Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರುತಿ ಹರಿಹರನ್- ಸರ್ಜಾ ಮೀಟೂ ಕೇಸ್ : ನಟಿಗೆ ಪೊಲೀಸ್ ನೋಟಿಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಶ್ರುತಿ ಹರಿಹರನ್- ಸರ್ಜಾ ಮೀಟೂ ಕೇಸ್ : ನಟಿಗೆ ಪೊಲೀಸ್ ನೋಟಿಸ್

Cinema

ಶ್ರುತಿ ಹರಿಹರನ್- ಸರ್ಜಾ ಮೀಟೂ ಕೇಸ್ : ನಟಿಗೆ ಪೊಲೀಸ್ ನೋಟಿಸ್

Public TV
Last updated: June 9, 2023 11:33 am
Public TV
Share
3 Min Read
shruti hariharan
SHARE

ಕನ್ನಡ ಚಿತ್ರರಂಗದ ಹೆಸರಾಂತ ನಟಿ ಶ್ರುತಿ ಹರಿಹರನ್ (Shruti Hariharan) ಮೀಟೂ ಕೇಸ್ ಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ದಕ್ಷಿಣದ ಖ್ಯಾತ ನಟ ಅರ್ಜುನ್ ಸರ್ಜಾ ಮೇಲೆ ಶ್ರುತಿ ಹರಿಹರನ್ ಮೀಟೂ (Metoo) ಆರೋಪ ಮಾಡಿದ್ದರು. ಅದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಸೂಕ್ತ ಸಾಕ್ಷಿಗಳು ಇಲ್ಲ ಎನ್ನುವ ಕಾರಣಕ್ಕಾಗಿ ಜನವರಿ 2022ರಂದು ಬಿ ರಿಪೋರ್ಟ್ (B Report) ಸಲ್ಲಿಸಿದ್ದರು. ಈ ರಿಪೋರ್ಟ್ ವಿರುದ್ಧ ಶ್ರುತಿ ಮತ್ತೆ ಕೋರ್ಟ್ ಮೆಟ್ಟಿಲು ಏರಿದ್ದರು.

sruthi hariharan 1

ಕಬ್ಬನ್ ಪಾರ್ಕ್ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಚಾಲೇಂಜ್ ಮಾಡಿದ್ದ ಶ್ರುತಿ ಹರಿಹರನ್ ಗೆ ಈಗ ಮತ್ತೆ ಪೊಲೀಸರು ನೋಟಿಸ್ (Notice) ನೀಡಿದ್ದಾರೆ. ಪೊಲೀಸರಿಗೆ ಸಾಕ್ಷ್ಯಾಧಾರಗಳನ್ನು ನೀಡುವಂತೆ ನೋಟಿಸ್ ನಲ್ಲಿ ತಿಳಿಸಿದ್ದಾರೆ. ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಬಳಿಕ ಈ ನೋಟಿಸ್  ನೀಡಲಾಗಿದೆ.

shruthi hariharan

ಏನಿದು ಪ್ರಕರಣ ?

ಶ್ರುತಿ ಹರಿಹರನ್ ವಿಸ್ಮಯ (Vismaya) ಚಿತ್ರದ ಚಿತ್ರೀಕರಣದ ವೇಳೆ ನಟ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಮೀಟೂ ವೇದಿಕೆಯಲ್ಲಿ ಹೇಳಿಕೊಂಡಿದ್ದರು. ಶ್ರುತಿ ಆರೋಪ ಮಾಡುತ್ತಿದ್ದಂತೆ ಕೆಲ ಸಂಘಟನೆಗಳು, ನಟರು, ಕಲಾವಿದರು ನಟಿಯ ಪರ ನಿಂತರೆ, ಬಹುತೇಕ ಹಿರಿಯ ಕಲಾವಿದರು ಅರ್ಜುನ್ ಸರ್ಜಾ ಪರ ಬ್ಯಾಟ್ ಬೀಸಿದ್ದರು. ಇತ್ತ ಅರ್ಜುನ್ ಸರ್ಜಾ (Arjun Sarja) ವಿರುದ್ಧ ದೂರು ಕೇಳಿ ಬರುತ್ತಿದ್ದಂತೆ ಮಾವ, ಹಿರಿಯ ನಟ ಕಲಾ ತಪಸ್ವಿ ರಾಜೇಶ್ ಮೊದಲು ಫಿಲ್ಮ್ ಚೇಂಬರ್ ನಲ್ಲಿ ದೂರು ದಾಖಲಿಸಿದ್ದರು.

sruthi hariharan 3 1

ದೂರು ದಾಖಲಾದ ಬಳಿಕ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಚಲನಚಿತ್ರ ಮಂಡಳಿ ಸಹ ಶ್ರುತಿ ಹರಿಹರನ್ ನೇರವಾಗಿ ಮಾಧ್ಯಮಗಳ ಮುಂದೆ ಹೋಗಬಾರದಿತ್ತು ಎಂದು ಅಸಮಾಧಾನ ಹೊರಹಾಕಿತ್ತು. ನಂತರ ರೆಬೆಲ್ ಸ್ಟಾರ್ ಅಂಬರೀಶ್ ಅವರ ಮಧ್ಯಸ್ಥಿತಿಕೆಯಲ್ಲಿ ಫಿಲ್ಮ್ ಚೇಂಬರ್ ನಲ್ಲಿ ಶೃತಿ ಹರಿಹರನ್ ಮತ್ತು ಅರ್ಜುನ್ ಸರ್ಜಾ ಮಧ್ಯೆ ಸಂಧಾನ ಸಭೆ ನಡೆಯಿತು. ಇದನ್ನೂ ಓದಿ:ನಟ ಚಿರಂಜೀವಿ ಸರ್ಜಾ 3 ನೇ ವರ್ಷದ ಪುಣ್ಯತಿಥಿ

sruthi hariharan 2 2

`ವಿಸ್ಮಯ’ ಕುರಿತು ಹೇಳಿಕೆ ನೀಡುವ ವೇಳೆ ಮಧ್ಯ ಪ್ರವೇಶ ಮಾಡಿದ ನಟ ಅರ್ಜುನ ಸರ್ಜಾ ಅವರು, ಸಿನಿಮಾ ವೇಳೆ ನಾನು ಯಾವುದೇ ರೀತಿ ಕೆಟ್ಟದಾಗಿ ವರ್ತನೆ ಮಾಡಿಲ್ಲ. ಅಲ್ಲದೇ ಯಾವುದೇ ಡಿನ್ನರ್, ಹೋಟೆಲ್, ರೆಸಾರ್ಟ್, ರೂಮ್‍ಗೆ ಕರೆದಿಲ್ಲ. 35 ವರ್ಷದಿಂದ ಚಿತ್ರರಂಗದಲ್ಲಿ ಇದ್ದು, ಒಂದು ಕಪ್ಪು ಚುಕ್ಕೆ ನನ್ನ ಮೇಲಿಲ್ಲ. ಆದರೆ ಶ್ರುತಿ ಮಾಡಿರುವ ಆರೋಪದಿಂದ ನನಗೂ, ನನ್ನ ಕುಟುಂಬಸ್ಥರಿಗೂ ಸಾಕಷ್ಟು ನೋವಾಗಿದೆ ಎಂದು ಅಂಬರೀಶ್ ಮುಂದೆ ಹೇಳಿಕೊಂಡಿದ್ದರು. ಅಂಬರೀಶ್ ನಡೆಸಿದ ಸಂಧಾನ ವಿಫಲವಾಗುತ್ತಿದ್ದಂತೆಯೇ ಶ್ರುತಿ  ಕೋರ್ಟ್ ಮೆಟ್ಟಿಲು ಹತ್ತಿದ್ದರು. ಇದೆಲ್ಲವೂ ನಡೆದದ್ದು 2018ರಂದು.

sruthi hariharan 1

ಶ್ರುತಿ ನೀಡಿದ ದೂರಿನ ಅನ್ವಯ ಪೊಲೀಸರು ತನಿಖೆ ನಡೆಸಿದ್ದರು. ಲೈಂಗಿಕ ಕಿರುಕುಳ ಆಗಿದೆ ಎನ್ನಲಾದ ಸ್ಥಳಗಳಿಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದರು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಜನವರಿ 2022ರಂದು ಕಬ್ಬನ್ ಪಾರ್ಕ್ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟನ್ನು ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ಅಂಗೀಕರಿಸಿತ್ತು. ಅರ್ಜುನ್ ಸರ್ಜಾ ವಿರುದ್ಧ ಅಷ್ಟೆಲ್ಲಾ ಆರೋಪ ಮಾಡಿದ್ದ ನಟಿ ಶೃತಿ ಹರಿಹರನ್ ಕೂಡ ಪೊಲೀಸರ ಬಿ ರಿಪೋರ್ಟ್‍ಗೆ ಆಕ್ಷೇಪಣೆ ಸಲ್ಲಿಸಿಲ್ಲ. ಹೀಗಾಗಿ ಕೋರ್ಟ್ ಬಿ-ರಿಪೋರ್ಟ್ ಅಂಗೀಕರಿಸಿತ್ತು.

sruthi hariharan 4

ತನಿಖೆ ಏನೆಲ್ಲ ಆಗಿತ್ತು?

ನಟಿ ಶ್ರುತಿ ಹರಿಹರನ್ ಮೀಟೂ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಿಳಿದಿದ್ದ ಪೊಲೀಸರಿಗೆ ಯುಬಿ ಸಿಟಿಯ ಸೆಕ್ಯೂರಿಟಿ ಗಾರ್ಡ್‍ಗಳು ತಲೆನೋವಾಗಿ ಪರಿಣಮಿಸಿದ್ದರು. ಹೌದು. ನಟಿ ಶ್ರುತಿ ಹರಿಹರನ್ ಅವರು ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಕಬ್ಬನ್ ಪಾರ್ಕ್ ಪೊಲೀಸರು, ಮೊದಲಿಗೆ ನಟ ಅರ್ಜುನ್ ಸರ್ಜಾ, ವಿಸ್ಮಯ ಚಿತ್ರದ ನಿರ್ದೇಶಕ, ನಿರ್ಮಾಪಕ ಸೇರಿದಂತೆ ಸಾಕಷ್ಟು ಜನರನ್ನು ಮೀಟೂ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಹೇಳಿಕೆಗಳನ್ನು ಪಡೆದುಕೊಂಡಿದ್ದರು.

 

ವಿಸ್ಮಯ ಚಿತ್ರದ ಚಿತ್ರೀಕರಣದ ವೇಳೆ ನನಗೆ ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ರು. ಯುಬಿ ಸಿಟಿಯಲ್ಲಿ ರೂಮ್ ನಲ್ಲಿ ಒಬ್ಬನೇ ಇದೇನಿ, ಬಾ ಸ್ವಲ್ಪ ಹೊತ್ತು ಕಾಲ ಕಳೆಯೋಣ ಅಂತಾ ನನ್ನನ್ನು ಕರೆದ್ರು ಎಂದು ನಟಿ ಶ್ರುತಿ ಹರಿಹರನ್ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಆ ವೇಳೆ ಯುಬಿ ಸಿಟಿಯಲ್ಲಿ ಕೆಲಸ ಮಾಡ್ತಿದ್ದ ಸೆಕ್ಯೂರಿಟಿ ಗಾರ್ಡ್ ಗಳನ್ನು ವಿಚಾರಣೆ ನಡೆಸೋಕೆ ಹೋದ ಪೊಲೀಸರಿಗೆ ಶಾಕ್ ಆಗಿತ್ತು. ಆ ಘಟನೆ ನಡೆದ ನಂತರ ಹತ್ತಾರು ಸೆಕ್ಯೂರಿಟಿ ಗಾರ್ಡ್‍ಗಳು ಕೆಲಸಬಿಟ್ಟಿರೋದಲ್ಲದೇ, ಸೆಕ್ಯೂರಿಟಿ ಏಜೆನ್ಸಿಯನ್ನೇ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಅಲ್ಲಿದ್ದ ಕೆಲ ಸಿಬ್ಬಂದಿ ಕೂಡ ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಬಾಯಿ ಬಿಟ್ಟಿರಲಿಲ್ಲ.

TAGGED:Arjun SarjaB-reportMeToonoticeShruti HariharanVismayaಅರ್ಜುನ್ ಸರ್ಜಾನೋಟಿಸ್ಬಿ ರಿಪೋರ್ಟ್‌ಮೀಟೂವಿಸ್ಮಯಶ್ರುತಿ ಹರಿಹರನ್
Share This Article
Facebook Whatsapp Whatsapp Telegram

Cinema news

santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories
arvind reddy threat
ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ
Bengaluru City Cinema Latest Main Post Sandalwood
again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows

You Might Also Like

Latest

ಇಸ್ಲಾಮಾಬಾದ್‌ ಮಸೀದಿಯಲ್ಲಿ 36 ಅಲ್ಲ 200 ಸಾವು – ಹೊಣೆ ಹೊತ್ತುಕೊಂಡ ಇಸ್ಲಾಮಿಕ್‌ ಸ್ಟೇಟ್‌

Public TV
By Public TV
1 minute ago
China conducted nuclear test days after Galwan clash
Latest

ಗಲ್ವಾನ್ ಘರ್ಷಣೆ ನಡೆದ 7 ದಿನದ ಬಳಿಕ ಚೀನಾದಿಂದ ರಹಸ್ಯ ಅಣು ಪರೀಕ್ಷೆ!

Public TV
By Public TV
1 hour ago
Mahalakshmi Layout Body Builder Suicide
Bengaluru City

ಕೈ ಕೊಟ್ಟ ಪ್ರೇಯಸಿ – ಡೆತ್ ನೋಟ್ ಬರೆದಿಟ್ಟು ಬಾಡಿ ಬಿಲ್ಡರ್ ಆತ್ಮಹತ್ಯೆ

Public TV
By Public TV
1 hour ago
Mohammad Siraj
Cricket

ಸ್ಪೇನ್‌ ಟಿಕೆಟ್‌ ಬುಕ್‌ ಮಾಡಿದ್ದ ಸಿರಾಜ್‌ ಮುಂಬೈನಲ್ಲಿ ಲ್ಯಾಂಡ್‌! – ಕೊನೆ ಕ್ಷಣದಲ್ಲಿ ಭಾರತವನ್ನು ಸೇರಿದ್ದು ಹೇಗೆ?

Public TV
By Public TV
2 hours ago
Ballari Tekkalakote Excavation Human Fossil Found
Bellary

ಬಳ್ಳಾರಿಯಲ್ಲಿ ಉತ್ಖನನ ವೇಳೆ 3,000 ವರ್ಷಗಳಷ್ಟು ಹಳೆಯ ಮಾನವನ ಪಳೆಯುಳಿಕೆ ಪತ್ತೆ

Public TV
By Public TV
2 hours ago
Young women cause a ruckus in the middle of the road drinking alcohol hulimavu bengaluru
Bengaluru City

ಎಣ್ಣೆ ಏಟಲ್ಲಿ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ – ಹಾದಿಬೀದಿಯಲ್ಲಿ ಯುವತಿಯರ ರಂಪಾಟ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?