡುತ್ತಿದ್ದೆ, ಗಾಂಜಾ ಸೇವನೆಯನ್ನು ಶ್ರದ್ಧಾ ವಿರೋಧಿಸಿದ್ದಳು, ಇದೇ ಕಾರಣಕ್ಕೆ ಶ್ರದ್ಧಾ ಜಗಳವಾಡುತ್ತಿದ್ದಳು ಎಂದು ತನಿಖೆ ವೇಳೆ ಅಫ್ತಾಬ್ ಹೇಳಿಕೊಂಡಿದ್ದಾನೆ.

Contents
-ಶ್ರದ್ಧಾ ಕೂಡಾ ಮದ್ಯ ಸೇವಿಸುತ್ತಿದ್ದಳು – 35 ಅಲ್ಲ 16 ಪೀಸ್ ಮಾಡಿದ್ದೆLive Tv

Shraddha Aaftab Ameen Poonawala dehli murder

ಮುಂಬೈನಿಂದ (Mumbai) ದೆಹಲಿಗೆ ಶಿಫ್ಟ್ ಆಗಿದ್ದರಿಂದ ಶ್ರದ್ಧಾ ಮತ್ತು ನನ್ನ ನಡುವೆ ಲಗೇಜ್ ತರುವ ವಿಚಾರಕ್ಕೆ ಮೇ 18 ರಂದು ಜಗಳವಾಗಿತ್ತು. ಮುಂಬೈನಲ್ಲಿ ಮನೆ ಬಳಕೆಯ ಲಗೇಜ್ ಇತ್ತು, ಅದನ್ನು ದೆಹಲಿಗೆ ತರುವ ಬಗ್ಗೆ ಇಬ್ಬರ ನಡುವೆ ಜಗಳವಾಗಿತ್ತು. ಇಬ್ಬರು ನಗದು ಹಣದ ಕೊರತೆ ಎದುರಿಸುತ್ತಿದ್ದರಿಂದ ಮುಂಬೈನಿಂದ ಲಗೇಜ್ ತರುವುದು ಯಾರು ಎಂದು ಜಗಳಮಾಡಿಕೊಂಡಿದ್ದೆವು, ಕೊಲೆಯಾದ ದಿನ ತೀವ್ರ ಮಾತಿನ ಜಕಮಕಿ ನಡೆದಿತ್ತು.

delhi Shraddha murder Aaftab 1

ಜಗಳ ನಡುವೆ ಮನೆಯಿಂದ ಹೊರಗೆ ಹೋಗಿ ಗಾಂಜಾ ಸೇವಿಸಿ ಮನೆಗೆ ವಾಪಸ್ ಆಗಿದ್ದೆ, ಈ ವೇಳೆ ಜಗಳ ಮುಂದುವರಿದು ನಶೆಯಲ್ಲಿ ಕತ್ತು ಹಿಸುಕಿ ಹತ್ಯೆ ಮಾಡಿರುವುದಾಗಿ ಅಫ್ತಾಬ್ ಹೇಳಿದ್ದಾನೆ. ಇದು ನಶೆಯಲ್ಲಿ ನಡೆದ ಘಟನೆಯಾಗಿದ್ದು, ಶ್ರದ್ಧಾ ಹತ್ಯೆ ಮಾಡುವ ಉದ್ದೇಶ ಇರಲಿಲ್ಲ ಎಂದು ಸೈಕೋ ಕಿಲ್ಲರ್ ಅಫ್ತಾಬ್ ಹೇಳಿಕೆ ನೀಡಿದ್ದಾನೆ. ಇದನ್ನೂ ಓದಿ: ಪ್ರೀತಿಸಿ ಮದುವೆಯಾದವಳು ಮತಾಂತರವಾಗಲಿಲ್ಲ – ಪತ್ನಿಯನ್ನೇ ಕೊಲ್ಲಲು ಮುಂದಾದ ಪತಿ

SHRADDA AFTAB 3

ಶ್ರದ್ಧಾ ಜೊತೆ ಮದ್ಯ ಸೇವಿಸುತ್ತಿದ್ದೆ
ವಿಚಾರಣೆ ವೇಳೆ ಶ್ರದ್ಧಾ ಕೂಡಾ ಮದ್ಯ ಸೇವನೆ ಮಾಡುತ್ತಿದ್ದ ಮಾಹಿತಿಯನ್ನು ಅಫ್ತಾಬ್ ಹಂಚಿಕೊಂಡಿದ್ದಾನೆ. ಹಲವು ಬಾರಿ ಮನೆಯಲ್ಲಿ ಶ್ರದ್ಧಾ ಜೊತೆಯಲ್ಲಿ ಮದ್ಯ ಸೇವನೆ ಮಾಡಿ ಜಗಳ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ.

SHRADDA AFTAB 1

35 ಅಲ್ಲ 16 ಪೀಸ್ ಮಾಡಿದ್ದೆ
ಇದೇ ವೇಳೆ ಅಫ್ತಾಬ್ ತನ್ನ ಹೇಳಿಕೆಯನ್ನು ಬದಲಿಸಿದ್ದು, ಶ್ರದ್ಧಾ ದೇಹವನ್ನು 35 ಭಾಗವಲ್ಲ ಬದಲಿಗೆ 16 ಭಾಗಗಳಾಗಿ ತುಂಡರಿಸಿ ಫ್ರಿಡ್ಜ್‌ನಲ್ಲಿ ತುಂಬಿದ್ದೆ ಎಂದು ಅಫ್ತಾಬ್ ಹೇಳಿದ್ದಾನೆ. ಸೊಂಟದ ಕೆಳಭಾಗದಿಂದ ಕಾಲಿನವರೆಗೆ ಮೂರು ಭಾಗಗಳಾಗಿ ಮಾಡಿದರೆ, ಮೇಲಿನ ದೇಹ ಮತ್ತು ಒಳ ಭಾಗಗಳನ್ನು 13 ಭಾಗಗಳಾಗಿ ಕತ್ತರಿಸಿರುವುದಾಗಿ ಹೇಳಿದ್ದಾನೆ, ತಲೆಯನ್ನು ಗುರುತು ಸಿಗದ ಹಾಗೇ ಸುಟ್ಟು ಎಸೆದಿದ್ದು, ಅದನ್ನು ಕತ್ತಿರಿಸುವ ಪ್ರಯತ್ನ ಮಾಡಿಲ್ಲ ಎಂದು ತಿಳಿಸಿದ್ದಾನೆ.

ಮಂಪರು ಪರೀಕ್ಷೆ ನಿರ್ಧಾರದ ಬಳಿಕ ಅಫ್ತಾಬ್ ತನ್ನ ಹೇಳಿಕೆಯಲ್ಲಿ ಮಹತ್ವದ ಹೇಳಿಕೆ ಬದಲಿಸಿದ್ದು ಇದು ತನಿಖೆಯ ದಿಕ್ಕನ್ನು ಮತ್ತೊಂದು ಕಡೆಗೆ ತಿರುಗಿಸಲಿದೆ. ಈಗಾಗಲೇ ಪೊಲೀಸರು 13 ಭಾಗಗಳನ್ನು ಗುರುತಿಸಿದ್ದು, ತಲೆ ಬರುಡೆಯನ್ನು ಪತ್ತೆ ಹಚ್ಚಿ ಡಿಎನ್‍ಎ ಟೆಸ್ಟ್‌ಗೆ ಕಳುಹಿಸಿದೆ. ಈ ವರದಿಗಾಗಿಯೂ ಪೊಲೀಸರು ಕಾಯುತ್ತಿದ್ದಾರೆ. ಇದನ್ನೂ ಓದಿ: ಭೀಮಾ ಕೋರೆಗಾಂವ್‌ ಪ್ರಕರಣ – ದಲಿತ ಚಿಂತಕ ಆನಂದ್‌ ತೇಲ್ತುಂಬ್ಡೆಗೆ ಬಾಂಬೆ ಹೈಕೋರ್ಟ್ ಜಾಮೀನು

delhi Shraddha murder Aaftab 1

2020ರಲ್ಲೇ ಶ್ರದ್ಧಾ ಮೇಲೆ ತೀವ್ರ ಹಲ್ಲೆ ಮಾಡಿದ್ನಾ ಆಫ್ತಾಬ್?
ಶ್ರದ್ಧಾ ಸೋಶಿಯಲ್ ಮೀಡಿಯಾ ಪರಿಶೀಲನೆ ನಡೆಸಿರುವ ಪೊಲೀಸರಿಗೆ ಹೊಸ ಮಾಹಿತಿ ತಿಳಿದು ಬಂದಿದೆ. ಶ್ರದ್ಧಾ ಅಪ್ಲೋಡ್ ಮಾಡಿದ ಹಳೆಯ ಫೋಟೋದಲ್ಲಿ ಮುಖದ ಮೇಲೆ ಗಾಯ ಪತ್ತೆಯಾಗಿದೆ. ಮುಖದ ಮೇಲೆ ಗಾಯ, ಊದಿಕೊಂಡ ಕಣ್ಣುಗಳು, ಮೂಗಿನ ಮೇಲೆಯೂ ಗಾಯದ ಗುರುತು ಹೊಂದಿರುವ ಫೋಟೋಗಳನ್ನು 2020ರಲ್ಲಿ ಶ್ರದ್ಧಾ ಅಪ್ಲೋಡ್ ಮಾಡಿದ್ದಾಳೆ. ಹೀಗಾಗಿ ಅಫ್ತಾಬ್ ಈ ಹಿಂದೆಯೂ ಶ್ರದ್ಧಾ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ನಾ ಎಂಬ ಅನುಮಾನ ಮೂಡಿದೆ.

