ಶುಭಮನ್‌ ಗಿಲ್‌ರನ್ನ ಭಾರತಕ್ಕೆ ವಾಪಸ್‌ ಕಳಿಸಲು ಶಿಸ್ತಿನ ಕೊರತೆಯೇ ಕಾರಣವಾ? – ಕೋಚ್‌ ಹೇಳಿದ್ದೇನು?

Public TV
2 Min Read
Shubman Gill

ಫ್ಲೋರಿಡಾ: ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ (T20 World Cup) ಭಾರತ ತಂಡದ ಲೀಗ್‌ ಸುತ್ತಿನ ಪಂದ್ಯಗಳು ಮುಕ್ತಾಯಗೊಂಡಿದ್ದು, ಅಗ್ರಸ್ಥಾನದೊಂದಿಗೆ ಸೂಪರ್‌-8 ಸುತ್ತಿಗೆ ಪದಾರ್ಪಣೆ ಮಾಡಿದೆ. ಮುಂದಿನ ಪಂದ್ಯಕ್ಕಾಗಿ ವೆಸ್ಟ್‌ ಇಂಡೀಸ್‌ಗೆ ಪ್ರಯಾಣಿಸಲಿದೆ. ಲೀಗ್‌ ಸುತ್ತಿನ ಪಂದ್ಯಗಳ ಮುಕ್ತಾಯದ ಹಿನ್ನೆಲೆ ಭಾರತ ತಂಡಕ್ಕೆ ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದ ಶುಭಮನ್‌ ಗಿಲ್‌ (Shubman Gill) ಹಾಗೂ ಅವೇಶ್‌ ಖಾನ್‌ (Avesh Khan) ಭಾರತಕ್ಕೆ ಮರಳಲು ಸಿದ್ಧವಾಗಿದ್ದಾರೆ.

ಶುಭಮನ್‌ ಗಿಲ್‌ ಅವರು ಭಾರತಕ್ಕೆ ಮತ್ತೆ ಮರಳುತ್ತಿರುವುದಕ್ಕೆ ಅವರ ಅಶಿಸ್ತಿನ ವರ್ತನೆಯೇ ಕಾರಣ ಎಂಬ ವದಂತಿಗಳು ಜಾಲತಾಣದಲ್ಲಿ ಹುಟ್ಟಿಕೊಂಡಿದ್ದು ಇದಕ್ಕೆ ಬ್ಯಾಟಿಂಗ್‌ ಕೋಚ್‌ ರಾಥೋರ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ವಿಶ್ವಕಪ್‌ನಿಂದ ಪಾಕ್‌ ಔಟ್‌ – ಬಾಬರ್‌, ರಿಜ್ವಾನ್‌ನನ್ನ ತಂಡದಿಂದ ಕಿತ್ತೊಗೆಯುವಂತೆ ಆಗ್ರಹ

Shubman Gill 1

ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ರಾಥೋಡ್‌, ಸೂಪರ್‌-8 ಪಂದ್ಯಗಳಗಾಗಿ ಟೀಂ ಇಂಡಿಯಾದ ಮೀಸಲು ಆಟಗಾರರಾಗಿ ರಿಂಕು ಸಿಂಗ್‌, ಖಲೀಲ್‌ ಅಹ್ಮದ್‌ ಮಾತ್ರ ಕೆರಿಬಿಯನ್‌ ನಾಡಿಗೆ ಪ್ರಯಾಣಿಸಲಿದ್ದಾರೆ. ಅವೇಶ್‌ ಖಾನ್‌ ಮತ್ತು ಶುಭಮನ್‌ ಗಿಲ್‌ ಅವರನ್ನು ಮರಳಿ ಭಾರತಕ್ಕೆ ಮರಳಿ ಕಳುಹಿಸುತ್ತಿರುವುದು ಅಶಿಸ್ತಿನ ವರ್ತನೆಯಿಂದಲ್ಲ, ಇದು ಪೂರ್ವನಿಯೋಜಿತ ಕ್ರಮ. ಕೆರಿಬಿಯನ್‌ನಲ್ಲಿ ಕೇವಲ ಇಬ್ಬರು ಮೀಸಲು ಆಟಗಾರರ ಸೇರ್ಪಡೆಗೆ ಮಾತ್ರ ಅವಕಾಶವಿದೆ. ಇದನ್ನು ಮೊದಲೇ ನಿರ್ಣಯಿಸಲಾಗಿತ್ತು ಎಂದು ತಿಳಿಸಿದ್ದಾರೆ.

Rohit Sharma

ಇನ್ನೂ ಗಿಲ್‌ ಅವರನ್ನು ತವರಿಗೆ ವಾಪಸ್‌ ಕಳುಹಿಸುತ್ತಿರುವ ಬಗ್ಗೆ ವರದಿಗಳು ಹೊರಬೀಳುತ್ತಿದ್ದಂತೆ ಇನ್‌ಸ್ಟಾಗ್ರಾಮ್‌ನಲ್ಲಿ ರೋಹಿತ್‌ ಶರ್ಮಾ ಅವರನ್ನು ಗಿಲ್‌ ಅನ್‌ಫಾಲೋ ಮಾಡಿದ್ದಾರೆ ಎಂಬುದು ನೆಟ್ಟಿಗರ ಗಮನ ಸೆಳೆದಿದೆ. ಈ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿದೆ. ಇದನ್ನೂ ಓದಿ: ಬುಮ್ರಾ ಬೆಂಕಿ ಬೌಲಿಂಗ್‌, ಭಾರತಕ್ಕೆ ರೋಚಕ 6 ರನ್‌ ಜಯ – ಗುಂಪು ಹಂತದಲ್ಲೇ ಪಾಕ್‌ ಹೊರಕ್ಕೆ?

ಕೆನಡಾ-ಭಾರತದ ನಡುವೆ ಶನಿವಾರ ನಡೆಯಬೇಕಿದ್ದ ಟಿ20 ವಿಶ್ವಕಪ್‌ ಪಂದ್ಯವು ಮಳೆಯಿಂದ ರದ್ದಾಯಿತು. ಇದರೊಂದಿಗೆ ಉಭಯ ತಂಡಗಳ ಲೀಗ್‌ ಸುತ್ತಿನ ಪಂದ್ಯವು ಮುಕ್ತಾಯಗೊಂಡಿತು. ಎ ಗುಂಪಿನಲ್ಲಿ ಭಾರತ ಮತ್ತು ಅಮೆರಿಕ ತಂಡಗಳು ಸೂಪರ್‌-8 ಸುತ್ತಿಗೆ ಅರ್ಹತೆ ಪಡೆದುಕೊಂಡವು. ಜೂನ್ 20ರ ಗುರುವಾರ ಬಾರ್ಬಡೋಸ್‌ನಲ್ಲಿ ಸೂಪರ್-8 ಹಂತದ ತನ್ನ ಮೊದಲ ಪಂದ್ಯದಲ್ಲಿ ಭಾರತವು ಅಫ್ಘಾನಿಸ್ತಾನ ವಿರುದ್ಧ ಸೆಣಸಲಿದೆ. ಇದನ್ನೂ ಓದಿ: ‌250 ಕೋಟಿ ರೂ. ವೆಚ್ಚದಲ್ಲಿ ಐದೇ ತಿಂಗಳಲ್ಲಿ ನಿರ್ಮಿಸಿದ್ದ ನಸ್ಸೌ ಕೌಂಟಿ ಸ್ಟೇಡಿಯಂ ನೆಲಸಮ?

Share This Article