ಶೂಟಿಂಗ್ ವೇಳೆ ನಟ ರಕ್ಷಿತ್ ಶೆಟ್ಟಿ ಪ್ರಾಣಾಪಾಯದಿಂದ ಪಾರು!

Public TV
1 Min Read
rakshith setty shooting

ಬೆಂಗಳೂರು: ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಚಿತ್ರಿಕರಣದ ವೇಳೆ ಕುದುರೆ ಮೇಲಿನಿಂದ ಬಿದ್ದು, ಪ್ರಾಣಾಪಾಯದಿಂದ ಪಾರಾಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶ್ರೀಮನ್ನಾರಾಯಣ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ. 10 ದಿನಗಳಿಂದ ಕಂಠೀರವ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಈ ವೇಳೆ ರಕ್ಷಿತ್ ಶೆಟ್ಟಿ ಕುದುರೆ ಮೇಲೆ ಕುಳಿತು ಸವಾರಿ ಮಾಡುತ್ತಿರುತ್ತಾರೆ. ಅದೇ ಸಂದರ್ಭದಲ್ಲಿ ಕುದುರೆ ಏಕಾಏಕಿ ಕೆನೆದು ನಿಂತಿದೆ. ಆಗ ಆಯಾ ತಪ್ಪಿ ರಕ್ಷಿತ್ ಶೆಟ್ಟಿ ಹಾಗೂ ಕುದುರೆ ನೆಲದ ಮೇಲೆ ಹಿಮ್ಮುಖವಾಗಿ ಬಿದ್ದಿದ್ದಾರೆ. ಘಟನೆಯಲ್ಲಿ ಯಾವುದೇ ಅಪಾಯಗಳು ಸಂಭವಿಸಿಲ್ಲ.

Rakshit Shetty fall down 1

ಈ ಘಟನೆ ವೇಳೆ ಎಲ್ಲರೂ ಅವರವರ ಕೆಲಸದಲ್ಲಿ ಬ್ಯುಸಿಯಾಗಿದ್ದರು. ಕುದುರೆ ನೋಡಿಕೊಳ್ಳುವವರು ಬಳಿ ಇದ್ದರೂ ಏಕಾಏಕಿ ಕೆನೆದು ನಿಂತಿದ್ದು ಯಾಕೆ ಎನ್ನುವುದು ತಿಳಿದು ಬಂದಿಲ್ಲ. ಕುದುರೆಯಿಂದ ಬಿದ್ದರೂ ರಕ್ಷಿತ್ ಶೆಟ್ಟಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು ಎಂದು ಚಿತ್ರತಂಡ ತಿಳಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *