ನವದೆಹಲಿ: ಕ್ರೂರವಾಗಿ ಹತ್ಯೆಗೀಡಾಗಿದ್ದ ಶ್ರದ್ಧಾ ವಾಕರ್ (Shraddha Walker) ಪ್ರಕರಣ ಸಿಬಿಐಗೆ (Central Bureau of Investigation) ವರ್ಗಾವಣೆಯಾಗುವ ಸಾಧ್ಯತೆಗಳಿದೆ. ಈ ಬಗ್ಗೆ ದೆಹಲಿ (Delhi) ಪೊಲೀಸರು ಸುಳಿವು ಕೊಟ್ಟಿದ್ದು ಯಾವುದೇ ಕ್ಷಣದಲ್ಲಾದರೂ ಅಧಿಕೃತ ಆದೇಶ ಹೊರ ಬರುವ ಸಾಧ್ಯತೆಗಳಿದೆ ಎಂದು ಹೇಳಲಾಗುತ್ತಿದೆ.
ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ದೇಶದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ. ದೇಶದ್ಯಾಂತ ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಿದೆ, ಶೀಘ್ರ ತನಿಖೆಗೆ ಒತ್ತಡ ಕೇಳಿ ಬರುತ್ತಿದೆ. ಈ ಹಿನ್ನೆಲೆ ದೆಹಲಿ ಸರ್ಕಾರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ಬೈಕ್ ಅಡ್ಡ ಹಾಕಿದ ಪೊಲೀಸ್ರು – ನಡುರಸ್ತೆಯಲ್ಲಿ ಗನ್ ಹಿಡಿದು ಓಡುತ್ತಾ, ಶಾಲೆಗೆ ನುಗ್ಗಿದ ಸರಗಳ್ಳರು
ಈಗಾಗಲೇ ಸಿಬಿಐ ಅಧಿಕಾರಿಗಳು ಮೆಹ್ರೋಲಿ ಕಾಡಿನಲ್ಲಿ ಪತ್ತೆಯಾದ ಶ್ರದ್ಧಾ ಮೃತ ದೇಹದ ತುಂಡುಗಳನ್ನು ಪರಿಶೀಲನೆ ಮಾಡಿದ್ದಾರೆ. ಪ್ರಕರಣದ ಪ್ರಾಥಮಿಕ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದು ಅಧಿಕೃತ ಆದೇಶದ ಬಳಿಕ ಅಧಿಕಾರಿಗಳು ತನಿಖೆ ಆರಂಭಿಸುವ ಸಾಧ್ಯತೆಗಳಿದೆ.
ಮೇ 18 ರಂದು ದೆಹಲಿಯ ಮೆಹ್ರೋಲಿಯಲ್ಲಿ ಶ್ರದ್ಧಾ ವಾಕರ್ (26) ಅನ್ನು ಆಕೆಯ ಗೆಳೆಯ ಅಫ್ತಾಬ್ ಹತ್ಯೆ ಮಾಡಿದ್ದ, ಹತ್ಯೆಯ ಬಳಿಕ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಕಾಡಿನಲ್ಲಿ ಎಸೆದಿದ್ದ, ಶ್ರದ್ಧಾ ತಂದೆ ನಾಪತ್ತೆ ದೂರು ದಾಖಲಿಸಿದ ಬಳಿಕ ಕಳೆದ ಶನಿವಾರ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: Dating App ಬಳಸೋ ಮುನ್ನ ಎಚ್ಚರ- ಒಂಟಿ ಜೀವಗಳನ್ನೇ ಟಾರ್ಗೆಟ್ ಮಾಡಿ ಮೋಸ