176 ಪೊಲೀಸ್ ಠಾಣೆಗಳಿಗೆ ನೋಟಿಸ್
ಶ್ರದ್ಧಾ ಮೃತ ದೇಹ ಪತ್ತೆ ಮಾಡುವ ನಿಟ್ಟಿನಲ್ಲಿ ದೆಹಲಿ ಪೊಲೀಸ್ ಮಹಾ ನಿರ್ದೇಶಕರು ಮೆಹ್ರೋಲಿ ಸುತ್ತಲಿನ 176 ಪೊಲೀಸ್ ಠಾಣೆಗಳಿಗೆ ನೋಟಿಸ್ ನೀಡಿದ್ದಾರೆ. ಮೇ 18 ರಿಂದ ಜುಲೈ ಅಂತ್ಯದ ಅವಧಿಯಲ್ಲಿ ದೆಹಲಿಯಲ್ಲಿ ಪತ್ತೆಯಾದ ಗುರುತು ಸಿಗದ ಹೆಣ್ಣು ದೇಹಗಳ ಮಾಹಿತಿಯನ್ನು ತಿಳಿಸುವಂತೆ ಸೂಚನೆ ನೀಡಿದ್ದಾರೆ. ಈ ಮೂಲಕ ಶ್ರದ್ಧಾಳ ಬಾಕಿ ದೇಹಕ್ಕಾಗಿ ಹುಡುಕಾಟ ತೀವ್ರವಾಗಿದೆ.

ಅಫ್ತಾಬ್ ವಿಚಾರಣೆ ವೇಳೆ ಪದೇ ಪದೇ ಹೇಳಿಕೆ ಬದಲಿಸುತ್ತಿರುವ ಹಿನ್ನೆಲೆ ಪೊಲೀಸರು ಸಾಕಷ್ಟು ಗೊಂದಲಕ್ಕೀಡಾಗಿದ್ದಾರೆ. ಈಗಾಗಲೇ ಮಂಪರು ಪರೀಕ್ಷೆ ನಡೆಸಲು ನ್ಯಾಯಲಯ ಅನುಮತಿ ನೀಡಿದ್ದು, ಅಫ್ತಾಬ್ ಕೂಡಾ ಒಪ್ಪಿಗೆ ಸೂಚಿಸಿದ್ದಾನೆ. ತಜ್ಞರ ಸಮ್ಮುಖದಲ್ಲಿ ಪರೀಕ್ಷೆ ನಡೆಸಲು ಪೊಲೀಸರು ತಯಾರಿ ಮಾಡಿಕೊಳುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:AftabalcoholNew DelhipoliceShraddhaಅಫ್ತಾಬ್ನವದೆಹಲಿಪೊಲೀಸರುಮದ್ಯಶ್ರದ್ಧಾ
Share This Article
Facebook Whatsapp Whatsapp Telegram

Cinema Updates

ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories
vishnuvardhan karnataka ratna
ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ
Cinema Latest Main Post Sandalwood
Thalaivan Thalaivii 03
ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!
Cinema Latest South cinema
Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood

You Might Also Like

Bhupesh Baghels son Chaitanya arrest
Latest

ಅಕ್ರಮ ಹಣ ವರ್ಗಾವಣೆ ಕೇಸ್‌ – ಮಾಜಿ ಸಿಎಂ ಭೂಪೇಶ್‌ ಬಘೇಲ್‌ ಪುತ್ರ ಬಂಧನ

Public TV
By Public TV
18 minutes ago
Mysuru Chamundi Hills Shobha Karandlaje
Districts

ಚಾಮುಂಡಿ ಬೆಟ್ಟ ಏರಿ ದೇವಿ ದರ್ಶನ ಪಡೆದ ಶೋಭಾ ಕರಂದ್ಲಾಜೆ

Public TV
By Public TV
29 minutes ago
M.P.Renukacharya high command
Latest

ಬಿಜೆಪಿ ಬಂಡಾಯ ನಾಯಕರ ವಿರುದ್ಧ ವರಿಷ್ಠರಿಗೆ ದೂರು ನೀಡಿದ ಎಂ.ಪಿ ರೇಣುಕಾಚಾರ್ಯ ನೇತೃತ್ವದ ಟೀಂ

Public TV
By Public TV
39 minutes ago
12 year old girl dies after getting caught in Chudidhar dupatta while playing jokali Bhatkal
Districts

ಜೋಕಾಲಿ ಆಡುವ ವೇಳೆ ಚೂಡಿದಾರ್ ವೇಲ್ ಸಿಲುಕಿ 12ರ ಬಾಲಕಿ ಸಾವು

Public TV
By Public TV
55 minutes ago
Raichuru Maski
Districts

ಮಸ್ಕಿಯಲ್ಲಿ 4000 ವರ್ಷಗಳ ಹಿಂದೆಯೂ ಇತ್ತು ಜನವಸತಿ – ಸಂಶೋಧನೆಯಿಂದ ಬಯಲು

Public TV
By Public TV
56 minutes ago
accident bengaluru
Bengaluru City

ಬೆಂಗಳೂರು| ಕೆಲಸಕ್ಕೆ ಹೋಗುತ್ತಿದ್ದ ಯುವತಿ ಅಪಘಾತಕ್ಕೆ ಬಲಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?