ಬಾಲಿವುಡ್ ಖ್ಯಾತತಾರೆ ಕಂಗನಾ ರಣಾವತ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಎಮರ್ಜೆನ್ಸಿ ಸಿನಿಮಾದ ಒಂದೊಂದು ಪಾತ್ರಗಳು ರಿವಿಲ್ ಆಗುತ್ತಿವೆ. ಕಂಗನಾ ರಣಾವತ್ ಈ ಸಿನಿಮಾದಲ್ಲಿ ಇಂದಿರಾ ಗಾಂಧಿ ಅವರ ಪಾತ್ರವನ್ನು ನಿರ್ವಹಿಸುತ್ತಿದ್ದರೆ, ಅನುಪಮ್ ಖೇರ್ ಅವರು ಜಯಪ್ರಕಾಶ್ ನಾರಾಯಣ್ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಮತ್ತೊಂದು ಪ್ರಮುಖ ಪಾತ್ರದ ಕಲಾವಿದರ ಘೋಷಣೆ ಆಗಿದ್ದು, ಅಟಲ್ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಶ್ರೇಯಸ್ ತಲ್ಪಡೆ ನಟಿಸಲಿದ್ದಾರೆ.
ಇದು ತರ್ತುಪರಿಸ್ಥಿತಿಯ ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಸಿನಿಮಾ. ಎಮರ್ಜೆನ್ಸಿ ವೇಳೆಯಲ್ಲಿ ಭಾರತದ ರಾಜಕೀಯ ರಂಗದಲ್ಲಿದ್ದ ಪ್ರಮುಖ ರಾಜಕಾರಣಿಗಳೆಲ್ಲ ಈ ಸಿನಿಮಾದಲ್ಲಿ ಪಾತ್ರವಾಗಿ ಇರಲಿದ್ದಾರಂತೆ. ಈ ಅಷ್ಟೂ ಪಾತ್ರಗಳು ಕಂಗನಾ ರಣಾವತ್ ನಿರ್ವಹಿಸುತ್ತಿರುವ ಇಂದಿರಾ ಗಾಂಧಿ ಪಾತ್ರದ ಸುತ್ತ ಗಿರಕಿ ಹೊಡೆಯಲಿವೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ರಾಕೇಶ್ ಬಾಪಟ್ ಜೊತೆ ಬ್ರೇಕಪ್ ಮಾಡಿಕೊಂಡ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ
ಈ ಸಿನಿಮಾದ ಮತ್ತೊಂದು ವಿಶೇಷತೆ ಅಂದರೆ, ಪ್ರಮುಖ ಪಾತ್ರ ಮಾಡುವುದರ ಜೊತೆಗೆ ಕಂಗನಾ, ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದಾರೆ. ಹಾಗಾಗಿ ಅವರೇ ಕಲಾವಿದರ ಆಯ್ಕೆಯನ್ನೂ ಮಾಡುತ್ತಿದ್ದಾರೆ. ತಮ್ಮನ್ನು ಅಟಲ್ ಬಿಹಾರಿ ವಾಜಪೇಯಿ ಪಾತ್ರಕ್ಕೆ ಆಯ್ಕೆ ಮಾಡಿದ್ದಕ್ಕೆ ಶ್ರೇಯಸ್ ತಲ್ಪಡೆ ಅವರು ಕಂಗನಾ ರಣಾವತ್ ಗೆ ಕೃತಜ್ಞತೆ ಸಲ್ಲಿಸಿದ್ದಾರೆ.